AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಟಿಆರ್​​ಪಿ ಪಡೆದ ‘ಬಿಗ್ ಬಾಸ್ ಫಿನಾಲೆ’ ಎಪಿಸೋಡ್; ಕಲರ್ಸ್ ನಂಬರ್ 1

ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಭರ್ಜರಿ 16.8 ಟಿವಿಆರ್ ಗಳಿಸಿ ಹೊಸ ದಾಖಲೆ ಬರೆದಿದೆ. ಈ ಅಭೂತಪೂರ್ವ ಯಶಸ್ಸಿನಿಂದ ಕಲರ್ಸ್ ಕನ್ನಡ ವಾಹಿನಿ ಜೀ ಕನ್ನಡವನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದೆ. ಫಿನಾಲೆಗೆ 'ಗಿಲ್ಲಿ ನಟ'ರ ಗೆಲುವು ಪ್ರಮುಖ ಆಕರ್ಷಣೆಯಾಗಿತ್ತು. 'ಲಕ್ಷ್ಮೀ ನಿವಾಸ' ಧಾರಾವಾಹಿ ಪ್ರಥಮ ಸ್ಥಾನದಲ್ಲಿದೆ.

ಭರ್ಜರಿ ಟಿಆರ್​​ಪಿ ಪಡೆದ ‘ಬಿಗ್ ಬಾಸ್ ಫಿನಾಲೆ’ ಎಪಿಸೋಡ್; ಕಲರ್ಸ್ ನಂಬರ್ 1
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 30, 2026 | 3:14 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ನಡೆದು ಕೆಲವು ದಿನಗಳು ಕಳೆದಿವೆ. ಆದರೆ, ಶೋನ ಬಗೆಗಿನ ಚರ್ಚೆಗಳು ಮಾತ್ರ ನಿಂತಿಲ್ಲ. ಈಗ ಬಿಗ್ ಬಾಸ್ ಫಿನಾಲೆಯ ಟಿಆರ್​​ಪಿ ಹೊರ ಬಿದ್ದಿದೆ. ಫಿನಾಲೆ ಎಪಿಸೋಡ್​​ಗೆ 16.8 ಟಿವಿಆರ್ ಸಿಕ್ಕಿದೆ. ವಾರಾಂತ್ಯಗಳಲ್ಲಿ ಬಿಗ್ ಬಾಸ್ ಎಪಿಸೋಡ್​​​ಗೆ 10-12 ಟಿವಿಆರ್ ಸಿಗುತ್ತಿತ್ತು. ಆದರೆ, ಫಿನಾಲೆ ಎಪಿಸೋಡ್ ಮಾತ್ರ ಭರ್ಜರಿ ಟಿಆರ್​​ಪಿ ಪಡೆದುಕೊಂಡು ಗಮನ ಸೆಳೆದಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಕಳೆದ ವರ್ಷ ಸೆಪ್ಟೆಂಬರ್ 28ರಂದು ಆರಂಭ ಆಯಿತು. ಜನವರಿ 18ರಂದು ಫಿನಾಲೆ ನಡೆದಿದೆ. ಈ ಎಪಿಸೋಡ್​​ನ ಜನರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆ ಮಾಡಿದ್ದಾರೆ. ಇದಕ್ಕೆ ಕಾರಣ ಗಿಲ್ಲಿ ನಟ ಎಂದರೂ ತಪ್ಪಾಗಲಾರದು. ಗಿಲ್ಲಿ ನಟ ಕಪ್ ಎತ್ತೋದನ್ನು ನೋಡಲು ಎಲ್ಲರೂ ಕಾದು ಕುಳಿತಿದ್ದರು. ಹೀಗಾಗಿ, ಒಳ್ಳೆಯ ಟಿಆರ್​ಪಿ ಸಿಕ್ಕಿದೆ.

ಇನ್ನು, ಕಲರ್ಸ್ ಕನ್ನಡ ವಾಹಿನಿ ಜೀ ಕನ್ನಡ ವಾಹಿನಿಯನ್ನು ಹಿಂದಿಕ್ಕಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಇದಕ್ಕೆ ಕಾರಣವೂ ಇದೆ. ಶನಿವಾರ (ಜನವರಿ 17) ಬಿಗ್ ಬಾಸ್ ಪ್ರೀ ಫಿನಾಲೆ ಹಾಗೂ ಭಾನುವಾರ ಫಿನಾಲೆಯನ್ನು ಜನರು ಸಾಕಷ್ಟು ಶ್ರದ್ಧೆಯಿಂದ ವೀಕ್ಷಿಸಿದ್ದಾರೆ. ಇದು ಸಹಕಾರಿ ಆಗಿದೆ.

ಇದನ್ನೂ ಓದಿ: ಕುಡಿದ ನಶೆಯಲ್ಲಿ ಗಿಲ್ಲಿ ಬಿಗ್ ಬಾಸ್ ಗೆಲ್ಲಲ್ಲ ಎಂದಿದ್ದೆ ಅಷ್ಟೇ; ಸ್ಪಷ್ಟನೆ ಕೊಟ್ಟ ಸತೀಶ್

ಧಾರಾವಾಹಿಗಳ ಟಿಆರ್​ಪಿ ನೋಡೋದಾದರೆ, ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ‘ಕರ್ಣ’ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ‘ಅಣ್ಣಯ್ಯ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ‘ನಂದ ಗೋಕುಲ’ ಧಾರಾವಾಹಿಗೆ ಐದನೇ ಸ್ಥಾನ ಸಿಕ್ಕಿದೆ. ಆರನೇ ಸ್ಥಾನದಲ್ಲಿ ‘ಮುದ್ದು ಸೊಸೆ’ ಧಾರಾವಾಹಿ, ಏಳನೇ ಸ್ಥಾನದಲ್ಲಿ ‘ಆದಿ ಲಕ್ಷ್ಮೀ ಪುರಾಣ’ ಧಾರಾವಾಹಿ ಇದೆ. 8ನೇ ಸ್ಥಾನದಲ್ಲಿ ‘ಭಾರ್ಗವಿ ಎಲ್​​ಎಲ್​ಬಿ’ ಇದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ