AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಿನ್ನ ಬಿಡಲಾರೆ’ ಧಾರಾವಾಹಿಗೆ ದೊಡ್ಡ ಟ್ವಿಸ್ಟ್; ಶರತ್-ದುರ್ಗಾ ಮದುವೆ

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಶರತ್ ಮತ್ತು ದುರ್ಗಾ ಅವರ ಅನಿರೀಕ್ಷಿತ ಮದುವೆಯು ದೊಡ್ಡ ಟ್ವಿಸ್ಟ್ ಆಗಿದೆ. ಮಾಯಾಳ ಷಡ್ಯಂತ್ರವನ್ನು ಹಿತಾ ಭೇದಿಸಿದ ನಂತರ, ಶರತ್ ದುರ್ಗಾಳನ್ನು ಮದುವೆಯಾಗಲು ನಿರ್ಧರಿಸುತ್ತಾನೆ. ಪ್ರೋಮೋ ಪ್ರಕಾರ ಮದುವೆ ನಡೆಯಲಿದೆ. ಆದರೆ ಇದು ನಿಜವೇ ಅಥವಾ ಕನಸೇ ಎಂಬುದು ಇನ್ನೂ ತಿಳಿಯಬೇಕಿದೆ.

‘ನಾ ನಿನ್ನ ಬಿಡಲಾರೆ’ ಧಾರಾವಾಹಿಗೆ ದೊಡ್ಡ ಟ್ವಿಸ್ಟ್; ಶರತ್-ದುರ್ಗಾ ಮದುವೆ
ಕನ್ನಡ ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 30, 2025 | 10:31 AM

Share

‘ನಾ ನಿನ್ನ ಬಿಡಲಾರೆ’ ಧಾರಾವಾಹಿ (Kannada Serial) ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ದುಷ್ಟ ಶಕ್ತಿಗಳು, ಮಾಟ ಮಂತ್ರ, ದೇವಿ ಮಹಾತ್ಮೆಯನ್ನು ತೋರಿಸುವ ಕೆಲಸ ಆಗುತ್ತಿದೆ. ಹೀಗಿರುವಾಗಲೇ ಧಾರಾವಾಹಿಯಲ್ಲಿ ಒಂದು ದೊಡ್ಡ ಟ್ವಿಸ್ಟ್ ಎದುರಾಗಿದೆ. ಈ ದಾರಾವಾಹಿಯಲ್ಲಿ ದುರ್ಗಾ ಹಾಗೂ ಶರತ್ ಮದುವೆ ಮಾಡಲು ಸಿದ್ಧತೆ ನಡೆದಿದೆ. ಈ ತಿರುವು ಧಾರಾವಾಹಿಯ ವಿಲನ್ ಪಾತ್ರಧಾರಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗದೇ ಇರಬಹುದು ಎಂದು ಅನೇಕರು ಭಾವಿಸಿದ್ದಾರೆ.

ದುರ್ಗಾ ಮದುವೆಗೆ ಪ್ಲ್ಯಾನ್

ದುರ್ಗಾಳನ್ನು ಮದುವೆ ಮಾಡಿ ಮನೆಯಿಂದ ಹೊರಹಾಕಬೇಕು ಎಂಬುದು ಮಾಯಾ ಪ್ಲ್ಯಾನ್. ಈ ಕಾರಣದಿಂದಲೇ ಒಂದು ಫ್ರಾಡ್ ಸಂಬಂಧವನ್ನು ಕರೆದುಕೊಂಡು ಬರಲಾಗಿತ್ತು. ಆ ಹುಡುಗ ಒಳ್ಳೆಯವರ ರೀತಿಯೇ ನಡೆದುಕೊಂಡಿದ್ದ. ಹೀಗಾಗಿ ಎಲ್ಲರೂ ಆತನನ್ನು ನಂಬಿದ್ದರು. ಆದರೆ, ಹಿತಾ ಎಲ್ಲವನ್ನೂ ಕಂಡು ಹಿಡಿದಿದ್ದಾಳೆ. ಆತ ತನ್ನ ಲವರ್ ಜೊತೆ ಮಾತನಾಡುವಾಗ ಅದನ್ನು ರೆಕಾರ್ಡ್ ಮಾಡಿ ಶರತ್​ಗೆ ತೋರಿಸಿದ್ದಾಳೆ.

ಇದನ್ನೂ ಓದಿ
Image
ಸೋನು ಸೂದ್ ಜನ್ಮದಿನ; ನಟನೆ ಕಡಿಮೆ ಮಾಡಿದರೂ ತಗ್ಗಿಲ್ಲ ನಟನ ಆಸ್ತಿ
Image
ಹೀನಾಯ ಸ್ಥಿತಿ ತಲುಪಿದ ‘ಹರಿ ಹರ ವೀರ ಮಲ್ಲು’ ಕಲೆಕ್ಷನ್; ಪವನ್ ಕನಸು ಭಗ್ನ
Image
ಅಶ್ವಮೇಧದ ಕುದುರೆ ‘ಸು ಫ್ರಮ್ ಸೋ’; ಕೆಲೆಕ್ಷನ್​ನಲ್ಲಿ ತಡೆಯೋರೆ ಇಲ್ಲ
Image
‘ಕನಿಷ್ಠ ಸಭ್ಯತೆ ಇರಲಿ’; ದರ್ಶನ್ ಅಭಿಮಾನಿಗಳ ಬಳಿ ಕೋರಿದ್ರಾ ರಕ್ಷಿತಾ
View this post on Instagram

A post shared by Zee Kannada (@zeekannada)

ಈ ಮಾತನ್ನು ಕೇಳಿ ಶರತ್ ಶಾಕ್ ಆದ ಮತ್ತು ನೇರವಾಗಿ ಹೋಗಿ ಈ ವಿಚಾರವನ್ನು ದುರ್ಗಾ ಬಳಿ ಹೇಳಿದ. ಇದನ್ನು ಆಕೆ ನಂಬಲು ರೆಡಿ ಇರಲಿಲ್ಲ. ಏಕೆಂದರೆ ಆಕೆಯ ಚಿಕ್ಕಮ್ಮ ಮಾಡಿದ ಕೆಲಸವೇ ಇದಕ್ಕೆ ಕಾರಣ. ದುರ್ಗಾಳ ಚಿಕ್ಕಮ್ಮ ಬಂದು ‘ಏನೇ ಆದರೂ ನೀನು ಮದುವೆ ಆಗಬೇಕು’ ಎಂದು ಎಚ್ಚರಿಸಿ ಹೋಗಿದ್ದಳು. ಹೀಗಾಗಿ, ಮದುವೆ ಆಗೇ ಆಗುತ್ತೇನೆ ಎಂದು ದುರ್ಗಾ ನಿರ್ಧರಿಸಿಯಾಗಿತ್ತು.

ಇದನ್ನೂ ಓದಿ: ಸತತ ಮೂರನೇ ವಾರ ಡಬಲ್ ಡಿಜಿಟ್ ಟಿಆರ್​ಪಿ, ನಂಬರ್ 1 ಸ್ಥಾನ ಪಡೆದ ‘ಕರ್ಣ’ ಧಾರಾವಾಹಿ

ಮದುವೆ..

ಸದ್ಯ ಬಿಡುಗಡೆ ಆಗಿರುವ ಪ್ರೋಮೋ ಪ್ರಕಾರ ಶರತ್ ಹಾಗೂ ದುರ್ಗಾಳ ಮದುವೆ ನಡೆಯಲಿದೆ. ಒಬ್ಬರು ಎಣ್ಣೆ ಆದರೆ, ಮತ್ತೊಬ್ಬರು ಸೀಗೆಕಾಯಿ. ಇಬ್ಬರ ಮಧ್ಯೆ ಹೊಂದಾಣಿಕೆ ಸಾಧ್ಯವೇ ಇಲ್ಲ. ಆದರೆ, ಶರತ್ ಮಗಳು ಹಿತಾಳನ್ನು ನೋಡಿಕೊಳ್ಳುವ ಕಲೆ ಆಕೆಗೆ ಗೊತ್ತಿದೆ. ಈ ಕಾರಣದಿಂದಲೇ ಶರತ್​ಗೆ ಆಕೆಯ ಮೇಲೆ ವಿಶೇಷ ಕಾಳಜಿ. ಈಗ ಇಬ್ಬರೂ ಮದುವೆ ಆದರೆ ಹಿತಾ ತುಂಬಾನೇ ಖುಷಿ ಪಡುತ್ತಾಳೆ. ಸದ್ಯ ರಿಲೀಸ್ ಆಗಿರೋ ಪ್ರೋಮೋ ನಿಜವೇ ಅಥವಾ ಯಾರಿಗಾದರೂ ಬಿದ್ದ ಕನಸೇ ಎಂಬುದನ್ನು ಕಾದು ನೋಡಬೇಕಿದೆ. ಇಂದು (ಜುಲೈ 30) ಇದರ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?