Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ’ ಧಾರವಾಹಿಯಲ್ಲಿ ಕಿರಣ್ ರಾಜ್​ಗೆ ನಾಯಕಿ ಆದ ‘ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ

Bhavya Gowda: ಕಿರಣ್ ರಾಜ್ ಅವರು ‘ಕರ್ಣ’ ಹೆಸರಿನ ಧಾರಾವಾಹಿ ಮಾಡುತ್ತಾ ಇದ್ದಾರೆ. ಈ ಧಾರಾವಾಹಿಗೆ ನಾಯಕಿ ಯಾರು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಕೊನೆಗೂ ಅದಕ್ಕೆ ಉತ್ತರ ಸಿಕ್ಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿಗೆ ಈ ಅವಕಾಶ ಸಿಕ್ಕಿದೆ ಅನ್ನೋದು ವಿಶೇಷ.

‘ಕರ್ಣ’ ಧಾರವಾಹಿಯಲ್ಲಿ ಕಿರಣ್ ರಾಜ್​ಗೆ ನಾಯಕಿ ಆದ ‘ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ
Bhavya Gowda
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Apr 04, 2025 | 6:54 PM

ಕಿರಣ್ ರಾಜ್ (Kiran Raj) ಅವರು ಕಲರ್ಸ್​ ಕನ್ನಡದಲ್ಲಿ ಈ ಮೊದಲು ಪ್ರಸಾರ ಕಂಡ ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಹೆಸರಿನ ಪಾತ್ರ ಮಾಡಿ ಗಮನ ಸೆಳೆದಿದ್ದು ಗೊತ್ತೇ ಇದೆ. ಈ ಮಧ್ಯೆ ಕಿರಣ್ ರಾಜ್ ಅವರು ಸಿನಿಮಾ ಕೆಲಸಗಳನ್ನು ಮಾಡಿದ್ದರು. ಈಗ ಕಿರಣ್ ರಾಜ್ ಅವರು ‘ಕರ್ಣ’ ಹೆಸರಿನ ಧಾರಾವಾಹಿ ಮಾಡುತ್ತಾ ಇದ್ದಾರೆ. ಈ ಧಾರಾವಾಹಿಗೆ ನಾಯಕಿ ಯಾರು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಕೊನೆಗೂ ಅದಕ್ಕೆ ಉತ್ತರ ಸಿಕ್ಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿಗೆ ಈ ಅವಕಾಶ ಸಿಕ್ಕಿದೆ ಅನ್ನೋದು ವಿಶೇಷ.

ಕಲರ್ಸ್ ಕನ್ನಡದಲ್ಲಿ ಈ ಮೊದಲು ‘ಗೀತಾ’ ಧಾರಾವಾಹಿ ಮಾಡಿದ್ದ ಭವ್ಯಾ ಗೌಡ ಅವರು ಈಗ ಜೀ ಕನ್ನಡದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕರ್ಣ’ ಧಾರಾವಾಹಿಗೆ ಇವರೇ ನಾಯಕಿ ಎಂದು ವರದಿ ಆಗಿದೆ! ಈ ಧಾರಾವಾಹಿ ಸಂದರ್ಭದ ಶೂಟಿಂಗ್​ ವಿಡಿಯೋಗಳು ಎಲ್ಲ ಕಡೆಗಳಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ಇದರಲ್ಲಿ ಭವ್ಯಾ ಗೌಡ ಅವರು ನಟಿಸುತ್ತಿರುವುದು ಇದೆ. ಇನ್​​ಸ್ಟಾಗ್ರಾಮ್​ ರಿಲ್ಸ್​ನಲ್ಲಿ ವಿಡಿಯೋ ಹರಿದಾಡುತ್ತಿದೆ.

ಭವ್ಯಾ ಗೌಡ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದವರು. ‘ಗೀತಾ’ ಧಾರಾವಾಹಿಯಲ್ಲಿ ಗೀತಾ ಪಾತ್ರ ಮಾಡಿ ಗಮನ ಸೆಳೆದರು. ಈ ಧಾರಾವಾಹಿ ಯಶಸ್ವಿ ಆದ ಬಳಿಕ ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಅವಕಾಶ ಸಿಕ್ಕಿತು. ಈ ಅವಕಾಶವನ್ನು ಅವರು ಸದ್ಬಳಕೆ ಮಾಡಿದರು. ಅವರು ‘ಬಾಯ್ಸ್ vs ಗರ್ಲ್ಸ್​’ ಶೋನಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಅನಾರೋಗ್ಯದ ಕಾರಣ ಅವರು ಇಲ್ಲಿಗೆ ಹೋಗಲಿಲ್ಲ.

ಇದನ್ನೂ ಓದಿ:ಜೀ ಕನ್ನಡದಲ್ಲಿ ‘ಕರ್ಣ’ ಧಾರಾವಾಹಿ ಯಾವಾಗಿನಿಂದ; ಕೊನೆ ಆಗಲಿರೋ ಧಾರಾವಾಹಿ ಯಾವುದು?

ಈಗ ಅವರಿಗೆ ‘ಕರ್ಣ’ ಧಾರಾವಾಹಿಗೆ ಭವ್ಯಾ ಗೌಡ ನಾಯಕಿ ಆಗಿದ್ದಾರೆ. ಕಿರಣ್ ರಾಜ್ ಜೊತೆ ಅವರು ತೆರೆ ಹಂಚಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಭವ್ಯಾ ಗೌಡ ಅವರಿಗೆ ಸಂಬಂಧಿಸಿದ ಪ್ರೋಮೋ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಧಾರಾವಾಹಿಯ ರಿಲೀಸ್ ದಿನಾಂಕ ಇನ್ನಷ್ಟೇ ರಿವೀಲ್ ಆಗಬೇಕಿದೆ.  ಜೀ ಕನ್ನಡದಲ್ಲಿ ಧಾರಾವಾಹಿ ಪ್ರಸಾರ ಕಾಣಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Fri, 4 April 25

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು