AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುವಿ ಮಾತನಾಡಿದ ಇಂಗ್ಲಿಷ್ ಕೇಳಿ ದಂಗಾದ ಸಾನಿಯಾ; ಹರ್ಷನಿಗೂ ಮೂಡಿತು ಅಚ್ಚರಿ

ರತ್ನಮಾಲಾ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭುವಿ ಕರೆ ಮಾಡಿದ್ದಾಳೆ. ಅದ್ಭುತವಾಗಿ ಇಂಗ್ಲಿಷ್​ನಲ್ಲಿ ಮಾತನಾಡಿದ್ದಾಳೆ. ಭುವಿ ಇಂಗ್ಲಿಷ್ ಮಾತನಾಡುವುದನ್ನು ನೋಡಿ ಹರ್ಷ ಹಾಗೂ ಸಾನಿಯಾ ಅಚ್ಚರಿ ಹೊರಹಾಕಿದ್ದಾರೆ.

ಭುವಿ ಮಾತನಾಡಿದ ಇಂಗ್ಲಿಷ್ ಕೇಳಿ ದಂಗಾದ ಸಾನಿಯಾ; ಹರ್ಷನಿಗೂ ಮೂಡಿತು ಅಚ್ಚರಿ
ಭುವಿ-ಸಾನಿಯಾ
TV9 Web
| Edited By: |

Updated on:Aug 02, 2022 | 12:15 PM

Share

‘ಕನ್ನಡತಿ’ ಧಾರಾವಾಹಿಯ (Kannadathi Serial) ನಾಯಕಿ ಭುವನೇಶ್ವರಿ ಸದಾ ಕನ್ನಡ ಮಾತನಾಡುತ್ತಾಳೆ. ಈ ಧಾರಾವಾಹಿ ಮೂಲಕ ಕನ್ನಡದ ಮೇಲಿನ ಪ್ರೀತಿ ಮೆರೆಯಲಾಗುತ್ತಿದೆ. ಈ ವಿಚಾರಕ್ಕಾಗಿ ಕಥಾ ನಾಯಕಿ ಸಾಕಷ್ಟು ಇಷ್ಟವಾಗುತ್ತಾಳೆ. ಭುವಿ ಕನ್ನಡ ಮಾತನಾಡುವುದನ್ನು ನೋಡಿ ಅನೇಕರು ಆಕೆಗೆ ಇಂಗ್ಲಿಷ್ ಬರುವುದಿಲ್ಲ ಎಂದೇ ಅಂದುಕೊಂಡಿದ್ದರು. ಆದರೆ, ಅದನ್ನು ಅವಳು ಸುಳ್ಳು ಮಾಡಿದ್ದಾಳೆ. ಸುಲಲಿತವಾಗಿ ಇಂಗ್ಲಿಷ್ ಮಾತನಾಡುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾಳೆ. ಭುವಿ ಇಂಗ್ಲಿಷ್ ಕಂಡು ಸಾನಿಯಾ ಹಾಗೂ ಹರ್ಷ ನಿಜಕ್ಕೂ ಶಾಕ್ ಆಗಿದ್ದಾರೆ.

ಹರ್ಷನ ತಾಯಿ ರತ್ನಮಾಲಾ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದಾಳೆ. ಆಕೆ ಬೇಗ ಗುಣಮುಖರಾಗಿ ಬರಲಿ ಎಂಬುದು ಮಗ ಹರ್ಷ ಹಾಗೂ ಸೊಸೆ ಭುವಿಯ ಕೋರಿಕೆ. ಅವಳು ಮರಳೋದು ಯಾವಾಗ ಎಂಬುದು ಇನ್ನೂ ಅಧಿಕೃತವಾಗಿಲ್ಲ. ಈ ಮಧ್ಯೆ ರತ್ನಮಾಲಾ ಆರೋಗ್ಯದ ಅಪ್​ಡೇಟ್ ತಿಳಿಯಲು ಹರ್ಷ ಪ್ರಯತ್ನಿಸಿದ್ದಾನೆ. ಇದು ಸಾಧ್ಯವಾಗದಾಗ ಕೂಗಾಡಿದ್ದಾನೆ. ಆಗ ಭುವಿ ಕನ್ನಡದಲ್ಲಿ ಮಾತನಾಡಿದ್ದು ಹರ್ಷನಿಗೆ ಕಿರಿಕಿರಿ ಉಂಟಾಗಿದೆ. ಈ ಕಾರಣಕ್ಕೆ ಆಕೆಯ ಮೇಲೂ ಹರ್ಷ ಕೂಗಾಡಿದ್ದಾನೆ.

ಇದನ್ನೂ ಓದಿ
Image
‘ಕನ್ನಡತಿ’ ಧಾರಾವಾಹಿಯಿಂದ ಹೊರ ನಡೆದ ರಕ್ಷಿತ್; ‘ಬಿಗ್ ಬಾಸ್​’ ಎಂಟ್ರಿ ಬಗ್ಗೆ ಶುರು ಆಗಿದೆ ಚರ್ಚೆ
Image
ಹಿಂದಿಗೆ ಡಬ್, ಮರಾಠಿಗೆ ರಿಮೇಕ್​ ಆದ ‘ಕನ್ನಡತಿ’: ಈ ಧಾರಾವಾಹಿಗೆ ಹೇಗಿದೆ ರೆಸ್ಪಾನ್ಸ್? ಇಲ್ಲಿದೆ ಉತ್ತರ
Image
‘ಬಡ್ಡೀಸ್​’ ಚಿತ್ರದಲ್ಲಿ ಆ್ಯಕ್ಷನ್​ ಹೀರೋ ಆಗಿ ಅಬ್ಬರಿಸ್ತಾರೆ ‘ಕನ್ನಡತಿ’ ನಟ ಕಿರಣ್​ ರಾಜ್​; ಜೂನ್​ 24ಕ್ಕೆ ರಿಲೀಸ್​
Image
ಹಿಂದಿಗೆ ಡಬ್​ ಆಗುತ್ತಿದೆ ‘ಕನ್ನಡತಿ’ ಧಾರಾವಾಹಿ; ಕಿರಣ್​ ರಾಜ್​-ರಂಜನಿ ರಾಘವನ್ ಫ್ಯಾನ್ಸ್​ಗೆ ಹೆಮ್ಮೆ​

ಇದರಿಂದ ಭುವಿಗೆ ಬೇಸರ ಆಗಿದೆ. ರತ್ನಮಾಲಾ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭುವಿ ಕರೆ ಮಾಡಿದ್ದಾಳೆ. ಅದ್ಭುತವಾಗಿ ಇಂಗ್ಲಿಷ್​ನಲ್ಲಿ ಮಾತನಾಡಿದ್ದಾಳೆ. ಭುವಿ ಇಂಗ್ಲಿಷ್ ಮಾತನಾಡುವುದನ್ನು ನೋಡಿ ಹರ್ಷ ಹಾಗೂ ಸಾನಿಯಾ ಅಚ್ಚರಿ ಹೊರಹಾಕಿದ್ದಾರೆ. ಭುವಿ ಮುಂದೊಂದು ದಿನ ತನಗೆ ಕಂಟಕ ಆಗಬಹುದು ಎಂಬುದು ಸಾನಿಯಾಗೆ ಖಚಿತವಾಗಿದೆ.

ಅಮ್ಮಮ್ಮ ಭುವಿಯ ಹೆಸರಿಗೆ ಸಂಪೂರ್ಣ ಆಸ್ತಿ ಬರೆದಿದ್ದಾಳೆ. ಹೀಗಾಗಿ, ರತ್ನಾಮಾಲಾಗೆ ಸಂಬಂಧಿಸಿದ ಸಂಪೂರ್ಣ ಆಸ್ತಿಗೆ ಒಡತಿ ಭುವಿಯೇ ಆಗಲಿದ್ದಾಳೆ. ಈ ವಿಚಾರ ತಿಳಿದರೆ ಯಾರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ರತ್ನಾಮಾಲ ಒಡೆತನದ ಸಂಸ್ಥೆಗಳಿಗೆ ಭುವಿ ಬೇಗ ಎಂಡಿ ಆಗಲಿ ಎಂದು ವೀಕ್ಷಕರು ಆಸೆಪಡುತ್ತಿದ್ದಾರೆ.

ಇದನ್ನೂ ಓದಿ: ಅಮೆರಿಕದಿಂದ ಬೆಂಗಳೂರಿಗೆ ಮರಳಿದ ‘ಕನ್ನಡತಿ’ ಧಾರಾವಾಹಿಯ ರತ್ನಮಾಲಾ; ಶೀಘ್ರವೇ ಧಾರವಾಹಿಗೆ ರೀ ಎಂಟ್ರಿ

ಭುವಿಯಿಂದ ಸಾನಿಯಾಗೆ ಪದೇಪದೇ ಅವಮಾನ ಆಗುತ್ತಿದೆ. ಟೀಚರ್ ಆಗಿ ಕೆಲಸ ಮಾಡುತ್ತಿರುವ ಭುವಿಯನ್ನು ಕೆಲಸದಿಂದ ತೆಗೆಯಬೇಕು ಎನ್ನುವ ನಿರ್ಧಾರಕ್ಕೆ ಸಾನಿಯಾ ಬಂದಿದ್ದಾಳೆ. ಒಂದೊಮ್ಮೆ ರತ್ನಮಾಲಾ ‘ಕನ್ನಡತಿ’ಗೆ ಕಂಬ್ಯಾಕ್ ಮಾಡಿದರೆ ಸಾನಿಯಾ ಹಾಗೂ ವರುಧಿನಿ ಆಟ ನಿಲ್ಲಲಿದೆ.

Published On - 6:35 am, Tue, 2 August 22

Follow Us
17ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಿದ್ದರಾಮಯ್ಯ ಸಜ್ಜು
17ನೇ ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಿದ್ದರಾಮಯ್ಯ ಸಜ್ಜು
ಸಿಬ್ಬಂದಿ ಬಳಿ ಪೈಲ್ಸ್​ ಆಪರೇಷನ್​ ಆಗಿರುವ ಪ್ರೂಫ್ ಕೇಳಿದ ಹಿರಿಯ ಅಧಿಕಾರಿ
ಸಿಬ್ಬಂದಿ ಬಳಿ ಪೈಲ್ಸ್​ ಆಪರೇಷನ್​ ಆಗಿರುವ ಪ್ರೂಫ್ ಕೇಳಿದ ಹಿರಿಯ ಅಧಿಕಾರಿ
ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು?
ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು?
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ
ಅಪಾರ್ಟ್​ಮೆಂಟೇ ಡ್ರಗ್ಸ್ ಸ್ಟೋರ್: ಜೋಡಿಯ ಮೋಜು-ಮಸ್ತಿ ರಹಸ್ಯ ಬಯಲು
ಅಪಾರ್ಟ್​ಮೆಂಟೇ ಡ್ರಗ್ಸ್ ಸ್ಟೋರ್: ಜೋಡಿಯ ಮೋಜು-ಮಸ್ತಿ ರಹಸ್ಯ ಬಯಲು
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್