AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚನ ಚಪ್ಪಾಳೆ ಪಡೆದ ಭವ್ಯಾ; ಮತ್ತೆ ಬದಲಾವಣೆ ತಂದ ಸುದೀಪ್

ಭವ್ಯಾ ಗೌಡ ಅವರು ಕಿಚ್ಚನ ಚಪ್ಪಾಳೆ ಪಡೆದು ಸಂಭ್ರಮಿಸಿದ್ದಾರೆ. ಈ ವಾರದ ಅವರ ಆಟವನ್ನು ಸುದೀಪ್ ಮೆಚ್ಚಿಕೊಂಡಿದ್ದಾರೆ. ಕೆಲ ವಾರದಿಂದ ಸುದೀಪ್ ಅವರು ಚಪ್ಪಾಳೆ ನೀಡುವುದನ್ನು ನಿಲ್ಲಿಸಿದ್ದರು. ಆದರೆ ಈಗ ಮತ್ತೆ ಅವರು ಚಪ್ಪಾಳೆ ನೀಡಲು ಆರಂಭಿಸಿದ್ದಕ್ಕಾಗಿ ಎಲ್ಲರಿಗೂ ಖುಷಿ ಆಗಿದೆ. ಬಿಗ್ ಬಾಸ್ ಆಟದಲ್ಲಿ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಶೀಘ್ರವೇ ಫಿನಾಲೆ ಬರಲಿದೆ.

ಕಿಚ್ಚನ ಚಪ್ಪಾಳೆ ಪಡೆದ ಭವ್ಯಾ; ಮತ್ತೆ ಬದಲಾವಣೆ ತಂದ ಸುದೀಪ್
Bhavya Gowda
ಮದನ್​ ಕುಮಾರ್​
|

Updated on: Dec 22, 2024 | 10:09 PM

Share

ಬಿಗ್ ಬಾಸ್​ ಸ್ಪರ್ಧಿಗಳಿಗೆ ‘ಕಿಚ್ಚನ ಚಪ್ಪಾಳೆ’ ಸಿಕ್ಕರೆ ಸಿಕ್ಕಾಪಟ್ಟೆ ಖುಷಿ ಆಗುತ್ತದೆ. ಆದರೆ ಕಳೆದ ಕೆಲವು ವಾರಗಳಿಂದ ಸುದೀಪ್ ಅವರು ಚಪ್ಪಾಳೆ ನೀಡುತ್ತಿರಲಿಲ್ಲ. ಈ ಸೀಸನ್​ನಲ್ಲಿ ಕೆಲವು ಸ್ಪರ್ಧಿಗಳು ನಡೆದುಕೊಂಡ ರೀತಿ ಸುದೀಪ್ ಅವರಿಗೆ ಇಷ್ಟ ಆಗಿರಲಿಲ್ಲ. ಆ ಕಾರಣದಿಂದಲೇ ಅವರು ಚಪ್ಪಾಳೆ ನೀಡುವುದನ್ನು ನಿಲ್ಲಿಸಿದ್ದರು. ಆದರೆ ಕಳೆದ ವಾರ ಭವ್ಯಾ ಗೌಡ ಒಂದು ಮನವಿ ಮಾಡಿದ್ದರು. ದಯವಿಟ್ಟು ಕಿಚ್ಚನ ಚಪ್ಪಾಳೆ ನೀಡಿ ಎಂದು ಅವರು ಕೋರಿಕೊಂಡಿದ್ದರು. ಹಾಗಾಗಿ, ಮತ್ತೆ ಈ ವಾರದಿಂದ ಸುದೀಪ್ ಅವರು ಚಪ್ಪಾಳೆ ನೀಡಲು ಆರಂಭಿಸಿದ್ದಾರೆ. ಈ ವಾರ ಭವ್ಯಾ ಗೌಡ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ.

ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಎರಡನೇ ಬಾರಿ ಕ್ಯಾಪ್ಟನ್ ಆಗಿದ್ದಾರೆ. ಈ ಸರಿ ಅವರು ಯಾರದ್ದೇ ಬೆಂಬಲ ಪಡೆಯದೇ, ಸ್ವಂತ ಶ್ರಮದಿಂದ ಕ್ಯಾಪ್ಟನ್ ಪಟ್ಟವನ್ನು ಪಡೆದುಕೊಂಡಿದ್ದಾರೆ. ಅಲ್ಲದೇ, ಇಡೀ ವಾರ ಗಟ್ಟಿಯಾಗಿ ತಮ್ಮ ನಿಲುವು ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಅವರ ಆಟವನ್ನು ಸುದೀಪ್ ಮೆಚ್ಚಿಕೊಂಡು ಚಪ್ಪಾಳೆ ನೀಡಿದ್ದಾರೆ.

ಹಾಗಂತ ಈ ವಾರದಲ್ಲಿ ಭವ್ಯಾ ಅವರ ಆಟ ಶೇ.100ರಷ್ಟು ಚೆನ್ನಾಗಿತ್ತು ಎಂದು ಅರ್ಥವಲ್ಲ. ತಕ್ಕಮಟ್ಟಿಗೆ ಅವರು ಸುಧಾರಿಸಿಕೊಂಡಿದ್ದಾರೆ ಎಂಬ ಕಾರಣವನ್ನು ಕೊಟ್ಟು ಸುದೀಪ್ ಅವರು ಮೆಚ್ಚುಗೆ ಸೂಚಿಸಿದ್ದಾರೆ. ‘ಚಪ್ಪಾಳೆ ಕೊಡಲು ಮತ್ತೆ ಆರಂಭಿಸಿ ಅಂತ ನಾನು ಕಳೆದ ವಾರ ರಿಕ್ವೆಸ್ಟ್​ ಮಾಡಿದ್ದೆ. ಅದು ನನಗೇ ಸಿಕ್ಕಿದ್ದಕ್ಕೆ ಖುಷಿ ಆಗಿದೆ’ ಎಂದು ಭವ್ಯಾ ಗೌಡ ಅವರು ಬಿಗ್ ಬಾಸ್​ ಮನೆಯ ಒಳಗಿರುವ ಟಿವಿ ಬಳಿ ಬಂದು ಸುದೀಪ್​ ಅವರ ಫ್ರೇಮ್​ ಪಕ್ಕದಲ್ಲಿ ಫೋಟೋ ಕ್ಲಿಕ್ಕಿಸಿಕೊಂಡರು.

ಇದನ್ನೂ ಓದಿ: ‘ಈ ಗಾಂಚಲಿ ನಮ್ಮತ್ರ ಬೇಡಮ್ಮ’: ಹನುಮಂತಗೆ ಮೊದಲ ಬಾರಿ ಸುದೀಪ್ ಕ್ಲಾಸ್

ಈ ವಾರ ತ್ರಿವಿಕ್ರಮ್ ಅವರಿಗೆ ಕಿಚ್ಚನ ಚಪ್ಪಾಳೆ ಸಿಗಬಹುದು ಎಂದು ಕೆಲವರು ಭಾವಿಸಿದ್ದರು. ಅಲ್ಲದೇ ಮೋಕ್ಷಿತಾಗೆ ಕೂಡ ಚಪ್ಪಾಳೆ ಸಿಗಬಹುದು ಎಂದು ಊಹಿಸಲಾಗಿತ್ತು. ಆದರೆ ಅಂತಿಮವಾಗಿ ಭವ್ಯಾ ಗೌಡ ಅವರು ಈ ಮೆಚ್ಚುಗೆಗೆ ಪಾತ್ರರಾದರು. ಭಾನುವಾರದ (ಡಿ.22) ಶೋನಲ್ಲಿ ಸುದೀಪ್ ಅವರು ತುಂಬ ಲವಲವಿಕೆಯಿಂದ ಎಲ್ಲರನ್ನೂ ನಗಿಸಿದರು. ಒಟ್ಟಾರೆ ಎಪಿಸೋಡ್​ನಲ್ಲಿ ಸಾಕಷ್ಟು ಫನ್​ ತುಂಬಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ