AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ಗೆಲ್ಲಬೇಕು ಎಂದು ಪ್ರಸಾದ ಕೇಳಿದ ಫ್ಯಾನ್ಸ್; ಹೂವು ಯಾವ ಕಡೆ ಬಿತ್ತು?

ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ಅವರ ಅಭಿಮಾನಿ ಬಳಗ ಭಾರಿ ಪ್ರಮಾಣದಲ್ಲಿ ಬೆಳೆಯುತ್ತಿದೆ. ಹಾಸ್ಯಪ್ರಜ್ಞೆ ಹಾಗೂ ದಿಟ್ಟ ಪ್ರತಿಕ್ರಿಯೆಗಳಿಂದ ಗಮನ ಸೆಳೆದಿರುವ ಗಿಲ್ಲಿ ಕಪ್ ಗೆಲ್ಲಬೇಕೆಂದು ಅಭಿಮಾನಿಗಳು ಪ್ರಸಾದ ಕೇಳಿದ್ದಾರೆ. ಕೋಟಹಳ್ಳಿಯ ಶನಿಕ್ಷೇತ್ರದಲ್ಲಿ ಪ್ರಸಾದ ಕೇಳಿದಾಗ, ಗಿಲ್ಲಿ ಗೆಲುವಿಗೆ ಶುಭ ಸೂಚನೆಯಾಗಿ ಹೂವು ಬಿದ್ದಿದೆ.

ಗಿಲ್ಲಿ ಗೆಲ್ಲಬೇಕು ಎಂದು ಪ್ರಸಾದ ಕೇಳಿದ ಫ್ಯಾನ್ಸ್; ಹೂವು ಯಾವ ಕಡೆ ಬಿತ್ತು?
ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on: Jan 08, 2026 | 7:27 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ನಟನ ಅಭಿಮಾನಿ ವರ್ಗ ತುಂಬಾನೇ ಹಿರಿದಾಗುತ್ತಿದೆ. ಎಲ್ಲಾ ವರ್ಗದ ಜನರು ಅವರಿಗೆ ಅಭಿಮಾನಿಗಳು. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಗಿಲ್ಲಿಗೆ ಬೆಂಬಲ ಕೊಡುತ್ತಿದ್ದಾರೆ. ಅವರು ಕಪ್ ಗೆಲ್ಲಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಈಗ ಈ ವಿಷಯದಲ್ಲಿ ಪ್ರಸಾದ ಕೇಳಲಾಗಿದೆ. ಹೂವು ಯಾವ ಕಡೆ ಬಿತ್ತು, ದೇವರ ಸೂಚನೆ ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಗಿಲ್ಲಿ ನಟ ಅವರು ಹಾಸ್ಯ ಶೋಗಳ ಮೂಲಕ ಗಮನ ಸೆಳೆದವರು. ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಪ್ರಾಪರ್ಟಿ ಕಾಮಿಡಿ ಮೂಲಕ ಎಲ್ಲರ ನಗಿಸುತ್ತಿದ್ದ ಅವರು ಬಿಗ್ ಬಾಸ್​​ಗೆ ಬಂದು ಬೇರೆಯದೇ ರೀತಿಯಲ್ಲಿ ಜನಪ್ರಿಯತೆ ಪಡೆದರು. ಇನ್​​ಸ್ಟಾಗ್ರಾಮ್​​​ನಲ್ಲಿ ಕೇವಲ ಒಂದೂವರೆ ಲಕ್ಷ ಇದ್ದ ಅವರ ಹಿಂಬಾಲಕರ ಸಂಖ್ಯೆ ಈಗ ಮಿಲಿಯನ್ ಸಮೀಪಿಸುತ್ತಿದೆ. ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ ಎಂಬುದಕ್ಕೆ ಇದು ಒಳ್ಳೆಯ ಉದಾಹರಣೆ. ಈಗ ಗಿಲ್ಲಿ ಗೆಲ್ಲಲಿ ಎಂದು ಪ್ರಸಾದ ಕೇಳಲಾಗಿದೆ.

ಇದನ್ನೂ ಓದಿ: ಗಿಲ್ಲಿ ಮನಸ್ಸು ಒಳ್ಳೇದು, ನಾನೇ ತಪ್ಪು ತಿಳಿದುಕೊಂಡಿದ್ದೆ; ಮರುಗಿದ ರಘು

ಕೋಟಹಳ್ಳಿಯ ಶನಿಕ್ಷೇತ್ರದಲ್ಲಿ ಅಭಿಮಾನಿಗಳು ಪ್ರಸಾದ ಕೇಳಿದ್ದಾರೆ. ‘ಗಿಲ್ಲಿ ಗೆಲ್ಲಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಅವರು ಗೆಲ್ಲಲಿ ಎಂದು ಅಭಿಮಾನಿಗಳು ಸಾಕಷ್ಟು ಆಸೆ ಇಟ್ಟುಕೊಂಡಿದ್ದಾರೆ. ಅದನ್ನು ನಡೆಸಿಕೊಡಮ್ಮ’ ಎಂದು ಅರ್ಚಕರು ದೇವರ ಬಳಿ ಕೇಳುತ್ತಿದ್ದಂತೆ ಬಲಭಾಗದಿಂದ ಹೂವು ಬಿದ್ದಿದೆ. ಇದು ಶುಭ ಸೂಚನೆ ಎಂದು ಫ್ಯಾನ್ಸ್ ಹಿಗ್ಗುತ್ತಿದ್ದಾರೆ.

ಗಿಲ್ಲಿ ಅವರು ಹೆಚ್ಚು ಗಮನ ಸೆಳೆಯಲು ಅಶ್ವಿನಿ ಹಾಗೂ ಜಾನ್ವಿ ಕೂಡ ಕಾರಣ. ಅವರು ಸುಖಾಸುಮ್ಮನೆ ರಕ್ಷಿತಾನ ಕೆಣಕಿದರು. ಆ ಬಳಿಕ ಗಿಲ್ಲಿ ನಟ ಅವರಿಗೆ ತಿರುಗೇಟು ಕೊಟ್ಟರು. ಇದರಿಂದ ಅವರ ಹೆಸರು ಗಮನ ಸೆಳೆಯಿತು. ಏಟಿಗೆ ತಿರುಗೇಟು ಕೊಡಲು ಗಿಲ್ಲಿ ಎತ್ತಿದ ಕೈ. ಇಷ್ಟೇ ಅಲ್ಲ, ಗಿಲ್ಲಿ ಅವರು ತಮ್ಮ ಹಾಸ್ಯದ ಮೂಲಕ ಎಲ್ಲರ ಮನ ಗೆದ್ದಿದ್ದಾರೆ. ಅವರು ಗೆಲ್ಲಬೇಕು ಎಂದು ಫ್ಯಾನ್ಸ್ ಹರಕೆ ಹೊರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ