AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಚ್ಚರಿಯ ರೀತಿಯಲ್ಲಿ ಬಿಗ್ ಬಾಸ್ ಫಿನಾಲೆ ವಾರ ತಲುಪಿದ ತ್ರಿವಿಕ್ರಂ

ಈ ವಾರದ ಬಿಗ್ ಬಾಸ್ ಕನ್ನಡದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬಂದಿವೆ. ಟಾಸ್ಕ್‌ನಲ್ಲಿ ಸೋತ ತ್ರಿವಿಕ್ರಂ ಅವರು ನಾಮಿನೇಷನ್‌ನಿಂದ ಪಾರಾಗಿದ್ದಾರೆ. ಧನರಾಜ್ ಅವರ ಮೋಸದ ಆಟದಿಂದ ಮಧ್ಯವಾರದ ಎಲಿಮಿನೇಷನ್ ರದ್ದಾಗಿದೆ ಮತ್ತು ಅವರ ಇಮ್ಯುನಿಟಿ ಕೂಡ ರದ್ದಾಗಿದೆ. ಈ ಎಲ್ಲಾ ಬೆಳವಣಿಗೆ ಬಗ್ಗೆ ಇಲ್ಲಿದೆ ಮಾಹಿತಿ.

ಅಚ್ಚರಿಯ ರೀತಿಯಲ್ಲಿ ಬಿಗ್ ಬಾಸ್ ಫಿನಾಲೆ ವಾರ ತಲುಪಿದ ತ್ರಿವಿಕ್ರಂ
ತ್ರಿವಿಕ್ರಂ
ರಾಜೇಶ್ ದುಗ್ಗುಮನೆ
|

Updated on:Jan 18, 2025 | 3:13 PM

Share

ತ್ರಿವಿಕ್ರಂ ಅವರು ಈ ವಾರ ನಾಮಿನೇಟ್ ಆಗಿದ್ದರು. ಟಾಸ್ಕ್ ಸರಿಯಾಗಿ ಆಡಲು ಸಿಗದ ಕಾರಣ ಅವರಿಗೆ ಗೆಲ್ಲೋಕೆ ಸಾಧ್ಯ ಆಗಿರಲಿಲ್ಲ. ಈ ಕಾರಣಕ್ಕೆ ಫಿನಾಲೆ ವಾರ ತಲುಪುವ ಅವಕಾಶ ಅವರ ಕೈ ತಪ್ಪಿತ್ತು. ಆದರೆ, ಈಗ ಎಲ್ಲವೂ ಬದಲಾಗಿದೆ. ಬಿಗ್ ಬಾಸ್​ನ ಒಂದು ಅಚ್ಚರಿಯ ನಿರ್ಧಾರದಿಂದ ಎಲ್ಲವೂ ಬದಲಾಗಿಬಿಟ್ಟಿದೆ. ಆಟ ಆಡಿ ಗೆದ್ದವರು ನಾಮಿನೇಟ್ ಆದರೆ, ಆಟದಲ್ಲಿ ಸೋತವರು ಎಲಿಮಿನೇಷನ್​ನಿಂದ ಬಚಾವ್ ಆಗಿದ್ದಾರೆ.

ಮೋಸದಾಟ

ಧನರಾಜ್ ಅವರು ಮೋಸ ಮಾಡಿ ಗೆದ್ದಿದ್ದಾರೆ ಎಂಬ ಆರೋಪ ಇದೆ. ಇದನ್ನು ಅವರೂ ಒಪ್ಪಿಕೊಂಡಿದ್ದಾರೆ. ಈ ಕಾರಣಕ್ಕೆ ಮಧ್ಯ ವಾರದ ಎಲಿಮಿನೇಷನ್ ರದ್ದು ಮಾಡಲಾಯಿತು. ಟಾಸ್ಕ್​​ನಲ್ಲಿ ಗೆದ್ದ ಹನುಮಂತ ಅವರ ಇಮ್ಯೂನಿಟಿಯನ್ನು ರದ್ದು ಮಾಡಲಾಯಿತು. ಆ ಬಳಿಕ ಮತ್ತೆ ನಾಮಿನೇಷನ್ ಪ್ರಕ್ರಿಯೆ ನಡೆಸಲಾಗಿದೆ.

ತ್ರಿವಿಕ್ರಂ ಹೆಸರೇ ಇಲ್ಲ

ನಾಮಿನೇಷನ್ ಪ್ರಕ್ರಿಯೆಯಲ್ಲಿ ಭವ್ಯಾ ಅವರನ್ನು ಹೊರತುಪಡಿಸಿ ಇನ್ಯಾರೂ ಕೂಡ ತ್ರಿವಿಕ್ರಂ ಅವರ ಹೆಸರನ್ನು ತೆಗೆದುಕೊಂಡೇ ಇಲ್ಲ. ನಾಮಿನೇಟ್ ಆಗಬೇಕು ಎಂದರೆ ಕನಿಷ್ಠ ಎರಡು ವೋಟ್ ಬೀಳಬೇಕು. ಒಂದು ವೋಟ್ ಬಿದ್ದರೆ ಬಿಗ್ ಬಾಸ್ ಅದನ್ನು ಎಂದಿಗೂ ಪರಿಗಣಿಸುವುದಿಲ್ಲ. ನಾಮಿನೇಷನ್ ಪ್ರಕ್ರಿಯೆಯಲ್ಲಿ ಭವ್ಯಾ ವೋಟ್ ಬಿಟ್ಟು ಮತ್ಯಾರೂ ತ್ರಿವಿಕ್ರಂ ಅವರನ್ನು ನಾಮಿನೇಟ್ ಮಾಡಿರಲಿಲ್ಲ. ಹೀಗಾಗಿ, ಅವರು ಫಿನಾಲೆ ವಾರ ತಲುಪಿದರು.

ಮೋಕ್ಷಿತಾ ಕೂಡ ಬಚಾಚ್

ಮೋಕ್ಷಿತಾ ಅವರು ನಾಮಿನೇಷನ್​ ಲಿಸ್ಟ್​​ನಲ್ಲಿ ಇದ್ದರು. ಆದರೆ, ಅವರು ಕೂಡ ಬಚಾವ್ ಆಗಿದ್ದಾರೆ. ನಾಮಿನೇಷನ್​ನಿಂದ ಒಬ್ಬರನ್ನು ಸೇವ್ ಮಾಡುವ ಅವಕಾಶವನ್ನು ಅಲ್ಟಿಮೇಟ್ ಕ್ಯಾಪ್ಟನ್ ಹನುಮಂತಗೆ ಬಿಗ್ ಬಾಸ್ ನೀಡಿದರು. ಆಗ ಹನುಮಂತ ಅವರು ಮೋಕ್ಷಿತಾ ಹೆಸರನ್ನು ತೆಗೆದುಕೊಂಡರು.

ಇದನ್ನೂ ಓದಿ: ಇಂದು ಶೋ ಆರಂಭಕ್ಕೂ ಮೊದಲೇ ನಡೆಯಲಿದೆ ಒಂದು ಎಲಿಮಿನೇಷನ್? ಟ್ವಿಸ್ಟ್ ಕೊಡಲು ಕಿಚ್ಚ ರೆಡಿ

ನಾಮಿನೇಟ್ ಆದವರು

ಹನುಮಂತ ಅವರು ಅಲ್ಟಿಮೇಟ್ ಕ್ಯಾಪ್ಟನ್ ಆಗಿ ನಾಮಿನೇಷನ್​ನಿಂದ ಬಚಾವ್ ಆಗಿದ್ದಾರೆ. ಅಂತಿಮವಾಗಿ ಧನರಾಜ್, ಗೌತಮಿ, ಮಂಜು, ರಜತ್ ಹಾಗೂ ಭವ್ಯಾ ನಾಮಿನೇಷನ್​ ಸಾಲಿನಲ್ಲಿ ಇದ್ದಾರೆ. ಇವರ ಪೈಕಿ ಇಬ್ಬರು ಮನೆಯಿಂದ ಹೊರ ಹೋಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:28 am, Sat, 18 January 25

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ