AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ’ ಧಾರವಾಹಿಯಲ್ಲಿ ಕಿರಣ್ ರಾಜ್​ಗೆ ನಾಯಕಿ ಆದ ‘ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ

Bhavya Gowda: ಕಿರಣ್ ರಾಜ್ ಅವರು ‘ಕರ್ಣ’ ಹೆಸರಿನ ಧಾರಾವಾಹಿ ಮಾಡುತ್ತಾ ಇದ್ದಾರೆ. ಈ ಧಾರಾವಾಹಿಗೆ ನಾಯಕಿ ಯಾರು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಕೊನೆಗೂ ಅದಕ್ಕೆ ಉತ್ತರ ಸಿಕ್ಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿಗೆ ಈ ಅವಕಾಶ ಸಿಕ್ಕಿದೆ ಅನ್ನೋದು ವಿಶೇಷ.

‘ಕರ್ಣ’ ಧಾರವಾಹಿಯಲ್ಲಿ ಕಿರಣ್ ರಾಜ್​ಗೆ ನಾಯಕಿ ಆದ ‘ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ
Bhavya Gowda
 ಶ್ರೀಲಕ್ಷ್ಮೀ ಎಚ್
| Edited By: |

Updated on:Apr 04, 2025 | 6:54 PM

Share

ಕಿರಣ್ ರಾಜ್ (Kiran Raj) ಅವರು ಕಲರ್ಸ್​ ಕನ್ನಡದಲ್ಲಿ ಈ ಮೊದಲು ಪ್ರಸಾರ ಕಂಡ ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಹೆಸರಿನ ಪಾತ್ರ ಮಾಡಿ ಗಮನ ಸೆಳೆದಿದ್ದು ಗೊತ್ತೇ ಇದೆ. ಈ ಮಧ್ಯೆ ಕಿರಣ್ ರಾಜ್ ಅವರು ಸಿನಿಮಾ ಕೆಲಸಗಳನ್ನು ಮಾಡಿದ್ದರು. ಈಗ ಕಿರಣ್ ರಾಜ್ ಅವರು ‘ಕರ್ಣ’ ಹೆಸರಿನ ಧಾರಾವಾಹಿ ಮಾಡುತ್ತಾ ಇದ್ದಾರೆ. ಈ ಧಾರಾವಾಹಿಗೆ ನಾಯಕಿ ಯಾರು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಕೊನೆಗೂ ಅದಕ್ಕೆ ಉತ್ತರ ಸಿಕ್ಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿಗೆ ಈ ಅವಕಾಶ ಸಿಕ್ಕಿದೆ ಅನ್ನೋದು ವಿಶೇಷ.

ಕಲರ್ಸ್ ಕನ್ನಡದಲ್ಲಿ ಈ ಮೊದಲು ‘ಗೀತಾ’ ಧಾರಾವಾಹಿ ಮಾಡಿದ್ದ ಭವ್ಯಾ ಗೌಡ ಅವರು ಈಗ ಜೀ ಕನ್ನಡದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕರ್ಣ’ ಧಾರಾವಾಹಿಗೆ ಇವರೇ ನಾಯಕಿ ಎಂದು ವರದಿ ಆಗಿದೆ! ಈ ಧಾರಾವಾಹಿ ಸಂದರ್ಭದ ಶೂಟಿಂಗ್​ ವಿಡಿಯೋಗಳು ಎಲ್ಲ ಕಡೆಗಳಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ಇದರಲ್ಲಿ ಭವ್ಯಾ ಗೌಡ ಅವರು ನಟಿಸುತ್ತಿರುವುದು ಇದೆ. ಇನ್​​ಸ್ಟಾಗ್ರಾಮ್​ ರಿಲ್ಸ್​ನಲ್ಲಿ ವಿಡಿಯೋ ಹರಿದಾಡುತ್ತಿದೆ.

ಭವ್ಯಾ ಗೌಡ ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದವರು. ‘ಗೀತಾ’ ಧಾರಾವಾಹಿಯಲ್ಲಿ ಗೀತಾ ಪಾತ್ರ ಮಾಡಿ ಗಮನ ಸೆಳೆದರು. ಈ ಧಾರಾವಾಹಿ ಯಶಸ್ವಿ ಆದ ಬಳಿಕ ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಅವಕಾಶ ಸಿಕ್ಕಿತು. ಈ ಅವಕಾಶವನ್ನು ಅವರು ಸದ್ಬಳಕೆ ಮಾಡಿದರು. ಅವರು ‘ಬಾಯ್ಸ್ vs ಗರ್ಲ್ಸ್​’ ಶೋನಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಅನಾರೋಗ್ಯದ ಕಾರಣ ಅವರು ಇಲ್ಲಿಗೆ ಹೋಗಲಿಲ್ಲ.

ಇದನ್ನೂ ಓದಿ:ಜೀ ಕನ್ನಡದಲ್ಲಿ ‘ಕರ್ಣ’ ಧಾರಾವಾಹಿ ಯಾವಾಗಿನಿಂದ; ಕೊನೆ ಆಗಲಿರೋ ಧಾರಾವಾಹಿ ಯಾವುದು?

ಈಗ ಅವರಿಗೆ ‘ಕರ್ಣ’ ಧಾರಾವಾಹಿಗೆ ಭವ್ಯಾ ಗೌಡ ನಾಯಕಿ ಆಗಿದ್ದಾರೆ. ಕಿರಣ್ ರಾಜ್ ಜೊತೆ ಅವರು ತೆರೆ ಹಂಚಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಭವ್ಯಾ ಗೌಡ ಅವರಿಗೆ ಸಂಬಂಧಿಸಿದ ಪ್ರೋಮೋ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈ ಧಾರಾವಾಹಿಯ ರಿಲೀಸ್ ದಿನಾಂಕ ಇನ್ನಷ್ಟೇ ರಿವೀಲ್ ಆಗಬೇಕಿದೆ.  ಜೀ ಕನ್ನಡದಲ್ಲಿ ಧಾರಾವಾಹಿ ಪ್ರಸಾರ ಕಾಣಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Fri, 4 April 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು