ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು?

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ, ತಮ್ಮ ಗೆಲುವಿನ ನಂತರ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಇಬ್ಬರೂ ಹಿರಿಯ ನಟರು ಗಿಲ್ಲಿ ಬದುಕಿಗೆ ದಾರಿ ದೀಪ. ಇಬ್ಬರೂ ತಾರೆಯರ ಶುಭ ಹಾರೈಕೆಯಿಂದ ಗಿಲ್ಲಿ ಖುಷಿಪಟ್ಟಿದ್ದಾರೆ.

ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು?
ಗಿಲ್ಲಿ ಹಾಗೂ ಶಿವಣ್ಣ

Updated on: Jan 21, 2026 | 6:54 AM

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ವಿನ್ನರ್ ಆಗಿ ಹೊರ ಹೊಮ್ಮಿರೋ ಗಿಲ್ಲಿ ನಟ ಅವರು ಇತ್ತೀಚೆಗೆ ತಮ್ಮ ಹುಟ್ಟೂರಲ್ಲಿ ದೊಡ್ಡದಾದ ರ್ಯಾಲಿ ಮಾಡಿದ್ದರು. ಆ ಬಳಿಕ ಅವರು ಮರಳಿ ಬೆಂಗಳೂರಿಗೆ ಬಂದಿದ್ದರು. ಈಗ ಅವರು ಶಿವರಾಜ್​​​ಕುಮಾರ್ ಹಾಗೂ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ಗಿಲ್ಲಿ ಬದುಕಿಗೆ ದಾರಿ ದೀಪ ಆದವರು. ಹೀಗಾಗಿ, ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ.

ಗಿಲ್ಲಿ ನಟ ಅವರಿಗೆ ಶಿವರಾಜ್​​ಕುಮಾರ್ ಮೊದಲೇ ಪರಿಚಯ. ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​​ಕುಮಾರ್ ಜಡ್ಜ್ ಸ್ಥಾನದಲ್ಲಿ ಇದ್ದರು. ಸ್ಪರ್ಧಿಯಾಗಿ ತೆರಳಿದ್ದ ಗಿಲ್ಲಿ ಅವರು ಎಲ್ಲರನ್ನೂ ರಂಜಿಸಿದ್ದರು. ಆಗಲೇ ಶಿವರಾಜ್​​ಕುಮಾರ್​​ಗೆ ಗಿಲ್ಲಿ ಇಷ್ಟ ಆಗಿದ್ದರು. ಗಿಲ್ಲಿ ಬಿಗ್ ಬಾಸ್ ಮನೆಯಲ್ಲಿರುವಾಗ ಶಿವಣ್ಣ ಶುಭ ಹಾರೈಸಿದ್ದರು. ಗಿಲ್ಲಿನೇ ಗೆಲ್ಲೋದು ಎಂದು ಹೇಳಿದ್ದರು. ಹೊರ ಬಂದ ಬಳಿಕ ಗಿಲ್ಲಿಗೆ ಈ ವಿಷಯ ಗೊತ್ತಾಗಿದೆ. ಹೀಗಾಗಿ, ತಕ್ಷಣವೇ ಶಿವಣ್ಣ ಹಾಗೂ ಗೀತಕ್ಕನ ಭೇಟಿ ಮಾಡಿದ್ದಾರೆ.

ಸುದೀಪ್ ಅವರನ್ನೂ ಗಿಲ್ಲಿ ಭೇಟಿ ಮಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿರೋವಾಗ ಎಲ್ಲ ವಿಷಯಗಳನ್ನು ಸುದೀಪ್ ಮನಬಿಚ್ಚಿ ಮಾತನಾಡಲು ಸಾಧ್ಯವಿಲ್ಲ. ಈ ಕಾರಣದಿಂದ ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಗಿಲ್ಲಿ ಹೋಗಿ ಸುದೀಪ್​​ನ ಭೇಟಿ ಮಾಡಿದ್ದಾರೆ. ಗಿಲ್ಲಿ ಅಭಿಮಾನಿಗಳು ಸುದೀಪ್ ಅವರ ಬಗ್ಗೆ ಈ ಮೊದಲು ಅಸಮಾಧಾನ ಹೊರಹಾಕಿದ್ದು ಇದೆ. ಇದಕ್ಕೆ ಕಾರಣ ಆಗಿದ್ದು ಸೀಸನ್ ಚಪ್ಪಾಳೆ. ಈ ವಿಷಯದಲ್ಲಿ ಗಿಲ್ಲಿ ಅವರು ಅಭಿಮಾನಿಗಳ ಪರವಾಗಿ ಸುದೀಪ್ ಬಳಿ ಕ್ಷಮೆ ಕೇಳಿರಬಹುದು ಎಂದು ಊಹಿಸಲಾಗುತ್ತಿದೆ.

ಇದನ್ನೂ ಓದಿ: ಊರಿಗೆ ಬಂದರೂ ಮನೆಗೆ ಹೋಗದೇ ವಾಪಸ್ ಬೆಂಗಳೂರಿಗೆ ತೆರಳಿದ ಗಿಲ್ಲಿ ನಟ

ಸುದೀಪ್ ಹಾಗೂ ಶಿವರಾಜ್​​ಕುಮಾರ್ ಅವರು ಗಿಲ್ಲಿಗೆ ಒಳ್ಳೆಯದಾಗಲಿ ಎಂದು ಮನಸ್ಫೂರ್ತಿಯಾಗಿ ಹಾರೈಸಿದ್ದಾರೆ. ಈ ಹಾರೈಕೆಯಿಂದ ಅವರು ತುಂಬಾನೇ ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಆಫರ್​​​ಗಳು ಅವರನ್ನು ಹುಡುಕಿ ಬರೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us