AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುವಿಗೆ ತಿಳಿದೇ ಹೋಯ್ತು ಸಾನಿಯಾ ಅಸಲಿ ಮುಖ; ಮದುವೆಗೂ ಮುನ್ನ ಎಲ್ಲವನ್ನೂ ಅರಿತುಕೊಂಡ ಹರ್ಷನ ಪ್ರೇಯಸಿ

ರತ್ನಮಾಲಾ ಆರೋಗ್ಯ ಹೀಗೆಯೇ ಇದ್ದರೆ ಅವರು ಶೀಘ್ರವೇ ಕೊನೆಯುಸಿರು ಎಳೆಯಬಹುದು ಎಂಬುದು ವೈದ್ಯರ ಅಭಿಪ್ರಾಯ. ಈ ವಿಚಾರ ಸಾನಿಯಾಗೆ ತಿಳಿದಿದೆ. ರತ್ನಮಾಲಾ ಸತ್ತರೆ ಮದುವೆ ನಿಲ್ಲಬಹುದು ಎನ್ನುವ ಲೆಕ್ಕಾಚಾರದಲ್ಲಿ ಅವಳಿದ್ದಾಳೆ.

ಭುವಿಗೆ ತಿಳಿದೇ ಹೋಯ್ತು ಸಾನಿಯಾ ಅಸಲಿ ಮುಖ; ಮದುವೆಗೂ ಮುನ್ನ ಎಲ್ಲವನ್ನೂ ಅರಿತುಕೊಂಡ ಹರ್ಷನ ಪ್ರೇಯಸಿ
ಭುವಿ-ಸಾನಿಯಾ
TV9 Web
| Edited By: |

Updated on: May 13, 2022 | 7:00 AM

Share

‘ಕನ್ನಡತಿ’ ಧಾರಾವಾಹಿ (Kannadathi Serial) ಹೊಸಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಭುವಿಯನ್ನು (Bhuvi) ಹರ್ಷ ಪ್ರೀತಿಸಲು ಆರಂಭಿಸಿದ್ದ. ಆಕೆಯ ಎದುರು ಪ್ರೀತಿಯನ್ನೂ ವ್ಯಕ್ತಪಡಿಸಿದ್ದ. ಭುವಿ ಇದನ್ನು ಒಪ್ಪಿಯೂ ಆಗಿದೆ. ಎಲ್ಲರ ಸಮ್ಮುಖದಲ್ಲೇ ಹರ್ಷ ಹಾಗೂ ಭುವಿ ನಿಶ್ಚಿತಾರ್ಥ ನೆರವೇರಿತ್ತು. ಈಗ ಭುವಿ ಹಾಗೂ ಹರ್ಷನ ಮದುವೆ ನೆರವೇರುತ್ತಿದೆ. ಲಗ್ನ ಪತ್ರಿಕೆ ಶಾಸ್ತ್ರ ನೆರವೇರಿದೆ. ಹೀಗಾಗಿ, ಶೀಘ್ರವೇ ಹರ್ಷ ಹಾಗೂ ಭುವಿ ಹಸೆಮಣೆ ಏರಲಿದ್ದಾರೆ. ಇವರ ವಿವಾಹವನ್ನು ತಡೆಯಲು ಸಾನಿಯಾ ಹಾಗೂ ವರುಧಿನಿ ಪ್ರಯತ್ನಿಸುತ್ತಿದ್ದಾರೆ. ಈ ಮಧ್ಯೆ ಸಾನಿಯಾ ಅಸಲಿ ಮುಖ ಏನು ಎಂಬುದು ಭುವಿಗೆ ಮನದಟ್ಟಾಗಿದೆ.

ಹರ್ಷನ ತಾಯಿ, ಭುವಿಯ ಭಾವಿ ಅತ್ತೆ ರತ್ನಮಾಲಾಗೆ ಆರೋಗ್ಯ ಕೆಟ್ಟಿದೆ. ರತ್ನಮಾಲಾ ಆರೋಗ್ಯ ಹೀಗೆಯೇ ಇದ್ದರೆ ಅವರು ಶೀಘ್ರವೇ ಕೊನೆಯುಸಿರು ಎಳೆಯಬಹುದು ಎಂಬುದು ವೈದ್ಯರ ಅಭಿಪ್ರಾಯ. ಈ ವಿಚಾರ ಸಾನಿಯಾಗೆ ತಿಳಿದಿದೆ. ರತ್ನಮಾಲಾ ಸತ್ತರೆ ಮದುವೆ ನಿಲ್ಲಬಹುದು ಎನ್ನುವ ಲೆಕ್ಕಾಚಾರದಲ್ಲಿ ಅವಳಿದ್ದಾಳೆ. ಈ ಮಧ್ಯೆ ನಡೆದಿರುವ ಒಂದು ಘಟನೆ ಸಾನಿಯಾಳ ನಿಜವಾದ ಮುಖವನ್ನು ಬಯಲು ಮಾಡಿದೆ.

ಸಾನಿಯಾ ಸಮಯಕ್ಕೆ ತಕ್ಕಂತೆ ಬದಲಾಗುವವಳು. ತನಗೆ ಲಾಭ ಇದೆ ಎಂದರೆ ಏನೂ ಬೇಕಾದರೂ ಮಾಡುತ್ತಾಳೆ. ಭುವಿಯ ಗೆಳೆತನ ಬೆಳೆಸಿಕೊಳ್ಳುವಂತೆ ಸಾನಿಯಾ ತಾಯಿ ಸೂಚನೆ ನೀಡಿದ್ದಾಳೆ. ಅದರಂತೆ ಪ್ರಯತ್ನ ಮಾಡುತ್ತಿದ್ದಾಳೆ. ಮಂಗಳ ಪತ್ರದ ಶಾಸ್ತ್ರದ ದಿನ ಸಾನಿಯಾ ಆಡಿದ ಮಾತುಗಳು ಭುವಿಗೆ ಬೇರೆಯದೇ ಅರ್ಥ ನೀಡಿದೆ.

ಇದನ್ನೂ ಓದಿ
Image
ಆಸ್ಪತ್ರೆಯಲ್ಲೂ ಭುವಿ ಕೊಲ್ಲಲು ನಡೆಯಿತು ಪ್ರಯತ್ನ; ಹರ್ಷನ ಸಂತಸಕ್ಕೆ ಬ್ರೇಕ್?
Image
ಹರಿದ ಬಟ್ಟೆ, ಹಣೆಯಲ್ಲಿ ರಕ್ತ; ನಟಿ ರಂಜನಿ ರಾಘವನ್ ಹಂಚಿಕೊಂಡ ವಿಡಿಯೋ ನೋಡಿ ಗಾಬರಿಗೊಳ್ಳಬೇಡಿ
Image
ಐಸಿಯುನಲ್ಲಿ ಭುವಿ: ಸಾನಿಯಾಗೆ ತಿರುಮಂತ್ರ ಆಯ್ತು ಪ್ಲ್ಯಾನ್​; ಮುಂದಿದೆ ಮಾರಿ ಹಬ್ಬ
Image
 ಬೆಟ್ಟದಿಂದ ಭುವಿಯನ್ನು ತಳ್ಳೇ ಬಿಟ್ಟ ಕಿಲ್ಲರ್; ವರುಧಿನಿಯಿಂದ ಮತ್ತಷ್ಟು ದೂರವಾದ ಹರ್ಷ

ಸಾಲದಿಂದಾಗಿ ಬೇರೆಯವರ ಕೈಯಲ್ಲಿರುವ ತನ್ನ ತಂದೆಗೆ ಸೇರಿದ ಮನೆಯನ್ನು ಮರಳಿ ಪಡೆಯಲು ಭುವಿ ಪ್ರಯತ್ನಿಸಿದ್ದಳು. ಆದರೆ, ಹಣ ಇಲ್ಲದ ಕಾರಣ ಅದು ಸಾಧ್ಯವಾಗಿರಲಿಲ್ಲ. ಈ ಸಂದರ್ಭದಲ್ಲಿ ಹರ್ಷನೇ ಹಣ ಕೊಟ್ಟು ಆ ಮನೆ ಪಡೆದುಕೊಂಡಿದ್ದ. ಆ ಸಂದರ್ಭದಲ್ಲಿ ಭುವಿಗೆ ಸಾನಿಯಾ ಚುಚ್ಚಿ ಮಾತನಾಡಿದ್ದಳು. ಮದುವೆ ಆಗುವ ಮೊದಲೇ ಹಣ ಪಡೆದೆಯಲ್ಲ ಎಂಬರ್ಥದಲ್ಲಿ ಮಾತನಾಡಿದ್ದಳು. ಈಗ ಭುವಿ ಫ್ರೆಂಡ್​ಶಿಪ್​ ಬೆಳೆಸಿಕೊಳ್ಳಲು ಹವಣಿಸುತ್ತಿರುವ ಸಾನಿಯಾ ಆ ದಿನ ಹೇಳಿದ ಮಾತಿಗೆ ತದ್ವಿರುದ್ಧವಾಗಿ ಮಾತನಾಡಿದ್ದಾಳೆ. ಇದರಿಂದ ಸಾನಿಯಾ ಅಸಲಿ ಮುಖ ಯಾವುದು ಎಂಬುದು ಭುವಿಗೆ ಗೊತ್ತಾಗಿದೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ