AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಪರಿಯಾಗಿ ಬೇಡಿದ್ರೂ ಕೊಟ್ಟಿಲ್ಲ; ಗಿಲ್ಲಿ ಜೊತೆ ರಘು ನಡೆದುಕೊಂಡ ರೀತಿ ಬಗ್ಗೆ ಶುರುವಾಗಿದೆ ಚರ್ಚೆ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಘು ಮತ್ತು ಗಿಲ್ಲಿ ನಡುವಿನ ಉತ್ತಮ ಗೆಳೆತನ ಈಗ ಮುರಿದು ಬೀಳುವ ಹಂತದಲ್ಲಿದೆ. ರಘು ಅವರ ವಿಚಿತ್ರ ವರ್ತನೆ ಚರ್ಚೆ ಹುಟ್ಟುಹಾಕಿದೆ. ಅವರು ಗಿಲ್ಲಿ ಕಳಪೆ ಟ್ಯಾಗ್ ನೀಡಿದ್ದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ. ರಘು ಅವರ ಗೆಳೆತನ ನಕಲಿಯಾಗಿತ್ತಾ ಎಂಬ ಪ್ರಶ್ನೆ ಈಗ ಮೂಡಿದೆ.

ಪರಿಪರಿಯಾಗಿ ಬೇಡಿದ್ರೂ ಕೊಟ್ಟಿಲ್ಲ; ಗಿಲ್ಲಿ ಜೊತೆ ರಘು ನಡೆದುಕೊಂಡ ರೀತಿ ಬಗ್ಗೆ ಶುರುವಾಗಿದೆ ಚರ್ಚೆ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Dec 06, 2025 | 11:51 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಘು ಮತ್ತು ಗಿಲ್ಲಿ (Gilli) ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಅದು ಈಗ ಬ್ರೇಕ್ ಆಗುವ ಹಂತದಲ್ಲಿ ಇದೆ. ರಘು ಅವರು ಗಿಲ್ಲಿ ಬಗ್ಗೆ ಸಾಕಷ್ಟು ದ್ವೇಷ ಬೆಳೆಸಿಕೊಂಡಿದ್ದಾರೆ. ಈಗ ರಘು ಅವರು ಗಿಲ್ಲಿ ಜೊತೆ ನಡೆದುಕೊಂಡ ರೀತಿಯನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ರಘು ಇಷ್ಟು ದಿನ ನಡೆದುಕೊಂಡ ರೀತಿ ಫೇಕ್ ಆಗಿತ್ತಾ ಎಂಬ ಚರ್ಚೆ ಹುಟ್ಟುವಂತೆ ಆಗಿದೆ.

ಬಿಗ್ ಬಾಸ್ ಮನೆಯಲ್ಲಿನ ಒಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಘು ಅವರು ಪ್ಲೇಟ್​ನಲ್ಲಿ ಚಪಾತಿ ತಿನ್ನುತ್ತಾ ಇರುತ್ತಾರೆ. ಅಲ್ಲಿಗೆ ತೆರಳುವ ಗಿಲ್ಲಿ ನಟ ತಮಗೆ ಒಂದು ಪೀಸ್ ಕೊಡುವಂತೆ ಕೇಳುತ್ತಾರೆ. ಹಲವು ನಿಮಿಷಗಳ ಕಾಲ ಇವರ ಮಧ್ಯೆ ಚರ್ಚೆ ಆಗುತ್ತದೆ. ಏನೇ ಮಾಡಿದರೂ ಇದಕ್ಕೆ ರಘು ಒಪ್ಪುವುದೇ ಇಲ್ಲ. ಆ ಬಳಿಕ ಬೇಸರದಲ್ಲಿ ಗಿಲ್ಲಿ ಅಲ್ಲಿಂದ ತೆರಳುತ್ತಾರೆ.

ಆ ಬಳಿಕ ರಘು ಬಳಿ ಬರೋ ರಾಶಿಕಾ ಅವರು, ಯಾವುದೇ ಒಪ್ಪಿಗೆ ಇಲ್ಲದೆ ರಘು ಪ್ಲೇಟ್​ನಿಂದ ಆ ತಿಂಡಿಯನ್ನು ಸವಿಯುತ್ತಾರೆ. ಗಿಲ್ಲಿ ಹಾಗೂ ರಘು ಒಳ್ಳೆಯ ಗೆಳೆಯರಾಗಿದ್ದರು. ಗಿಲ್ಲಿಯನ್ನು ರಘು ಅಷ್ಟು ಕೀಳಾಗಿ ಕಂಡಿದ್ದು ಏಕೆ ಎಂಬ ಚರ್ಚೆ ಆಗುತ್ತಿದೆ.

ಗಿಲ್ಲಿ ನನ್ನ ಬಳಿ ಅತಿಯಾಗಿ ನಡೆದುಕೊಂಡ ಎಂದು ರಘು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಗಿಲ್ಲಿ ತಮಗೆ ಅನಾರೋಗ್ಯ ಆಗಿದೆ ಎಂದು ಹೇಳಿದರೂ ಕೇಳದೆ ಅವರನ್ನು ತೆಗೆದು ಸ್ವಮಿಂಗ್ ಪೂಲ್​ಗೆ ತಳ್ಳಿದ್ದರು ರಘು.ಇದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಗಿಲ್ಲಿ ಕಂಡರೆ ರಘುಗೆ ಏಕೆ ಅಷ್ಟು ದ್ವೇಷ? ಅವರಿಂದಲೇ ಸಿಕ್ಕಿತು ವಿವರಣೆ

ಇನ್ನು, ಗಿಲ್ಲಿಗೆ ಕಳಪೆ ಕೊಟ್ಟ ವಿಷಯ ಕೂಡ ಚರ್ಚೆ ಆಗುತ್ತಿದೆ. ಇಡೀ ವಾರ ಮನೆಯಲ್ಲಿ ಎಲ್ಲರನ್ನೂ ನಗಿಸುವ ಕೆಲಸವನ್ನು ಗಿಲ್ಲಿ ಮಾಡಿದ್ದಾರೆ. ಆದರೆ, ವಾರಾಂತ್ಯದಲ್ಲಿ ಅವರಿಗೆ ಸಿಲ್ಲಿ ಕಾರಣಗಳನ್ನು ನೀಡಿ ಕಳಪೆ ಕೊಟ್ಟಿದ್ದಾರೆ. ಈ ರೀತಿ ಮಾಡಿದ್ದು ತಪ್ಪು ಎಂಬ ಮಾತು ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಹರಿಹರ ಪಂಚಮಸಾಲಿ ಮಠದಲ್ಲಿ 'ಲೆಕ್ಕ ಕೊಡಿ' ಅಭಿಯಾನ
ಹರಿಹರ ಪಂಚಮಸಾಲಿ ಮಠದಲ್ಲಿ 'ಲೆಕ್ಕ ಕೊಡಿ' ಅಭಿಯಾನ
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಜನ!
ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಜನ!
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು
ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು