AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವ್ಯಾಗೆ ತ್ರಿವಿಕ್ರಂನಿಂದ ದೂರ ಇರಲು ಸೂಚನೆ ಕೊಟ್ಟ ಅಕ್ಕ

ಬಿಗ್ ಬಾಸ್ ಮನೆಯಲ್ಲಿ ಭವ್ಯಾ ಹಾಗೂ ತ್ರಿವಿಕ್ರಂ ಒಟ್ಟಾಗಿ ಇದ್ದಾರೆ. ಇಬ್ಬರ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ಈಗ ದೊಡ್ಮನೆಗೆ ಭವ್ಯಾ ಅವರ ಅಕ್ಕ ದಿವ್ಯಾ ಬಂದಿದ್ದಾರೆ. ಆಗ ಅವರು ತ್ರಿವಿಕ್ರಂನಿಂದ ದೂರ ಇರುವಂತೆ ಪರೋಕ್ಷವಾಗಿ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ.

ಭವ್ಯಾಗೆ ತ್ರಿವಿಕ್ರಂನಿಂದ ದೂರ ಇರಲು ಸೂಚನೆ ಕೊಟ್ಟ ಅಕ್ಕ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Jan 01, 2025 | 7:33 AM

Share

ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವಾರ ಶುರುವಾಗಿದೆ. ಸ್ಪರ್ಧಿಗಳ ಕುಟುಂಬದವರು ದೊಡ್ಮನೆಗೆ ಬರುತ್ತಿದ್ದಾರೆ. ಹೀಗೆ ಬರುವ ಕುಟುಂಬದವರು ಸ್ಪರ್ಧಿಗಳಿಗೆ ಒಂದೊಂದು ಟಿಪ್ಸ್​ ನೀಡುವ ಕೆಲಸ ಮಾಡುತ್ತಾ ಇದ್ದಾರೆ. ಹೊರಗೆ ಸ್ಪರ್ಧಿಗಳ ಬಗ್ಗೆ ಇರುವ ಅಭಿಪ್ರಾಯ, ಯಾವ ರೀತಿಯಲ್ಲಿ ಆಡಬೇಕು ಎಂಬುದನ್ನು ಪರೋಕ್ಷವಾಗಿ ಹೇಳುತ್ತಿದ್ದಾರೆ. ದೊಡ್ಮನೆಗೆ ಭವ್ಯಾ ಅವರ ಅಕ್ಕ ದಿವ್ಯಾ ಬಂದಿದ್ದಾರೆ. ಆಗ ಅವರು ತ್ರಿವಿಕ್ರಂನಿಂದ ದೂರ ಇರುವಂತೆ ಪರೋಕ್ಷವಾಗಿ ಹೇಳಿದ್ದಾರೆ.

ಭವ್ಯಾ ಅವರಿಗೆ ಕನ್​ಫೆಷನ್​ ರೂಂಗೆ ಬರುವಂತೆ ಬಿಗ್ ಬಾಸ್ ಹೇಳಿದ್ದಾರೆ. ದಿವ್ಯಾ ಅವರು ಕನ್​ಫೆಷನ್ ​ರೂಂನಲ್ಲೇ ಇದ್ದರು. ಅವರು ವೈದ್ಯರ ಡ್ರೆಸ್​ನಲ್ಲಿ ಇದ್ದರು. ಮುಖಕ್ಕೆ ಮಾಸ್ಕ್ ಹಾಕಿದ್ದರು. ಭವ್ಯಾ ಹೋಗಿ ಕುಳಿತ ಬಳಿಕ, ‘ಹೇಗಿದ್ದೀರಿ’ ಎಂದು ಕೇಳಿದರು ದಿವ್ಯಾ. ಭವ್ಯಾ ಒಮ್ಮೆ ಗೊಂದಲಕ್ಕೆ ಒಳಗಾದರು. ಆ ಬಳಿಕ ರಿಯಾಲಿಟಿ ಅರಿತುಕೊಂಡ ಅವರು ಖುಷಿಯಿಂದ ಕುಣಿದಾಡಿದರು. ಅಪ್ಪಿಕೊಂಡು ಕಣ್ಣೀರು ಹಾಕಿದರು.

ದಿವ್ಯಾ ಮನೆಯಲ್ಲಿ ಸ್ವಲ್ಪ ಸಮಯ ಕಳೆದ ಬಳಿಕ ಭವ್ಯಾ ಅವರು ‘ನಾನು ಏನು ಚೇಂಜಸ್ ಮಾಡಿಕೊಳ್ಳಬೇಕು’ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ದಿವ್ಯಾ, ‘ಜನರು ಕಡಿಮೆ ಆಗುತ್ತಿದ್ದಾರೆ. ನೀನು ಎಲ್ಲರ ಜೊತೆಯೂ ಬೆರೆಯಬೇಕು. ಕಂಫರ್ಟ್​ಜೋನ್​​ನಲ್ಲಿ ಇದೀಯಾ, ತೊಂದರೆ ಇಲ್ಲ. ಎಲ್ಲದಕ್ಕೂ ಒಂದು ಬ್ಯಾರಿಕೇಡ್ ಇರಬೇಕು. ನೀನು ಇರೋದು ತಪ್ಪು ಎನ್ನುತ್ತಿಲ್ಲ, ವೈಯಕ್ತಿಕವಾಗಿ ಹೇಗೆ ಆಟಡಬೇಕು ಎಂಬುದನ್ನು ಯೋಚನೆ ಮಾಡು. ಗೇಮ್ ಕಡೆ ಫೋಕಸ್ ಮಾಡು. ಸಜೆಶನ್ಸ್ ಕೇಳಬಾರದು. ನೀನೇ ನಿರ್ಧಾರ ತೆಗೆದುಕೊಳ್ಳಬೇಕು. ನೀನು ನಿರ್ಧಾರ ತೆಗೆದುಕೊಳ್ಳಲು ಅಪ್ರಬುದ್ಧ ಎಂದು ಕಾಣಿಸಬಾರದು’ ಎಂದರು ದಿವ್ಯಾ.

ಇದನ್ನೂ ಓದಿ: ‘ರಾಧಾ ಕೃಷ್ಣ’ ತರ ಇದೀರಾ; ಭವ್ಯಾಗೆ ನೇರ ಮಾತಲ್ಲಿ ಹೇಳಿದ ತ್ರಿವಿಕ್ರಂ ತಾಯಿ

ಇದನ್ನು ಅನೇಕರು ಬೇರೆ ರೀತಿಯಲ್ಲಿ ಬಣ್ಣಿಸುತ್ತಿದ್ದಾರೆ. ‘ತ್ರಿವಿಕ್ರಂನಿಂದ ದೂರ ಇರು ಎಂದು ಭವ್ಯಾಗೆ ಅವರ ಅಕ್ಕ ಸೂಚನೆ ಕೊಟ್ಟಿದ್ದಾರೆ’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಅತ್ತ ಭವ್ಯಾ ಅವರ ತಾಯಿ ಮಂಜುಳಾ ಅವರು ಭವ್ಯಾ ಆಟದ ಬಗ್ಗೆ ತ್ರಿವಿಕ್ರಂ ಹಾಗೂ ಭವ್ಯಾ ಬಾಂಡಿಂಗ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ