AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಪರಿಯಾಗಿ ಬೇಡಿದ್ರೂ ಕೊಟ್ಟಿಲ್ಲ; ಗಿಲ್ಲಿ ಜೊತೆ ರಘು ನಡೆದುಕೊಂಡ ರೀತಿ ಬಗ್ಗೆ ಶುರುವಾಗಿದೆ ಚರ್ಚೆ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಘು ಮತ್ತು ಗಿಲ್ಲಿ ನಡುವಿನ ಉತ್ತಮ ಗೆಳೆತನ ಈಗ ಮುರಿದು ಬೀಳುವ ಹಂತದಲ್ಲಿದೆ. ರಘು ಅವರ ವಿಚಿತ್ರ ವರ್ತನೆ ಚರ್ಚೆ ಹುಟ್ಟುಹಾಕಿದೆ. ಅವರು ಗಿಲ್ಲಿ ಕಳಪೆ ಟ್ಯಾಗ್ ನೀಡಿದ್ದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ. ರಘು ಅವರ ಗೆಳೆತನ ನಕಲಿಯಾಗಿತ್ತಾ ಎಂಬ ಪ್ರಶ್ನೆ ಈಗ ಮೂಡಿದೆ.

ಪರಿಪರಿಯಾಗಿ ಬೇಡಿದ್ರೂ ಕೊಟ್ಟಿಲ್ಲ; ಗಿಲ್ಲಿ ಜೊತೆ ರಘು ನಡೆದುಕೊಂಡ ರೀತಿ ಬಗ್ಗೆ ಶುರುವಾಗಿದೆ ಚರ್ಚೆ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Dec 06, 2025 | 11:51 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಘು ಮತ್ತು ಗಿಲ್ಲಿ (Gilli) ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಅದು ಈಗ ಬ್ರೇಕ್ ಆಗುವ ಹಂತದಲ್ಲಿ ಇದೆ. ರಘು ಅವರು ಗಿಲ್ಲಿ ಬಗ್ಗೆ ಸಾಕಷ್ಟು ದ್ವೇಷ ಬೆಳೆಸಿಕೊಂಡಿದ್ದಾರೆ. ಈಗ ರಘು ಅವರು ಗಿಲ್ಲಿ ಜೊತೆ ನಡೆದುಕೊಂಡ ರೀತಿಯನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ರಘು ಇಷ್ಟು ದಿನ ನಡೆದುಕೊಂಡ ರೀತಿ ಫೇಕ್ ಆಗಿತ್ತಾ ಎಂಬ ಚರ್ಚೆ ಹುಟ್ಟುವಂತೆ ಆಗಿದೆ.

ಬಿಗ್ ಬಾಸ್ ಮನೆಯಲ್ಲಿನ ಒಂದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಘು ಅವರು ಪ್ಲೇಟ್​ನಲ್ಲಿ ಚಪಾತಿ ತಿನ್ನುತ್ತಾ ಇರುತ್ತಾರೆ. ಅಲ್ಲಿಗೆ ತೆರಳುವ ಗಿಲ್ಲಿ ನಟ ತಮಗೆ ಒಂದು ಪೀಸ್ ಕೊಡುವಂತೆ ಕೇಳುತ್ತಾರೆ. ಹಲವು ನಿಮಿಷಗಳ ಕಾಲ ಇವರ ಮಧ್ಯೆ ಚರ್ಚೆ ಆಗುತ್ತದೆ. ಏನೇ ಮಾಡಿದರೂ ಇದಕ್ಕೆ ರಘು ಒಪ್ಪುವುದೇ ಇಲ್ಲ. ಆ ಬಳಿಕ ಬೇಸರದಲ್ಲಿ ಗಿಲ್ಲಿ ಅಲ್ಲಿಂದ ತೆರಳುತ್ತಾರೆ.

ಆ ಬಳಿಕ ರಘು ಬಳಿ ಬರೋ ರಾಶಿಕಾ ಅವರು, ಯಾವುದೇ ಒಪ್ಪಿಗೆ ಇಲ್ಲದೆ ರಘು ಪ್ಲೇಟ್​ನಿಂದ ಆ ತಿಂಡಿಯನ್ನು ಸವಿಯುತ್ತಾರೆ. ಗಿಲ್ಲಿ ಹಾಗೂ ರಘು ಒಳ್ಳೆಯ ಗೆಳೆಯರಾಗಿದ್ದರು. ಗಿಲ್ಲಿಯನ್ನು ರಘು ಅಷ್ಟು ಕೀಳಾಗಿ ಕಂಡಿದ್ದು ಏಕೆ ಎಂಬ ಚರ್ಚೆ ಆಗುತ್ತಿದೆ.

ಗಿಲ್ಲಿ ನನ್ನ ಬಳಿ ಅತಿಯಾಗಿ ನಡೆದುಕೊಂಡ ಎಂದು ರಘು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಗಿಲ್ಲಿ ತಮಗೆ ಅನಾರೋಗ್ಯ ಆಗಿದೆ ಎಂದು ಹೇಳಿದರೂ ಕೇಳದೆ ಅವರನ್ನು ತೆಗೆದು ಸ್ವಮಿಂಗ್ ಪೂಲ್​ಗೆ ತಳ್ಳಿದ್ದರು ರಘು.ಇದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಗಿಲ್ಲಿ ಕಂಡರೆ ರಘುಗೆ ಏಕೆ ಅಷ್ಟು ದ್ವೇಷ? ಅವರಿಂದಲೇ ಸಿಕ್ಕಿತು ವಿವರಣೆ

ಇನ್ನು, ಗಿಲ್ಲಿಗೆ ಕಳಪೆ ಕೊಟ್ಟ ವಿಷಯ ಕೂಡ ಚರ್ಚೆ ಆಗುತ್ತಿದೆ. ಇಡೀ ವಾರ ಮನೆಯಲ್ಲಿ ಎಲ್ಲರನ್ನೂ ನಗಿಸುವ ಕೆಲಸವನ್ನು ಗಿಲ್ಲಿ ಮಾಡಿದ್ದಾರೆ. ಆದರೆ, ವಾರಾಂತ್ಯದಲ್ಲಿ ಅವರಿಗೆ ಸಿಲ್ಲಿ ಕಾರಣಗಳನ್ನು ನೀಡಿ ಕಳಪೆ ಕೊಟ್ಟಿದ್ದಾರೆ. ಈ ರೀತಿ ಮಾಡಿದ್ದು ತಪ್ಪು ಎಂಬ ಮಾತು ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ