AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ ನಟ  

‘ಬಿಗ್ ಬಾಸ್ ಕನ್ನಡ 12’ರಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಅವರ ಬಾಂಧವ್ಯ 'ಒಂಟಿ-ಜಂಟಿ' ಆಟದ ಮೂಲಕ ಗಟ್ಟಿಯಾಗಿತ್ತು. ಆಟ ಮುಗಿದ ನಂತರ ಇಬ್ಬರೂ ಭಾವುಕರಾದರು. ಕಾವ್ಯಾ ಗಿಲ್ಲಿಯ ಹೈಪರ್ ಸ್ವಭಾವ ಮತ್ತು ಮನೆ ನೆನಪು ಕಡಿಮೆ ಮಾಡಿದ ಗುಣಗಳನ್ನು ಶ್ಲಾಘಿಸಿದರು.

ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ ನಟ  
ಕಾವ್ಯಾ-ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on: Oct 14, 2025 | 7:39 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಗಿಲ್ಲಿ ನಟ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಇದಕ್ಕೆ ಕಾರಣ ಆಗಿದ್ದು, ಒಂಟಿ-ಜಂಟಿ ಆಟ. ಕಾವ್ಯಾ ಹಾಗೂ ಗಿಲ್ಲಿ ಜಂಟಿ ಆಗಿದ್ದರು. ಈಗ ಈ ಆಟ ಕೊನೆಯಾಗಿದೆ. ಎಲ್ಲರೂ ತಮ್ಮ ವೈಯಕ್ತಿಕ ಆಟ ತೋರಿಸೋ ಸಮಯ ಬಂದಿದೆ. ಈ ವೇಳೆ ಇಬ್ಬರೂ ಬೇಸರ ಮಾಡಿಕೊಂಡರು. ಕಾವ್ಯಾ ಅವರು ಎಮೋಷನಲ್ ಕೂಡ ಆದರು.

ಕಾವ್ಯಾ ಹಾಗೂ ಗಿಲ್ಲಿ ನಟ ಬೆಸ್ಟ್ ಜಂಟಿ ಆಗಿ ದೊಡ್ಮನೆಯಲ್ಲಿ ಕಾಣಿಸಿಕೊಂಡರು. ಇಬ್ಬರೂ ಎಲ್ಲರಿಗೂ ಕೌಂಟರ್ ಕೊಡುತ್ತಾ, ನಗಿಸುತ್ತಾ ಇದ್ದರು. ಇವರು ಬೇರೆ ಆಗಬೇಕು ಎಂದಾಗ ಸ್ವಲ್ಪ ಬೇಸರ ಆಗೋದು ಕಾಮನ್. ಆದರೆ, ಬೇರೆ ಆಗೋದು ಅನಿವಾರ್ಯ. ಈ ಬಗ್ಗೆ ಕಾವ್ಯಾ ಮಾತನಾಡಿದ್ದಾರೆ. ‘ಗಿಲ್ಲಿ ಅವರು ತುಂಬಾನೇ ಹೈಪರ್ ಆ್ಯಕ್ಟೀವ್. ಇದರಿಂದ ನನ್ನ ಆಟ ಹಿಂದಕ್ಕೆ ಸರಿದಂತೆ ಕಾಣಿಸಿರಬಹುದು’ ಎಂದು ಕಾವ್ಯಾ ಹೇಳಿದರು.

ನಂತರ ಗಿಲ್ಲಿ ಬಗ್ಗೆ ಪಾಸಿಟಿವ್ ಮಾತುಗಳನ್ನು ಹೇಳಿದರು. ‘ಗಿಲ್ಲಿ ನಟ ತುಂಬಾನೇ ನಗಿಸುತ್ತಾನೆ. ಅವನು ಇದ್ದಿದ್ದರಿಂದಲೇ ಮನೆಯ ನೆನಪು ಅಷ್ಟಾಗಿ ಕಾಡಿಲ್ಲ’ ಎಂದು ಕಾವ್ಯಾ ವಿವರಿಸಿದರು. ಆ ಬಳಿಕ ಗಿಲ್ಲಿ ನಟ ಅವರು ಕಾವ್ಯಾನ ಹೊಗಳಿದರು. ಅವರು ಯಾವಾಗಲೂ ಬೆಂಬಲ ಆಗಿ ನಿಂತಿದ್ದಕ್ಕೆ ಖುಷಿ ಆಯಿತು.

ಗಿಲ್ಲಿ ನಟ ಅವರು ಕಾವ್ಯಾ ಅವರ ಕಣ್ಣಿನ ಬಗ್ಗೆ ವಿವರಿಸಿದರು. ಕಣ್ಣು ಎಲ್ಲರನ್ನೂ ಸೆಳೆದುಕೊಳ್ಳುವ ಅಂಗ. ಆದರೆ, ಗಿಲ್ಲಿಗೆ ಮಾತ್ರ ಕಾವ್ಯಾ ಕಣ್ಣು ಕಂಡರೆ ಭಯ. ‘ನಾನು ಮಾತನಾಡುವಾಗ ಕಾವ್ಯಾ ಬೈಯುತ್ತಲೇ ಇರುತ್ತಾಳೆ. ಅದಕ್ಕೆ ನಾನು ಅಷ್ಟಾಗಿ ತಲೆ ಕೆಡಿಸಿಕೊಳ್ಳೋದಿಲ್ಲ. ಆದರೆ, ಅವಳು ಒಮ್ಮೆ ಕಣ್ಣಲ್ಲಿ ಲುಕ್ ಕೊಟ್ಟರೆ ಸಾಕು ನಾನು ಗಪ್​-ಚುಪ್ ಆಗ್ತೀನಿ’ ಎಂದರು ಗಿಲ್ಲಿ.

ಇದನ್ನೂ ಓದಿ: ಅ.18, 19ರಂದು ‘ಬಿಗ್ ಬಾಸ್ ಕನ್ನಡ 12’ ಮೊದಲ ಫಿನಾಲೆ: ಆಟದಲ್ಲಿ ಭಾರಿ ಟ್ವಿಸ್ಟ್

ಈ ವಾರ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಕೆಲವು ಸ್ಪರ್ಧಿಗಳು ದೊಡ್ಮನೆಯಿಂದ ಔಟ್ ಆಗಲಿದ್ದಾರೆ. ಅದಕ್ಕೂ ಮೊದಲು ವೈಯಕ್ತಿಕ ಆಟ ತೋರಿಸೋ ಅವಕಾಶ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!