AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಿನ್ನ ಬಿಡಲಾರೆ’ ಧಾರಾವಾಹಿಗೆ ದೊಡ್ಡ ಟ್ವಿಸ್ಟ್; ಶರತ್-ದುರ್ಗಾ ಮದುವೆ

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಶರತ್ ಮತ್ತು ದುರ್ಗಾ ಅವರ ಅನಿರೀಕ್ಷಿತ ಮದುವೆಯು ದೊಡ್ಡ ಟ್ವಿಸ್ಟ್ ಆಗಿದೆ. ಮಾಯಾಳ ಷಡ್ಯಂತ್ರವನ್ನು ಹಿತಾ ಭೇದಿಸಿದ ನಂತರ, ಶರತ್ ದುರ್ಗಾಳನ್ನು ಮದುವೆಯಾಗಲು ನಿರ್ಧರಿಸುತ್ತಾನೆ. ಪ್ರೋಮೋ ಪ್ರಕಾರ ಮದುವೆ ನಡೆಯಲಿದೆ. ಆದರೆ ಇದು ನಿಜವೇ ಅಥವಾ ಕನಸೇ ಎಂಬುದು ಇನ್ನೂ ತಿಳಿಯಬೇಕಿದೆ.

‘ನಾ ನಿನ್ನ ಬಿಡಲಾರೆ’ ಧಾರಾವಾಹಿಗೆ ದೊಡ್ಡ ಟ್ವಿಸ್ಟ್; ಶರತ್-ದುರ್ಗಾ ಮದುವೆ
ಕನ್ನಡ ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 30, 2025 | 10:31 AM

Share

‘ನಾ ನಿನ್ನ ಬಿಡಲಾರೆ’ ಧಾರಾವಾಹಿ (Kannada Serial) ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ದುಷ್ಟ ಶಕ್ತಿಗಳು, ಮಾಟ ಮಂತ್ರ, ದೇವಿ ಮಹಾತ್ಮೆಯನ್ನು ತೋರಿಸುವ ಕೆಲಸ ಆಗುತ್ತಿದೆ. ಹೀಗಿರುವಾಗಲೇ ಧಾರಾವಾಹಿಯಲ್ಲಿ ಒಂದು ದೊಡ್ಡ ಟ್ವಿಸ್ಟ್ ಎದುರಾಗಿದೆ. ಈ ದಾರಾವಾಹಿಯಲ್ಲಿ ದುರ್ಗಾ ಹಾಗೂ ಶರತ್ ಮದುವೆ ಮಾಡಲು ಸಿದ್ಧತೆ ನಡೆದಿದೆ. ಈ ತಿರುವು ಧಾರಾವಾಹಿಯ ವಿಲನ್ ಪಾತ್ರಧಾರಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗದೇ ಇರಬಹುದು ಎಂದು ಅನೇಕರು ಭಾವಿಸಿದ್ದಾರೆ.

ದುರ್ಗಾ ಮದುವೆಗೆ ಪ್ಲ್ಯಾನ್

ದುರ್ಗಾಳನ್ನು ಮದುವೆ ಮಾಡಿ ಮನೆಯಿಂದ ಹೊರಹಾಕಬೇಕು ಎಂಬುದು ಮಾಯಾ ಪ್ಲ್ಯಾನ್. ಈ ಕಾರಣದಿಂದಲೇ ಒಂದು ಫ್ರಾಡ್ ಸಂಬಂಧವನ್ನು ಕರೆದುಕೊಂಡು ಬರಲಾಗಿತ್ತು. ಆ ಹುಡುಗ ಒಳ್ಳೆಯವರ ರೀತಿಯೇ ನಡೆದುಕೊಂಡಿದ್ದ. ಹೀಗಾಗಿ ಎಲ್ಲರೂ ಆತನನ್ನು ನಂಬಿದ್ದರು. ಆದರೆ, ಹಿತಾ ಎಲ್ಲವನ್ನೂ ಕಂಡು ಹಿಡಿದಿದ್ದಾಳೆ. ಆತ ತನ್ನ ಲವರ್ ಜೊತೆ ಮಾತನಾಡುವಾಗ ಅದನ್ನು ರೆಕಾರ್ಡ್ ಮಾಡಿ ಶರತ್​ಗೆ ತೋರಿಸಿದ್ದಾಳೆ.

ಇದನ್ನೂ ಓದಿ
Image
ಸೋನು ಸೂದ್ ಜನ್ಮದಿನ; ನಟನೆ ಕಡಿಮೆ ಮಾಡಿದರೂ ತಗ್ಗಿಲ್ಲ ನಟನ ಆಸ್ತಿ
Image
ಹೀನಾಯ ಸ್ಥಿತಿ ತಲುಪಿದ ‘ಹರಿ ಹರ ವೀರ ಮಲ್ಲು’ ಕಲೆಕ್ಷನ್; ಪವನ್ ಕನಸು ಭಗ್ನ
Image
ಅಶ್ವಮೇಧದ ಕುದುರೆ ‘ಸು ಫ್ರಮ್ ಸೋ’; ಕೆಲೆಕ್ಷನ್​ನಲ್ಲಿ ತಡೆಯೋರೆ ಇಲ್ಲ
Image
‘ಕನಿಷ್ಠ ಸಭ್ಯತೆ ಇರಲಿ’; ದರ್ಶನ್ ಅಭಿಮಾನಿಗಳ ಬಳಿ ಕೋರಿದ್ರಾ ರಕ್ಷಿತಾ
View this post on Instagram

A post shared by Zee Kannada (@zeekannada)

ಈ ಮಾತನ್ನು ಕೇಳಿ ಶರತ್ ಶಾಕ್ ಆದ ಮತ್ತು ನೇರವಾಗಿ ಹೋಗಿ ಈ ವಿಚಾರವನ್ನು ದುರ್ಗಾ ಬಳಿ ಹೇಳಿದ. ಇದನ್ನು ಆಕೆ ನಂಬಲು ರೆಡಿ ಇರಲಿಲ್ಲ. ಏಕೆಂದರೆ ಆಕೆಯ ಚಿಕ್ಕಮ್ಮ ಮಾಡಿದ ಕೆಲಸವೇ ಇದಕ್ಕೆ ಕಾರಣ. ದುರ್ಗಾಳ ಚಿಕ್ಕಮ್ಮ ಬಂದು ‘ಏನೇ ಆದರೂ ನೀನು ಮದುವೆ ಆಗಬೇಕು’ ಎಂದು ಎಚ್ಚರಿಸಿ ಹೋಗಿದ್ದಳು. ಹೀಗಾಗಿ, ಮದುವೆ ಆಗೇ ಆಗುತ್ತೇನೆ ಎಂದು ದುರ್ಗಾ ನಿರ್ಧರಿಸಿಯಾಗಿತ್ತು.

ಇದನ್ನೂ ಓದಿ: ಸತತ ಮೂರನೇ ವಾರ ಡಬಲ್ ಡಿಜಿಟ್ ಟಿಆರ್​ಪಿ, ನಂಬರ್ 1 ಸ್ಥಾನ ಪಡೆದ ‘ಕರ್ಣ’ ಧಾರಾವಾಹಿ

ಮದುವೆ..

ಸದ್ಯ ಬಿಡುಗಡೆ ಆಗಿರುವ ಪ್ರೋಮೋ ಪ್ರಕಾರ ಶರತ್ ಹಾಗೂ ದುರ್ಗಾಳ ಮದುವೆ ನಡೆಯಲಿದೆ. ಒಬ್ಬರು ಎಣ್ಣೆ ಆದರೆ, ಮತ್ತೊಬ್ಬರು ಸೀಗೆಕಾಯಿ. ಇಬ್ಬರ ಮಧ್ಯೆ ಹೊಂದಾಣಿಕೆ ಸಾಧ್ಯವೇ ಇಲ್ಲ. ಆದರೆ, ಶರತ್ ಮಗಳು ಹಿತಾಳನ್ನು ನೋಡಿಕೊಳ್ಳುವ ಕಲೆ ಆಕೆಗೆ ಗೊತ್ತಿದೆ. ಈ ಕಾರಣದಿಂದಲೇ ಶರತ್​ಗೆ ಆಕೆಯ ಮೇಲೆ ವಿಶೇಷ ಕಾಳಜಿ. ಈಗ ಇಬ್ಬರೂ ಮದುವೆ ಆದರೆ ಹಿತಾ ತುಂಬಾನೇ ಖುಷಿ ಪಡುತ್ತಾಳೆ. ಸದ್ಯ ರಿಲೀಸ್ ಆಗಿರೋ ಪ್ರೋಮೋ ನಿಜವೇ ಅಥವಾ ಯಾರಿಗಾದರೂ ಬಿದ್ದ ಕನಸೇ ಎಂಬುದನ್ನು ಕಾದು ನೋಡಬೇಕಿದೆ. ಇಂದು (ಜುಲೈ 30) ಇದರ ಎಪಿಸೋಡ್ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ