AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಂನೇ ಭವ್ಯಾಗೆ ಗಿಫ್ಟ್ ಆಗಿ ಕೊಟ್ಟ ಸುದೀಪ್; ಜೊತೆಗೆ ಸಿಕ್ತು ಒಂದು ಎಚ್ಚರಿಕೆ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಮತ್ತು ತ್ರಿವಿಕ್ರಂ ಅವರ ನಡುವೆ ಆಪ್ತ ಸ್ನೇಹ ಬೆಳೆದಿದೆ. ವರ್ಷಾಂತ್ಯದ ಗಿಫ್ಟ್ ಎಕ್ಸ್‌ಚೇಂಜ್‌ನಲ್ಲಿ ಭವ್ಯಾ ತ್ರಿವಿಕ್ರಂಗೆ ಉಡುಗೊರೆ ನೀಡಿದರು. ಸುದೀಪ್ ಅವರು ಈ ಬಾಂಧವ್ಯದ ಬಗ್ಗೆ ಗಮನಿಸಿ, ಭವಿಷ್ಯದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡಿದರು.

ತ್ರಿವಿಕ್ರಂನೇ ಭವ್ಯಾಗೆ ಗಿಫ್ಟ್ ಆಗಿ ಕೊಟ್ಟ ಸುದೀಪ್; ಜೊತೆಗೆ ಸಿಕ್ತು ಒಂದು ಎಚ್ಚರಿಕೆ
ತ್ರಿವಿಕ್ರಂ, ಭವ್ಯಾ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 30, 2024 | 8:51 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಹಾಗೂ ತ್ರಿವಿಕ್ರಂ ಅವರ ಬಾಂಡಿಗೆ ಹೆಚ್ಚುತ್ತಲೇ ಇದೆ. ಇಬ್ಬರ ಮಧ್ಯೆ ಒಳ್ಳೆಯ ಆಪ್ತತೆ ಬೆಳೆದಿದೆ. ಈ ಬಾಂಡಿಗ್ ಸುದೀಪ್ ಗಮನಕ್ಕೂ ಬಂದಿದೆ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಸುದೀಪ್ ಅವರು ಭವ್ಯಾಗೆ ತ್ರಿವಿಕ್ರಂ ಅವರನ್ನೇ ಗಿಫ್ಟ್ ಆಗಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಮುಂದೆ ನಡೆಯಬಹುದಾದ ಘಟನೆ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ವರ್ಷಾಂತ್ಯ ಬಂದಿದೆ. ಹೀಗಾಗಿ, ಪರಸ್ಪರ ಗಿಫ್ಟ್​ ಎಕ್ಸ್​ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಸುದೀಪ್ ನೀಡಿದರು. ತಮ್ಮ ಬಳಿ ಇರುವ ಅತ್ಯಮೂಲ್ಯ ವಸ್ತುವನ್ನು ಮತ್ತೊಬ್ಬರಿಗೆ ಕೊಡಬೇಕು. ಆಗ ಭವ್ಯಾ ಗೌಡ ಅವರು ತ್ರಿವಿಕ್ರಂನ ಹೊಗಳಿದರು. ‘ಅವರು ನೋಡೋಕೆ ಒರಟನಂತೆ ಕಂಡರೂ ತುಂಬಾನೇ ಮೃದು. ಅವರ ಆ ಗುಣ ಇಷ್ಟ. ಅವರು ಬಂದು ಕಣ್ಣೀರು ಒರೆಸುತ್ತಾರೆ’ ಎಂದು ಭವ್ಯಾ ಹೊಗಳುತ್ತಾ ಶರ್ಟ್​ನ ಗಿಫ್ಟ್ ಕೊಟ್ಟರು.

ಈ ವೇಳೆ ಸುದೀಪ್ ಅವರು ಒಂದು ಎಚ್ಚರಿಕೆ ಕೊಟ್ಟರು. ‘ತ್ರಿವಿಕ್ರಂನ ನಾನು ಹತ್ತಿರದಿಂದ ಕಂಡಿದ್ದೇನೆ. ಅವರು ಸಿಕ್ಕಿದ್ರು ಅಂತ ನಿಮ್ಮ ಜೊತೆಗಿದ್ದವರನ್ನು ಬಿಟ್ಟುಕೊಳ್ಳಬೇಡಿ. ಆಮೇಲೆ ಮುಂದೆ ಕಣ್ಣೀರು ಒರೆಸೋಕೆ ಅವರೇ ಬೇಕಾಗುತ್ತದೆ’ ಎಂದು ಕಿವಿಮಾತು ಹೇಳಿದರು. ಇದನ್ನು ಭವ್ಯಾ ಅವರು ಹಾಸ್ಯದ ರೂಪದಲ್ಲೇ ಸ್ವೀಕರಿಸಿದರು. ನಂತರ ತ್ರಿವಿಕ್ರಂ ಅವರು ಭವ್ಯಾಗೆ ಜೆರ್ಸಿ ಕೊಟ್ಟರು.

ಇದನ್ನೂ ಓದಿ: ಬಿಗ್ ಬಾಸ್ ವೇದಿಕೆಯಲ್ಲಿ ಸುದೀಪ್​ ಕಡೆಯಿಂದ ಚೈತ್ರಾಗೆ ಸಿಕ್ತು ಎಂದೂ ಮರೆಯಲಾಗದ ಗಿಫ್ಟ್

ಎಲ್ಲರೂ ಗಿಫ್ಟ್ ಎಕ್ಸ್​ಚೇಂಜ್ ಮಾಡಿಕೊಂಡ ಬಳಿಕ ಚೈತ್ರಾ ಹಾಗೂ ರಜತ್​ಗೆ ಮಾತ್ರ ಯಾವ ಉಡುಗೊರೆಯೂ ಸಿಕ್ಕಿಲ್ಲ. ಈ ವೇಳೆ ಸುದೀಪ್ ಅವರು ತಮ್ಮ ಕಿವಿಗೆ ಹಾಕಿದ್ದ ಚಿಕ್ಕದಾದ ರಿಂಗ್​ನ ಚೈತ್ರಾ ಹಾಗೂ ರಜತ್​ಗೆ ಕಳುಹಿಸಿದರು. ಈ ವೇಳೆ ಭವ್ಯಾ ಗೌಡ ಅವರು, ‘ನಮಗೂ ಏನಾದರೂ ಉಡುಗೊರೆ ಕೊಡಿ’ ಎಂದು ಕೋರಿದರು. ಆಗ ಸುದೀಪ್, ‘ತ್ರಿವಿಕ್ರಂನ ಗಿಫ್ಟ್ ಆಗಿ ಕೊಟ್ಟಿದೀವಲ್ಲ’ ಎಂದರು. ಇದನ್ನು ಕೇಳಿ ಎಲ್ಲರೂ ನಕ್ಕರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!