AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನು ಮಾಡೋ ಡವ್ ಸೂಪರ್’; ಭವ್ಯಾಗೆ ಓಪನ್ ಆಗಿ ಕಾಲೆಳೆದ ಹನುಮಂತ

ಬಿಗ್ ಬಾಸ್ ಮನೆಯಲ್ಲಿ ಭವ್ಯಾ ಗೌಡ ಅವರು ಮೂರು ಬಾರಿ ಕ್ಯಾಪ್ಟನ್ ಆಗಿದ್ದಾರೆ. ಆದರೆ ಅವರ ಡ್ರಾಮಾ ಮತ್ತು ಅತಿಯಾದ ಸಿಟ್ಟಿನ ಬಗ್ಗೆ ಹನುಮಂತ ಅವರು ನೇರವಾಗಿ ಬರೆದ ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹನುಮಂತ ಅವರ ಈ ಪ್ರಾಮಾಣಿಕತೆಗೆ ಮನೆಯ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ನೀನು ಮಾಡೋ ಡವ್ ಸೂಪರ್’; ಭವ್ಯಾಗೆ ಓಪನ್ ಆಗಿ ಕಾಲೆಳೆದ ಹನುಮಂತ
ಹನುಂತ-ಭವ್ಯಾ
ರಾಜೇಶ್ ದುಗ್ಗುಮನೆ
|

Updated on:Jan 23, 2025 | 7:23 AM

Share

ಬಿಗ್ ಬಾಸ್ ಮನೆಯಲ್ಲಿರುವ ಭವ್ಯಾ ಗೌಡ ಟಾಸ್ಕ್​ನಲ್ಲಿ ಒಳ್ಳೆಯ ಪ್ರದರ್ಶನ ನೀಡಿದ್ದಾರೆ ನಿಜ. ಆದರೆ, ಅನೇಕ ಕಡೆಗಳಲ್ಲಿ ಅವರು ಮುಗ್ಗರಿಸಿದ್ದೂ ಇದೆ. ಅವರು ಅನೇಕ ಕಡೆಗಳಲ್ಲಿ ಡ್ರಾಮಾ ಮಾಡುತ್ತಾರೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರವಾದರೂ ಅದನ್ನು ದೊಡ್ಮನೆಯಲ್ಲಿ ಹೇಳುವ ಪ್ರಯತ್ನವನ್ನು ಯಾರೂ ಮಾಡಿರಲಿಲ್ಲ. ಆದರೆ, ಹನುಮಂತ ಅವರು ಬರಹದ ಮೂಲಕ ಅವರಿಗೆ ವಿಚಾರವನ್ನು ಮುಟ್ಟಿಸಿದ್ದಾರೆ. ಹನುಮಂತ ಅವರಿಗೆ ಎಲ್ಲರೂ ಭೇಷ್ ಎಂದಿದ್ದಾರೆ.

ಹನುಮಂತ ಅವರು ಯಾವುದೇ ವಿಚಾರ ಇದ್ದರೂ ಅದನ್ನು ನೇರ ಮಾತುಗಳಲ್ಲಿ ಹೇಳುತ್ತಾರೆ. ಹೊರಗೊಂದು ಒಳಗೊಂದು ಎಂಬುದು ಇಲ್ಲ. ಎದುರು ಇದ್ದವರಿಗೆ ಬೇಸರ ಆಗುತ್ತದೆ ಎಂದು ಅವರು ಯಾವಾಗಲೂ ಯೋಚಿಸಿಲ್ಲ. ಆಪ್ತ ಎನಿಸಿಕೊಂಡವರಿಗೆ ಅವರು ಯಾವಾಗಲೂ ಫೇವರಿಸಂ ಮಾಡಿಲ್ಲ. ಈಗ ಭವ್ಯಾಗೆ ‘ಡವ್ ಮಾಡ್ತೀಯಾ’ ಎಂದು ನೇರ ಮಾತುಗಳಲ್ಲಿ ಹೇಳಿ ಗಮನ ಸೆಳೆದಿದ್ದಾರೆ. ಇದು ಚರ್ಚೆಗೆ ಕಾರಣವಾಗಿದೆ.

‘ಬಿಗ್ ಬಾಸ್’ ಕೊನೆಯವಾರದಲ್ಲಿ ರೆಸಾರ್ಟ್ ಮಾದರಿಯ ಸೆಟ್​ನ ಹಾಕಲಾಗಿತ್ತು. ಅಲ್ಲಿ ಊಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದರ ಜೊತೆಗೆ ಸ್ಪರ್ಧಿಗಳಿಗೆ ಪತ್ರ ಬರೆದು ಅವರ ಬಗೆಗಿನ ಒಳ್ಳೆಯ ಮಾತನ್ನು ಹೇಳಬೇಕಿತ್ತು. ಹನುಮಂತ ಅವರು ಭವ್ಯಾಗೆ ಪತ್ರ ಬರೆದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ನಿನ್ನ ಆಟ ಸೂಪರ್, ನಿನ್ನ ಮಾತು ಸೂಪರ್, ನಿನ್ನ ನೋಟ ಸೂಪರ್, ನಿನ್ನ ಡ್ಯಾನ್ಸ್ ಸೂಪರ್, ನೀನು ಮಾಡೋ ಡವ್ ಸೂಪರ್. ಆದರೆ, ಸಿಟ್ಟು ಸ್ವಲ್ಪ ಕಡಿಮೆ ಮಾಡಿಕೊಳ್ಳಿ ಸಿಸ್ಟರ್’ ಎಂದು ಹನುಮಂತ ಬರೆದಿದ್ದಾರೆ. ಇದಕ್ಕೆ ಭವ್ಯಾ ನಗುತ್ತಲೇ ‘ನಾನೇನು ಡವ್ ಮಾಡಿದೀನಿ’ ಎಂದು ಕೇಳಿದರು. ‘ಈಗ ಮಾಡ್ತಾ ಇದೀಯಲ್ಲ ಇದುವೇ ಡವ್’ ಎಂದರು ಹನುಮಂತ. ಆ ಬಳಿಕ ಭವ್ಯಾಗೆ ಮಾತೇ ಬರಲಿಲ್ಲ. ಹನುಮಂತ ಅವರ ನೇರ ಮಾರಿಗೆ ಎಲ್ಲರೂ ಮೆಚ್ಚುಗೆ ಸೂಚಿಸಿದರು.

ಇದನ್ನೂ ಓದಿ: ‘ಕನ್ನಡದ ನವಾಜುದ್ದೀನ್ ಸಿದ್ಧಿಕಿ’; ಬಿಗ್ ಬಾಸ್ ಫಿನಾಲೆ ಸಮೀಪಿಸಿದಾಗ ಮಂಜುನ ಹೊಗಳಿದ ತ್ರಿವಿಕ್ರಂ

‘ಬಿಗ್ ಬಾಸ್’ನಲ್ಲಿ ಭವ್ಯಾ ಗೌಡ ಅವರು ಮೂರು ಬಾರಿ ಕ್ಯಾಪ್ಟನ್ ಆಗಿದ್ದಾರೆ. ಮೂರು ಬಾರಿ ಕ್ಯಾಪ್ಟನ್ ಆದ ಏಕೈಕ ಸ್ಪರ್ಧಿ ಅವರಾಗಿದ್ದಾರೆ. ಇವರ ಕಪ್ ಗೆಲ್ಲುವ ಕನಸು ಕಾಣುತ್ತಿದ್ದಾರೆ. ಈ ಕನಸು ನನಸಾಗುವುದು ಅಷ್ಟು ಸುಲಭದಲ್ಲಿ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:22 am, Thu, 23 January 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್