AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿರೋ ಕೆನಡಾ ಹುಡುಗನ ಹಿಂದೆ ಬಿದ್ದ ರಾಶಿಕಾ-ಸ್ಪಂದನಾ; ಫೇಮ್ ಪಡೆಯಲು ಲವ್ ಸ್ಟೋರಿ?

ಬಿಗ್ ಬಾಸ್ ಮನೆಯಲ್ಲಿ ಹೊಸ ಪ್ರೇಮ ಕಹಾನಿ ಶುರುವಾಗುವ ಸೂಚನೆ ಸಿಕ್ಕಿದೆ. ಕೆನಡಾದಿಂದ ಬಂದ ಸೂರಜ್ ಸಿಂಗ್‌ಗೆ ರಾಶಿಕಾ ಹಾಗೂ ಸ್ಪಂದನಾ ಆಕರ್ಷಿತರಾಗಿದ್ದಾರೆ. ಈ ಲವ್ ಟ್ರ್ಯಾಕ್ ಫೇಮ್ ಗಳಿಸಲು ಒಂದು ತಂತ್ರವಾಗಿರಬಹುದೇ ಎಂಬ ಚರ್ಚೆ ಬಿಗ್ ಬಾಸ್ ವಲಯದಲ್ಲಿ ಶುರುವಾಗಿದೆ.

ಬಿಗ್ ಬಾಸ್​ನಲ್ಲಿರೋ ಕೆನಡಾ ಹುಡುಗನ ಹಿಂದೆ ಬಿದ್ದ ರಾಶಿಕಾ-ಸ್ಪಂದನಾ; ಫೇಮ್ ಪಡೆಯಲು ಲವ್ ಸ್ಟೋರಿ?
ಸೂರಜ್, ಸ್ಪಂದನಾ, ರಾಶಿಕಾ
ರಾಜೇಶ್ ದುಗ್ಗುಮನೆ
|

Updated on: Oct 22, 2025 | 11:37 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಸಾಕಷ್ಟು ಲವ್​ ಸ್ಟೋರಿಗಳು ಹುಟ್ಟಿಕೊಂಡಿವೆ. ಕೆಲವು ಯಶಸ್ಸು ಕಂಡರೆ, ಇನ್ನೂ ಕೆಲವು ಬಿಗ್ ಬಾಸ್ ಮನೆಯಲ್ಲಿ ಫೇಮ್ ಪಡೆಯಲು ಮಾತ್ರ ಸೀಮಿತವಾಗಿದೆ. ಬಿಗ್ ಬಾಸ್ ಆರಂಭ ಆಗಿ ಒಂದು ತಿಂಗಳು ಕಳೆಯುತ್ತಾ ಬಂದರೂ ಯಾವುದೇ ಲವ್​ ಸ್ಟೋರಿ ಹುಟ್ಟಿಕೊಂಡಿರಲಿಲ್ಲ. ಈಗ ಆ ರೀತಿಯ ಒಂದು ಕಥೆ ಆರಂಭ ಕಾಣುವ ಸೂಚನೆ ಸಿಕ್ಕಿದೆ.

ಬಿಗ್ ಬಾಸ್ ಮನೆಗೆ ಸೂರಜ್ ಸಿಂಗ್ ಎಂಟ್ರಿ ಆಗಿದೆ. ಅವರು ಕೆನಡಾದಲ್ಲಿ ಇದ್ದು, ಈಗ ಭಾರತಕ್ಕೆ ಮರಳಿದ್ದಾರೆ. ಅವರು ತಮ್ಮ ಹ್ಯಾಂಡ್ಸಮ್ ಲುಕ್​ನಿಂದ ಗಮನ ಸೆಳೆಯುವ ರೀತಿಯಲ್ಲಿ ಇದ್ದಾರೆ. ಈಗ ಅವರನ್ನು ನೋಡಿ ಬಿಗ್ ಬಾಸ್ ಮನೆಯಲ್ಲಿ ಇಬ್ಬರು ಆಕರ್ಷಿತರಾಗಿದ್ದಾರೆ. ಅವರು ಬೇರಾರೂ ಅಲ್ಲ, ಸ್ಪಂದನ ಹಾಗೂ ರಾಶಿಕಾ. ಈ ವಿಚಾರ ಚರ್ಚೆ ಹುಟ್ಟುಹಾಕಿದೆ.

ಬಿಗ್ ಬಾಸ್​ಗೆ ಬಂದ ದಿನವೇ ಸೂರಜ್ ಅವರು ಗುಲಾಬಿ ಹೂವನ್ನು ರಾಶಿಕಾಗೆ ನೀಡಿ, ‘ಅವರು ಕ್ಯೂಟ್ ಆಗಿ ಕಾಣಿಸುತ್ತಾರೆ’ ಎಂದರು. ಅಂದಿನಿಂದಲೂ ರಾಶಿಕಾ ಸೂರಜ್ ಅವರನ್ನು ಕಂಡಾಕ್ಷಣ ನಾಚುತ್ತಿದ್ದಾರೆ. ಅಶ್ವಿನಿ ಗೌಡ ಹಾಗೂ ಜಾನ್ವಿ ಬಳಿ ಈ ವಿಚಾರವನ್ನು ರಾಶಿಕಾ ಮಾತನಾಡಿದ್ದಾರೆ.

ಇದನ್ನೂ ಓದಿ
Image
ದೀಪಾವಳಿಗೆ ಬಂಪರ್ ಲಾಟರಿ; ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದ ‘ಕಾಂತಾರ’
Image
ದೀಪಿಕಾ-ರಣವೀರ್ ಪಡುಕೋಣೆ ಮಗಳ ಮುಖ ರಿವೀಲ್; ಯಾರ ಹಾಗೆ ಕಾಣ್ತಾರೆ ದುವಾ?
Image
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

‘ನಾನು ಬಿಗ್ ಬಾಸ್ ಮನೆಗೆ ಬರೋದಕ್ಕೂ ಮೊದಲು ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಬಂದಿತ್ತು. ಹ್ಯಾಂಡ್ಸಮ್ ಆಗಿದ್ದಾನೆ ಅಂತ ಪ್ರಾಫೈಲ್ ಚೆಕ್ ಮಾಡಿದೆ. ಇಲ್ಲಿ ಅವರನ್ನೇ ನೋಡಿದ ಬಳಿಕ ಫ್ಲ್ಯಾಶ್ ಆಯ್ತು’ ಎಂದು ಸೂರಜ್ ಬಗ್ಗೆ ಅಶ್ವಿನಿ ಅವರು ಹೇಳಿದ್ದಾರೆ. ‘ಯಾರಿಗೆ ಅವನು ಇಷ್ಟ’ ಎಂದು ಅಶ್ವಿನಿ ಅವರು ರಾಶಿಕಾ ಹಾಗೂ ಸ್ಪಂದನಾ ಬಳಿ ಪ್ರಶ್ನೆ ಮಾಡಿದರು. ‘ಇಬ್ಬರೂ ಲಿಸ್ಟ್​ನಲ್ಲಿ ಇದ್ದಾರೆ’ ಎಂಬ ಮಾತು ಅಲ್ಲೇ ಕೇಳಿ ಬಂತು. ಆ ಬಳಿಕ ಅಶ್ವಿನಿ ಅವರು ‘ಇಷ್ಟು ದಿನ ಲವ್ ಟ್ರ್ಯಾಕ್ ಮಿಸ್ ಆಗ್ತಾ ಇತ್ತು’ ಎಂದರು.

ಇದನ್ನೂ ಓದಿ: ‘ಬಿಗ್ ಬಾಸ್​ನಲ್ಲಿ ಅವಮಾನ ಆದರೆ ಅದನ್ನು ಮರೆತು ಮುಂದೆ ಹೋಗಲು ಸಾಧ್ಯವಿಲ್ಲ’; ಅಶ್ವಿನಿ ಗೌಡ ಕಣ್ಣೀರು

ಫೇಮ್ ಪಡೆಯಬೇಕು ಎಂದರೆ ಲವ್​ ಸ್ಟೋರಿ ತುಂಬಾನೇ ಮುಖ್ಯವಾಗುತ್ತದೆ. ಹೀಗಾಗಿ ರಾಶಿಕಾ ಹಾಗೂ ಸ್ಪಂದನಾ ಈ ರೀತಿ ಆಲೋಚಿಸಿರಬಹುದು ಎಂದು ಊಹಿಸಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ