AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ ನಟ  

‘ಬಿಗ್ ಬಾಸ್ ಕನ್ನಡ 12’ರಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಅವರ ಬಾಂಧವ್ಯ 'ಒಂಟಿ-ಜಂಟಿ' ಆಟದ ಮೂಲಕ ಗಟ್ಟಿಯಾಗಿತ್ತು. ಆಟ ಮುಗಿದ ನಂತರ ಇಬ್ಬರೂ ಭಾವುಕರಾದರು. ಕಾವ್ಯಾ ಗಿಲ್ಲಿಯ ಹೈಪರ್ ಸ್ವಭಾವ ಮತ್ತು ಮನೆ ನೆನಪು ಕಡಿಮೆ ಮಾಡಿದ ಗುಣಗಳನ್ನು ಶ್ಲಾಘಿಸಿದರು.

ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ ನಟ  
ಕಾವ್ಯಾ-ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on: Oct 14, 2025 | 7:39 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಗಿಲ್ಲಿ ನಟ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು, ಒಂಟಿ-ಜಂಟಿ ಆಟ. ಕಾವ್ಯಾ ಹಾಗೂ ಗಿಲ್ಲಿ ಜಂಟಿ ಆಗಿದ್ದರು. ಈಗ ಈ ಆಟ ಕೊನೆಯಾಗಿದೆ. ಎಲ್ಲರೂ ತಮ್ಮ ವೈಯಕ್ತಿಕ ಆಟ ತೋರಿಸೋ ಸಮಯ ಬಂದಿದೆ. ಈ ವೇಳೆ ಇಬ್ಬರೂ ಬೇಸರ ಮಾಡಿಕೊಂಡರು. ಕಾವ್ಯಾ ಅವರು ಎಮೋಷನಲ್ ಕೂಡ ಆದರು.

ಕಾವ್ಯಾ ಹಾಗೂ ಗಿಲ್ಲಿ ನಟ ಬೆಸ್ಟ್ ಜಂಟಿ ಆಗಿ ದೊಡ್ಮನೆಯಲ್ಲಿ ಕಾಣಿಸಿಕೊಂಡರು. ಇಬ್ಬರೂ ಎಲ್ಲರಿಗೂ ಕೌಂಟರ್ ಕೊಡುತ್ತಾ, ನಗಿಸುತ್ತಾ ಇದ್ದರು. ಇವರು ಬೇರೆ ಆಗಬೇಕು ಎಂದಾಗ ಸ್ವಲ್ಪ ಬೇಸರ ಆಗೋದು ಕಾಮನ್. ಆದರೆ, ಬೇರೆ ಆಗೋದು ಅನಿವಾರ್ಯ. ಈ ಬಗ್ಗೆ ಕಾವ್ಯಾ ಮಾತನಾಡಿದ್ದಾರೆ. ‘ಗಿಲ್ಲಿ ಅವರು ತುಂಬಾನೇ ಹೈಪರ್ ಆ್ಯಕ್ಟೀವ್. ಇದರಿಂದ ನನ್ನ ಆಟ ಹಿಂದಕ್ಕೆ ಸರಿದಂತೆ ಕಾಣಿಸಿರಬಹುದು’ ಎಂದು ಕಾವ್ಯಾ ಹೇಳಿದರು.

ನಂತರ ಗಿಲ್ಲಿ ಬಗ್ಗೆ ಪಾಸಿಟಿವ್ ಮಾತುಗಳನ್ನು ಹೇಳಿದರು. ‘ಗಿಲ್ಲಿ ನಟ ತುಂಬಾನೇ ನಗಿಸುತ್ತಾನೆ. ಅವನು ಇದ್ದಿದ್ದರಿಂದಲೇ ಮನೆಯ ನೆನಪು ಅಷ್ಟಾಗಿ ಕಾಡಿಲ್ಲ’ ಎಂದು ಕಾವ್ಯಾ ವಿವರಿಸಿದರು. ಆ ಬಳಿಕ ಗಿಲ್ಲಿ ನಟ ಅವರು ಕಾವ್ಯಾನ ಹೊಗಳಿದರು. ಅವರು ಯಾವಾಗಲೂ ಬೆಂಬಲ ಆಗಿ ನಿಂತಿದ್ದಕ್ಕೆ ಖುಷಿ ಆಯಿತು.

ಗಿಲ್ಲಿ ನಟ ಅವರು ಕಾವ್ಯಾ ಅವರ ಕಣ್ಣಿನ ಬಗ್ಗೆ ವಿವರಿಸಿದರು. ಕಣ್ಣು ಎಲ್ಲರನ್ನೂ ಸೆಳೆದುಕೊಳ್ಳುವ ಅಂಗ. ಆದರೆ, ಗಿಲ್ಲಿಗೆ ಮಾತ್ರ ಕಾವ್ಯಾ ಕಣ್ಣು ಕಂಡರೆ ಭಯ. ‘ನಾನು ಮಾತನಾಡುವಾಗ ಕಾವ್ಯಾ ಬೈಯುತ್ತಲೇ ಇರುತ್ತಾಳೆ. ಅದಕ್ಕೆ ನಾನು ಅಷ್ಟಾಗಿ ತಲೆ ಕೆಡಿಸಿಕೊಳ್ಳೋದಿಲ್ಲ. ಆದರೆ, ಅವಳು ಒಮ್ಮೆ ಕಣ್ಣಲ್ಲಿ ಲುಕ್ ಕೊಟ್ಟರೆ ಸಾಕು ನಾನು ಗಪ್​-ಚುಪ್ ಆಗ್ತೀನಿ’ ಎಂದರು ಗಿಲ್ಲಿ.

ಇದನ್ನೂ ಓದಿ: ಅ.18, 19ರಂದು ‘ಬಿಗ್ ಬಾಸ್ ಕನ್ನಡ 12’ ಮೊದಲ ಫಿನಾಲೆ: ಆಟದಲ್ಲಿ ಭಾರಿ ಟ್ವಿಸ್ಟ್

ಈ ವಾರ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಕೆಲವು ಸ್ಪರ್ಧಿಗಳು ದೊಡ್ಮನೆಯಿಂದ ಔಟ್ ಆಗಲಿದ್ದಾರೆ. ಅದಕ್ಕೂ ಮೊದಲು ವೈಯಕ್ತಿಕ ಆಟ ತೋರಿಸೋ ಅವಕಾಶ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?