AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಪರಿಯಾಗಿ ಬೇಡಿದ್ರೂ ಕೊಟ್ಟಿಲ್ಲ; ಗಿಲ್ಲಿ ಜೊತೆ ರಘು ನಡೆದುಕೊಂಡ ರೀತಿ ಬಗ್ಗೆ ಶುರುವಾಗಿದೆ ಚರ್ಚೆ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಘು ಮತ್ತು ಗಿಲ್ಲಿ ನಡುವಿನ ಉತ್ತಮ ಗೆಳೆತನ ಈಗ ಮುರಿದು ಬೀಳುವ ಹಂತದಲ್ಲಿದೆ. ರಘು ಅವರ ವಿಚಿತ್ರ ವರ್ತನೆ ಚರ್ಚೆ ಹುಟ್ಟುಹಾಕಿದೆ. ಅವರು ಗಿಲ್ಲಿ ಕಳಪೆ ಟ್ಯಾಗ್ ನೀಡಿದ್ದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ. ರಘು ಅವರ ಗೆಳೆತನ ನಕಲಿಯಾಗಿತ್ತಾ ಎಂಬ ಪ್ರಶ್ನೆ ಈಗ ಮೂಡಿದೆ.

ಪರಿಪರಿಯಾಗಿ ಬೇಡಿದ್ರೂ ಕೊಟ್ಟಿಲ್ಲ; ಗಿಲ್ಲಿ ಜೊತೆ ರಘು ನಡೆದುಕೊಂಡ ರೀತಿ ಬಗ್ಗೆ ಶುರುವಾಗಿದೆ ಚರ್ಚೆ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Dec 06, 2025 | 11:51 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಘು ಮತ್ತು ಗಿಲ್ಲಿ (Gilli) ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಅದು ಈಗ ಬ್ರೇಕ್ ಆಗುವ ಹಂತದಲ್ಲಿ ಇದೆ. ರಘು ಅವರು ಗಿಲ್ಲಿ ಬಗ್ಗೆ ಸಾಕಷ್ಟು ದ್ವೇಷ ಬೆಳೆಸಿಕೊಂಡಿದ್ದಾರೆ. ಈಗ ರಘು ಅವರು ಗಿಲ್ಲಿ ಜೊತೆ ನಡೆದುಕೊಂಡ ರೀತಿಯನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ರಘು ಇಷ್ಟು ದಿನ ನಡೆದುಕೊಂಡ ರೀತಿ ಫೇಕ್ ಆಗಿತ್ತಾ ಎಂಬ ಚರ್ಚೆ ಹುಟ್ಟುವಂತೆ ಆಗಿದೆ.

ಬಿಗ್ ಬಾಸ್ ಮನೆಯಲ್ಲಿನ ಒಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಘು ಅವರು ಪ್ಲೇಟ್​ನಲ್ಲಿ ಚಪಾತಿ ತಿನ್ನುತ್ತಾ ಇರುತ್ತಾರೆ. ಅಲ್ಲಿಗೆ ತೆರಳುವ ಗಿಲ್ಲಿ ನಟ ತಮಗೆ ಒಂದು ಪೀಸ್ ಕೊಡುವಂತೆ ಕೇಳುತ್ತಾರೆ. ಹಲವು ನಿಮಿಷಗಳ ಕಾಲ ಇವರ ಮಧ್ಯೆ ಚರ್ಚೆ ಆಗುತ್ತದೆ. ಏನೇ ಮಾಡಿದರೂ ಇದಕ್ಕೆ ರಘು ಒಪ್ಪುವುದೇ ಇಲ್ಲ. ಆ ಬಳಿಕ ಬೇಸರದಲ್ಲಿ ಗಿಲ್ಲಿ ಅಲ್ಲಿಂದ ತೆರಳುತ್ತಾರೆ.

ಆ ಬಳಿಕ ರಘು ಬಳಿ ಬರೋ ರಾಶಿಕಾ ಅವರು, ಯಾವುದೇ ಒಪ್ಪಿಗೆ ಇಲ್ಲದೆ ರಘು ಪ್ಲೇಟ್​ನಿಂದ ಆ ತಿಂಡಿಯನ್ನು ಸವಿಯುತ್ತಾರೆ. ಗಿಲ್ಲಿ ಹಾಗೂ ರಘು ಒಳ್ಳೆಯ ಗೆಳೆಯರಾಗಿದ್ದರು. ಗಿಲ್ಲಿಯನ್ನು ರಘು ಅಷ್ಟು ಕೀಳಾಗಿ ಕಂಡಿದ್ದು ಏಕೆ ಎಂಬ ಚರ್ಚೆ ಆಗುತ್ತಿದೆ.

ಗಿಲ್ಲಿ ನನ್ನ ಬಳಿ ಅತಿಯಾಗಿ ನಡೆದುಕೊಂಡ ಎಂದು ರಘು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಗಿಲ್ಲಿ ತಮಗೆ ಅನಾರೋಗ್ಯ ಆಗಿದೆ ಎಂದು ಹೇಳಿದರೂ ಕೇಳದೆ ಅವರನ್ನು ತೆಗೆದು ಸ್ವಮಿಂಗ್ ಪೂಲ್​ಗೆ ತಳ್ಳಿದ್ದರು ರಘು.ಇದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಗಿಲ್ಲಿ ಕಂಡರೆ ರಘುಗೆ ಏಕೆ ಅಷ್ಟು ದ್ವೇಷ? ಅವರಿಂದಲೇ ಸಿಕ್ಕಿತು ವಿವರಣೆ

ಇನ್ನು, ಗಿಲ್ಲಿಗೆ ಕಳಪೆ ಕೊಟ್ಟ ವಿಷಯ ಕೂಡ ಚರ್ಚೆ ಆಗುತ್ತಿದೆ. ಇಡೀ ವಾರ ಮನೆಯಲ್ಲಿ ಎಲ್ಲರನ್ನೂ ನಗಿಸುವ ಕೆಲಸವನ್ನು ಗಿಲ್ಲಿ ಮಾಡಿದ್ದಾರೆ. ಆದರೆ, ವಾರಾಂತ್ಯದಲ್ಲಿ ಅವರಿಗೆ ಸಿಲ್ಲಿ ಕಾರಣಗಳನ್ನು ನೀಡಿ ಕಳಪೆ ಕೊಟ್ಟಿದ್ದಾರೆ. ಈ ರೀತಿ ಮಾಡಿದ್ದು ತಪ್ಪು ಎಂಬ ಮಾತು ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!