AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತ್ರಿವಿಕ್ರಂ ಪ್ರಪೋಸ್ ಒಪ್ಪಿಕೊಂಡ್ರಾ’; ಸುರೇಶ್ ಪ್ರಶ್ನೆಗೆ ಭವ್ಯಾ ಉತ್ತರ ಏನು?

ಬಿಗ್ ಬಾಸ್ ಕನ್ನಡದಲ್ಲಿ ಭವ್ಯಾ ಮತ್ತು ತ್ರಿವಿಕ್ರಂ ಅವರ ನಡುವಿನ ಪ್ರೇಮ ಸಂಬಂಧದ ಬಗ್ಗೆ ಗೋಲ್ಡ್ ಸುರೇಶ್ ಪ್ರಶ್ನಿಸಿದ್ದಾರೆ. ತ್ರಿವಿಕ್ರಂ ಅವರ ಪ್ರಪೋಸಲ್‌ಗೆ ಭವ್ಯಾ ಅವರ ಪ್ರತಿಕ್ರಿಯೆ ಅನಿಶ್ಚಿತವಾಗಿದೆ. ಅವರ ಮಧ್ಯೆ ಉಂಟಾಗುತ್ತಿರುವ ಭಿನ್ನಾಭಿಪ್ರಾಯಗಳ ಬಗ್ಗೆಯೂ ಚರ್ಚೆ ನಡೆದಿದೆ. ಇವರಿಬ್ಬರ ಪೈಕಿ ಭವ್ಯಾ ನಾಮಿನೇಟ್ ಆಗಿದ್ದು, ತ್ರಿವಿಕ್ರಂ ಉಳಿದುಕೊಂಡಿದ್ದಾರೆ.

‘ತ್ರಿವಿಕ್ರಂ ಪ್ರಪೋಸ್ ಒಪ್ಪಿಕೊಂಡ್ರಾ’; ಸುರೇಶ್ ಪ್ರಶ್ನೆಗೆ ಭವ್ಯಾ ಉತ್ತರ ಏನು?
ತ್ರಿವಿಕ್ರಂ-ಸುರೇಶ್, ಭವ್ಯಾ
ರಾಜೇಶ್ ದುಗ್ಗುಮನೆ
|

Updated on: Jan 18, 2025 | 8:52 AM

Share

ಬಿಗ್ ಬಾಸ್​ನಲ್ಲಿ ತ್ರಿವಿಕ್ರಂ ಹಾಗೂ ಭವ್ಯಾ ಕ್ಲೋಸ್ ಆಗಿದ್ದಾರೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ತ್ರಿವಿಕ್ರಂ ಅವರು ಭವ್ಯಾಗೆ ನೇರವಾಗಿ ಲವ್ ಪ್ರಪೋಸ್ ಇಟ್ಟಿದ್ದರು. ಈ ಪ್ರಪೋಸ್​ನ ಭವ್ಯಾ ಒಪ್ಪಿಕೊಂಡೂ ಇಲ್ಲ, ತಿರಸ್ಕರಿಸಲೂ ಇಲ್ಲ. ಈ ಬಗ್ಗೆ ಮನೆಗೆ ಅತಿಥಿಯಾಗಿ ಬಂದ ಗೋಲ್ಡ್ ಸುರೇಶ್ ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಗೆ ಭವ್ಯಾ ನಾಚಿ ನೀರಾಗಿದ್ದಾರೆ.

ಗೋಲ್ಡ್ ಸುರೇಶ್ ಅವರು ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ನಡೆದರು. ವೈಯಕ್ತಿಕ ಕಾರಣಗಳನ್ನು ನೀಡಿ ಆಟವನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ಈಗ ಅವರು ದೊಡ್ಮನೆಗೆ ಅತಿಥಿಯಾಗಿ ಆಗಮಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ನಿತ್ಯವೂ ಬಿಗ್ ಬಾಸ್ ಶೋ ನೋಡುವ ಸುರೇಶ್ ಅವರು ಭವ್ಯಾ ಬಳಿ ಪ್ರಶ್ನೆ ಮಾಡಿದ್ದಾರೆ.

ತ್ರಿವಿಕ್ರಂ ಬಳಿ ತೆರಳಿದ ಸುರೇಶ್ ‘ಚೆನ್ನಾಗಿದೆ ಲವ್’ ಎಂದರು. ‘ಪ್ರಪೋಸ್ ಮಾಡಿದ್ದು ಒಪ್ಪಿಕೊಂಡ್ರಾ’ ಎಂದು ಸುರೇಶ್ ಕೇಳಿದರು. ‘ಪ್ರಪೋಸಾ? ಏನ್ ಏನ್ ಹೇಳ್ತಾ ಇದೀರಾ’ ಎಂದು ಭವ್ಯಾ ಏನೂ ಗೊತ್ತಿಲ್ಲದಂತೆ ಆ್ಯಕ್ಟ್ ಮಾಡಿದರು. ಇದನ್ನು ಕೇಳಿ ಮನೆ ಮಂದಿಗೆ ಅಚ್ಚರಿ ಆಯಿತು. ಈ ರೀತಿಯ ವಿಚಾರವೇ ನಮಗೆ ಗೊತ್ತಿರಲಿಲ್ಲ ಎಂದರು. ‘ನಾನು ಮೂರು ವರ್ಷ ಮದುವೆ ಆಗಲ್ಲ’ ಎಂಬರ್ಥದಲ್ಲಿ ಮಾತನಾಡಿದರು.

ಭವ್ಯಾ ಹಾಗೂ ತ್ರಿವಿಕ್ರಂ ಮಧ್ಯೆ ಮಿಸ್​ ಅಂಡರ್​ಸ್ಟ್ಯಾಂಡಿಗ್ ಬರ್ತಿದೆ. ಈ ಬಗ್ಗೆ ಭವ್ಯಾ ಬಳಿ ಅನುಷಾ ರೈ ಪ್ರಶ್ನೆ ಮಾಡಿದ್ದಾರೆ. ‘ನಮ್ಮ ಮಧ್ಯೆ ಸಣ್ಣ ಸಣ್ಣ ವಿಚಾರಕ್ಕೆ ಮಿಸ್​ ಅಂಡರ್​ಸ್ಟ್ಯಾಂಡಿಗ್ ಬರುತ್ತಿದೆ. ನಂತರ ಕೆಲವೇ ನಿಮಿಷಗಳಲ್ಲಿ ಅದು ಸರಿ ಆಗುತ್ತಿದೆ’ ಎಂದು ಸ್ಪಷ್ಟನೆ ನೀಡಿದರು ಭವ್ಯಾ.

ಇದನ್ನೂ ಓದಿ:  ಅಚ್ಚರಿಯ ರೀತಿಯಲ್ಲಿ ಬಿಗ್ ಬಾಸ್ ಫಿನಾಲೆ ವಾರ ತಲುಪಿದ ತ್ರಿವಿಕ್ರಂ

ಸದ್ಯ ಬಿಗ್ ಬಾಸ್ ಫಿನಾಲೆ ತಲುಪುವ ಹಂತದಲ್ಲಿ ಇದೆ. ಈ ವೇಳೆ ಸ್ಪರ್ಧಿಗಳ ಮಧ್ಯೆ ಕಿತ್ತಾಟ ಕಡಿಮೆ ಆಗಿದೆ. ಈ ವಾರ ಧನರಾಜ್, ಗೌತಮಿ, ಮಂಜು, ರಜತ್ ಹಾಗೂ ಭವ್ಯಾ ನಾಮಿನೇಷನ್​ ಸಾಲಿನಲ್ಲಿ ಇದ್ದಾರೆ. ಇವರ ಪೈಕಿ ಇಬ್ಬರು ಮನೆಯಿಂದ ಹೊರ ಹೋಗಲಿದ್ದಾರೆ. ಹನುಮಂತ, ಮೋಕ್ಷಿತಾ ಹಾಗೂ ತ್ರಿವಿಕ್ರಂ ನಾಮಿನೇಷನ್​ನಿಂದ ಬಚಾವ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?