AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಯುನಲ್ಲಿ ಭುವಿ: ಸಾನಿಯಾಗೆ ತಿರುಮಂತ್ರ ಆಯ್ತು ಪ್ಲ್ಯಾನ್​; ಮುಂದಿದೆ ಮಾರಿ ಹಬ್ಬ

ಸಾನಿಯಾಗೆ ವುರಧಿನಿ ಮೇಲೆ ಎಲ್ಲಿಲ್ಲದ ನಂಬಿಕೆ. ಹರ್ಷನಿಗೋಸ್ಕರ ಆಕೆ ಏನೂ ಮಾಡೋಕೂ ರೆಡಿ ಎಂದುಕೊಂಡಿದ್ದಾಳೆ. ವರುಧಿನಿಗೆ ಹರ್ಷನ ಮೇಲಿರುವಷ್ಟೇ ಪ್ರೀತಿ ಭುವಿ ಮೇಲೂ ಇದೆ.

ಐಸಿಯುನಲ್ಲಿ ಭುವಿ: ಸಾನಿಯಾಗೆ ತಿರುಮಂತ್ರ ಆಯ್ತು ಪ್ಲ್ಯಾನ್​; ಮುಂದಿದೆ ಮಾರಿ ಹಬ್ಬ
ಕನ್ನಡತಿ ಧಾರಾವಾಹಿ ಪಾತ್ರಗಳು
TV9 Web
| Edited By: |

Updated on: Apr 22, 2022 | 1:18 PM

Share

‘ಕನ್ನಡತಿ’ ಧಾರಾವಾಹಿ (Kannadathi Serial) ಪ್ರಮುಖ ಘಟ್ಟ ತಲುಪಿದೆ. ಸಾನಿಯಾ ಮಾಡಿದ ಪ್ಲ್ಯಾನ್ ಆಕೆಗೆ ತಿರುಮಂತ್ರವಾಗುವ ಸೂಚನೆ ಸಿಕ್ಕಿದೆ. ಭುವಿಯನ್ನು ಹತ್ಯೆ ಮಾಡಲು ಸಾನಿಯಾ ಪ್ಲ್ಯಾನ್ ಒಂದನ್ನು ರೂಪಿಸಿದ್ದಳು. ಆದರೆ, ಅವಳ ದುರಾದೃಷ್ಟವೋ ಏನೋ ಭುವಿ ಬದುಕಿದ್ದಾಳೆ. ಸದ್ಯ ಐಸಿಯುನಲ್ಲಿ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಭುವಿಯನ್ನು ಹತ್ಯೆ ಮಾಡಿದ್ರೆ ವರುಗೆ ಹರ್ಷ ಹತ್ತಿರ ಆಗುತ್ತಾನೆ ಅನ್ನೋದು ಸಾನಿಯಾ ಪ್ಲ್ಯಾನ್ ಆಗಿತ್ತು. ಆದರೆ, ಇಲ್ಲಿ ಎಲ್ಲವೂ ಉಲ್ಟಾ ಆಗಿದೆ. ಭುವಿ ಈ ಸ್ಥಿತಿಗೆ ಬರಲು ವರುಧಿನಿ ಕಾರಣ ಅನ್ನೋದು ಹರ್ಷನ ನಂಬಿಕೆ. ಈ ಕಾರಣಕ್ಕೆ ಆತ ವರುಧಿನಿ ಜತೆಗೆ ಸರಿಯಾಗಿ ಮಾತನಾಡುತ್ತಿಲ್ಲ. ಇದರಿಂದ ವರುಗೆ ಸಿಟ್ಟು ನೆತ್ತಿಗೇರಿದೆ. ಸಾನಿಯಾ ವಿರುದ್ಧ ತಿರುಗಿ ಬೀಳುವ ಸೂಚನೆ ನೀಡಿದ್ದಾಳೆ.

ಹರ್ಷ ಹಾಗೂ ಭುವಿಯ ನಿಶ್ಚಿತಾರ್ಥ ನೆರವೇರಿದೆ. ಈ ವಿಚಾರದಲ್ಲಿ ಅತಿ ಹೆಚ್ಚು ಉರಿದುಕೊಂಡಿದ್ದು ಸಾನಿಯಾ ಹಾಗೂ ವರುಧಿನಿ. ಈಗ ಇಬ್ಬರೂ ಒಂದಾಗಿದ್ದಾರೆ. ಭುವಿಯನ್ನು ಹತ್ಯೆ ಮಾಡಲು ಸಾನಿಯಾ ಪ್ಲ್ಯಾನ್​ ರೂಪಿಸಿದ್ದಳು. ಅಂತೆಯೇ ಬೆಟ್ಟದ ಮೇಲಿರುವಾಗ ಭುವಿಯನ್ನು ಸುಪಾರಿ ಕಿಲ್ಲರ್ ತಳ್ಳಿದ್ದಾನೆ. ಭುವಿಯ ಪ್ರಾಣಕ್ಕೆ ಸಂಚಕಾರ ಎದುರಾಗಿದೆ. ಆಕೆಯನ್ನು ಐಸಿಯುನಲ್ಲಿ ಅಡ್ಮಿಟ್ ಮಾಡಲಾಗಿದೆ. ಭುವಿ ಬೀಳುವ ಸಂದರ್ಭದಲ್ಲಿ ಆಕೆಯ ಜತೆ ಇದ್ದಿದ್ದು ವರುಧಿನಿ. ಈ ಕಾರಣಕ್ಕೆ ವರುಧಿನಿ ವಿರುದ್ಧ ಹರ್ಷ ಸಿಟ್ಟಾಗಿದ್ದಾನೆ.

‘ಭುವಿ ಬೆಟ್ಟದಿಂದ ಬೀಳುವಾಗ ನಾನು ಅಲ್ಲಿರಲಿಲ್ಲ. ಯಾರೋ ಬಂದು ತಳ್ಳಿದ್ದಾರೆ’ ಎಂದು ಹರ್ಷನಿಗೆ ವಿವರಿಸಲು ಹೋದಳು ವರು. ಆದರೆ, ಇದನ್ನು ಆತ ಕೇಳುವ ಸ್ಥಿತಿಯಲ್ಲಿರಲಿಲ್ಲ. ‘ಭುವಿಯ ಪ್ರಾಣಕ್ಕೆ ಏನಾದರೂ ತೊಂದರೆ ಆದರೆ ಅದಕ್ಕೆ ನೇರ ಹೊಣೆ ನಿಮ್ಮದೆ’ ಎಂದು ವರುಧಿನಿಗೆ ಹರ್ಷ ಹೇಳಿದ್ದಾನೆ.

ಹರ್ಷನಿಗೆ ಹತ್ತಿರ ಆಗಬೇಕು ಎಂಬುದು ವರುಧಿನಿಯ ಆಲೋಚನೆ ಆಗಿತ್ತು. ಆದರೆ, ಈ ಘಟನೆಯಿಂದ ವರುನಿಂದ ದೂರ ಆಗುತ್ತಿದ್ದಾನೆ ಹರ್ಷ. ಮುಖಕ್ಕೆ ಮುಖ ಕೊಟ್ಟು ಮಾತನಾಡುತ್ತಿಲ್ಲ. ಇದು ವರುವಿನ ಅಸಮಾಧಾನಕ್ಕೆ ಕಾರಣ ಆಗಿದೆ. ಇದಕ್ಕೆ ಕಾರಣ ಸಾನಿಯಾ ಅನ್ನೋದು ಆಕೆಗೆ ಸ್ಪಷ್ಟವಾಗಿದೆ. ಹೀಗಾಗಿ, ಆಕೆಯ ವಿರುದ್ಧ ಸಿಡಿದೆದ್ದಿದ್ದಾಳೆ ವರು. ಮುಂದಿನ ದಿನಗಳಲ್ಲಿ ಸಾನಿಯಾ ವಿರುದ್ಧ ಸಮರ ಸಾರಿದರೂ ಅಚ್ಚರಿ ಏನಿಲ್ಲ.

ಸಾನಿಯಾಗೆ ವುರಧಿನಿ ಮೇಲೆ ಎಲ್ಲಿಲ್ಲದ ನಂಬಿಕೆ. ಹರ್ಷನಿಗೋಸ್ಕರ ಆಕೆ ಏನೂ ಮಾಡೋಕೂ ರೆಡಿ ಎಂದುಕೊಂಡಿದ್ದಾಳೆ. ವರುಧಿನಿಗೆ ಹರ್ಷನ ಮೇಲಿರುವಷ್ಟೇ ಪ್ರೀತಿ ಭುವಿ ಮೇಲೂ ಇದೆ. ‘ವರುಧಿನಿಯನ್ನು ನಂಬಬೇಡ’ ಎನ್ನುವ ಎಚ್ಚರಿಕೆಯನ್ನು ಸಾನಿಯಾಗೆ ಆಕೆಯ ತಾಯಿ ಮೊದಲೇ ನೀಡಿದ್ದಳು. ಆದರೆ, ಅದನ್ನು ಆಕೆ ಕೇಳಿರಲಿಲ್ಲ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:  ಬೆಟ್ಟದಿಂದ ಭುವಿಯನ್ನು ತಳ್ಳೇ ಬಿಟ್ಟ ಕಿಲ್ಲರ್; ವರುಧಿನಿಯಿಂದ ಮತ್ತಷ್ಟು ದೂರವಾದ ಹರ್ಷ

ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ