AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು?

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ, ತಮ್ಮ ಗೆಲುವಿನ ನಂತರ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಇಬ್ಬರೂ ಹಿರಿಯ ನಟರು ಗಿಲ್ಲಿ ಬದುಕಿಗೆ ದಾರಿ ದೀಪ. ಇಬ್ಬರೂ ತಾರೆಯರ ಶುಭ ಹಾರೈಕೆಯಿಂದ ಗಿಲ್ಲಿ ಖುಷಿಪಟ್ಟಿದ್ದಾರೆ.

ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು?
ಗಿಲ್ಲಿ ಹಾಗೂ ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Jan 21, 2026 | 6:54 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ವಿನ್ನರ್ ಆಗಿ ಹೊರ ಹೊಮ್ಮಿರೋ ಗಿಲ್ಲಿ ನಟ ಅವರು ಇತ್ತೀಚೆಗೆ ತಮ್ಮ ಹುಟ್ಟೂರಲ್ಲಿ ದೊಡ್ಡದಾದ ರ್ಯಾಲಿ ಮಾಡಿದ್ದರು. ಆ ಬಳಿಕ ಅವರು ಮರಳಿ ಬೆಂಗಳೂರಿಗೆ ಬಂದಿದ್ದರು. ಈಗ ಅವರು ಶಿವರಾಜ್​​​ಕುಮಾರ್ ಹಾಗೂ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ಗಿಲ್ಲಿ ಬದುಕಿಗೆ ದಾರಿ ದೀಪ ಆದವರು. ಹೀಗಾಗಿ, ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ.

ಗಿಲ್ಲಿ ನಟ ಅವರಿಗೆ ಶಿವರಾಜ್​​ಕುಮಾರ್ ಮೊದಲೇ ಪರಿಚಯ. ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​​ಕುಮಾರ್ ಜಡ್ಜ್ ಸ್ಥಾನದಲ್ಲಿ ಇದ್ದರು. ಸ್ಪರ್ಧಿಯಾಗಿ ತೆರಳಿದ್ದ ಗಿಲ್ಲಿ ಅವರು ಎಲ್ಲರನ್ನೂ ರಂಜಿಸಿದ್ದರು. ಆಗಲೇ ಶಿವರಾಜ್​​ಕುಮಾರ್​​ಗೆ ಗಿಲ್ಲಿ ಇಷ್ಟ ಆಗಿದ್ದರು. ಗಿಲ್ಲಿ ಬಿಗ್ ಬಾಸ್ ಮನೆಯಲ್ಲಿರುವಾಗ ಶಿವಣ್ಣ ಶುಭ ಹಾರೈಸಿದ್ದರು. ಗಿಲ್ಲಿನೇ ಗೆಲ್ಲೋದು ಎಂದು ಹೇಳಿದ್ದರು. ಹೊರ ಬಂದ ಬಳಿಕ ಗಿಲ್ಲಿಗೆ ಈ ವಿಷಯ ಗೊತ್ತಾಗಿದೆ. ಹೀಗಾಗಿ, ತಕ್ಷಣವೇ ಶಿವಣ್ಣ ಹಾಗೂ ಗೀತಕ್ಕನ ಭೇಟಿ ಮಾಡಿದ್ದಾರೆ.

ಸುದೀಪ್ ಅವರನ್ನೂ ಗಿಲ್ಲಿ ಭೇಟಿ ಮಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿರೋವಾಗ ಎಲ್ಲ ವಿಷಯಗಳನ್ನು ಸುದೀಪ್ ಮನಬಿಚ್ಚಿ ಮಾತನಾಡಲು ಸಾಧ್ಯವಿಲ್ಲ. ಈ ಕಾರಣದಿಂದ ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಗಿಲ್ಲಿ ಹೋಗಿ ಸುದೀಪ್​​ನ ಭೇಟಿ ಮಾಡಿದ್ದಾರೆ. ಗಿಲ್ಲಿ ಅಭಿಮಾನಿಗಳು ಸುದೀಪ್ ಅವರ ಬಗ್ಗೆ ಈ ಮೊದಲು ಅಸಮಾಧಾನ ಹೊರಹಾಕಿದ್ದು ಇದೆ. ಇದಕ್ಕೆ ಕಾರಣ ಆಗಿದ್ದು ಸೀಸನ್ ಚಪ್ಪಾಳೆ. ಈ ವಿಷಯದಲ್ಲಿ ಗಿಲ್ಲಿ ಅವರು ಅಭಿಮಾನಿಗಳ ಪರವಾಗಿ ಸುದೀಪ್ ಬಳಿ ಕ್ಷಮೆ ಕೇಳಿರಬಹುದು ಎಂದು ಊಹಿಸಲಾಗುತ್ತಿದೆ.

ಇದನ್ನೂ ಓದಿ: ಊರಿಗೆ ಬಂದರೂ ಮನೆಗೆ ಹೋಗದೇ ವಾಪಸ್ ಬೆಂಗಳೂರಿಗೆ ತೆರಳಿದ ಗಿಲ್ಲಿ ನಟ

ಸುದೀಪ್ ಹಾಗೂ ಶಿವರಾಜ್​​ಕುಮಾರ್ ಅವರು ಗಿಲ್ಲಿಗೆ ಒಳ್ಳೆಯದಾಗಲಿ ಎಂದು ಮನಸ್ಫೂರ್ತಿಯಾಗಿ ಹಾರೈಸಿದ್ದಾರೆ. ಈ ಹಾರೈಕೆಯಿಂದ ಅವರು ತುಂಬಾನೇ ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಆಫರ್​​​ಗಳು ಅವರನ್ನು ಹುಡುಕಿ ಬರೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ