AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಫಾರ್ಮ್ಯಾಟ್ ಬಗ್ಗೆ ಭವ್ಯಾಗೆ ಅಸಮಾಧಾನ; ಕಿಚ್ಚನ ಕ್ಲಾಸ್ ಫಿಕ್ಸ್?

ಬಿಗ್ ಬಾಸ್ ಕನ್ನಡದಲ್ಲಿ ಭವ್ಯಾ ಗೌಡ ಅವರು ಆಟದ ಫಾರ್ಮ್ಯಾಟ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ಟಾಸ್ಕ್‌ನಲ್ಲಿ ಅವರ ಅಂಕಗಳನ್ನು ಇನ್ನೊಬ್ಬ ಸ್ಪರ್ಧಿ ಕಸಿದುಕೊಂಡಿದ್ದರಿಂದ ಈ ಅಸಮಾಧಾನ ಉಂಟಾಗಿದೆ. ಧನರಾಜ್ ಗೆದ್ದ ಟಾಸ್ಕ್‌ನಲ್ಲಿ ಭವ್ಯಾ ಅವರ ಅಂಕಗಳನ್ನು ಕಡಿಮೆ ಮಾಡಲಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ. ಇದರಿಂದಾಗಿ ಅವರು ಬಿಗ್ ಬಾಸ್ ಫಾರ್ಮ್ಯಾಟ್ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ.

ಬಿಗ್ ಬಾಸ್ ಫಾರ್ಮ್ಯಾಟ್ ಬಗ್ಗೆ ಭವ್ಯಾಗೆ ಅಸಮಾಧಾನ; ಕಿಚ್ಚನ ಕ್ಲಾಸ್ ಫಿಕ್ಸ್?
ಭವ್ಯಾ
ರಾಜೇಶ್ ದುಗ್ಗುಮನೆ
|

Updated on: Jan 15, 2025 | 7:27 AM

Share

ಬಿಗ್ ಬಾಸ್ ಫಾರ್ಮ್ಯಾಟ್ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಆಟ ಯಾವಾಗ ಹೇಗೆ ಬೇಕಾದರೂ ತಿರುಗಬಹುದು. ಆಟ ಇದೇ ರೀತಿ ಇರುತ್ತದೆ ಎಂದು ಊಹೀಸೋದು ಕಷ್ಟ. ಇದು ಆಡುವ ಆಟಗಾರರಿಗೆ ಹಾಗೂ ವೀಕ್ಷಕರಿಗೆ ಗೊತ್ತಿರುತ್ತದೆ. ಆದಾಗ್ಯೂ ಕೆಲವು ಸಂದರ್ಭದಲ್ಲಿ ಸ್ಪರ್ಧಿಗಳು ಬಿಗ್ ಬಾಸ್ ಬಗ್ಗೆ ಅಸಮಾಧಾನ ಹೊರಹಾಕಿದ ಉದಾಹರಣೆ ಇದೆ. ಈಗ ಭವ್ಯಾ ಗೌಡ ಅವರು ಇದಕ್ಕೆ ಹೊಸ ಸೇರ್ಪಡೆ.

ಈ ಮೊದಲು ಬಿಗ್ ಬಾಸ್​ಗೆ ಬಂದ ಅನೇಕ ಸ್ಪರ್ಧಿಗಳು ಆಟದ ವಿರುದ್ಧ ಅಸಮಾಧಾನ ಹೊರಹಾಕಿದ್ದು ಇದೆ. ಆರ್ಯವರ್ಧನ್ ಗುರೂಜಿ, ಈ ಸೀಸನ್​ನ ಲಾಯರ್ ಜಗದೀಶ್ ಹೀಗೆ ಅನೇಕರು ಈ ಸಾಲಿನಲ್ಲಿ ಇದ್ದಾರೆ. ಆದರೆ, ಭವ್ಯಾ ಕೂಡ ಈ ಸಾಲಿಗೆ ಸೇರಿಕೊಳ್ಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

‘ಬಿಗ್ ಬಾಸ್’ ಮಧ್ಯವಾರದ ಎಲಿಮಿನೇಷ್​ನಿಂದ ಬಚಾವ್ ಆಗಲು ಸ್ಪರ್ಧಿಗಳಿಗೆ ಬಿಗ್ ಬಾಸ್ ವಿವಿಧ ಟಾಸ್ಕ್ ನೀಡಿದ್ದರು. ಗೆದ್ದ ಸ್ಪರ್ಧಿಗೆ 100 ಅಂಕ, ಎರಡನೇ ಬಂದ ಸ್ಪರ್ಧಿಗೆ 50 ಹಾಗೂ ಮೂರನೇ ಬಂದ ಸ್ಪರ್ಧಿಗೆ 25 ಅಂಕ ಸಿಕ್ಕಿತ್ತು. ಕೊನೆಯ ಟಾಸ್ಕ್​ನಲ್ಲಿ ಬಿಗ್ ಬಾಸ್ ಒಂದು ಅವಕಾಶ ನೀಡಿದರು. ಯಾರು ಕೊನೆಯ ಟಾಸ್ಕ್​ ಗೆಲ್ಲುತ್ತಾರೋ ಅವರಿಗೆ 100 ಅಂಕಗಳ ಜೊತೆ ಯಾವುದಾದರೂ ಒಂದು ಸ್ಪರ್ಧಿಯ ಅಂಕದಿಂದ ಶೇ.50 ಪಾಯಿಂಟ್ಸ್​ ಕಸಿದುಕೊಳ್ಳುವ ಅವಕಾಶ ಇತ್ತು.

ಆ ಟಾಸ್ಕ್​ನ ಧನರಾಜ್ ಅವರು ಗೆದ್ದರು. ಜೊತೆಗೆ ಭವ್ಯಾ ಅವರಿಂದ ಶೇ.50 ಪಾಯಿಂಟ್ಸ್ ಕಸಿದುಕೊಂಡರು. ಇದು ಭವ್ಯಾ ಅಸಮಾಧಾನಕ್ಕೆ ಕಾರಣ ಆಯಿತು. ಅವರು ಈ ಫಾರ್ಮ್ಯಾಟ್ ಬಗ್ಗೆ ತ್ರಿವಿಕ್ರಂ ಬಳಿ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಮತ್ತೆ ಒಂದಾದ ಮಂಜು, ಮೋಕ್ಷಿತಾ, ಗೌತಮಿ; ಇದೇನು ಹೊಸ ಡ್ರಾಮಾ? 

‘ಇವರ ಫಾರ್ಮ್ಯಾಟ್ ಇಷ್ಟ ಆಗಿಲ್ಲ. ಮೈ ಕೈ ಹರಿದುಕೊಂಡು ಆಡಿದ್ದು ನಾವು, ಇನ್ಯಾರಿಗೋ ಪಾಯಿಂಟ್ಸ್ ಹೋಯಿತು. ನನನಗೆ ಪೂರ್ತಿ ಪಾಯಿಂಟ್ಸ್ ಬೇಕು. ಕನ್​ಫ್ಯೂಸ್ ಮಾಡಿ ಬಿಡ್ತೀರಾ. ಆ ಮೇಲೆ ನೀವು ಕನ್​ಫ್ಯೂಸ್ ಆದ್ರಿ ಅಂತೀರಾ’ ಎಂದು ಭವ್ಯಾ ಬಿಗ್ ಬಾಸ್ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಈ ವಾರಾಂತ್ಯದಲ್ಲಿ ಸುದೀಪ್ ಈ ವಿಚಾರ ಮಾತನಾಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?