AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಯಲ್ಲಿ ಹರ ಹರ ಮಹಾದೇವ: ಹೃದಯ ಗೆಲ್ಲಬಲ್ಲರೇ ವಿನಯ್?

Bigg Boss: ಬಿಗ್​ಬಾಸ್ ಕನ್ನಡ ಸೀಸನ್​ 10ರ ನಾಲ್ಕನೇ ಸ್ಪರ್ಧಿಯಾಗಿ ವಿನಯ್ ಬಿಗ್​ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಸಂಕಷ್ಟದ ಬಾಲ್ಯ ಹೊಂದಿದ್ದ ವಿನಯ್, ಬಿಗ್​ಬಾಸ್​ನ ಹಿರಿಯ ಸದಸ್ಯರಾಗುವ ಸಾಧ್ಯತೆ ಇದೆ. ಅಂದಹಾಗೆ ಇವರ ಹಿನ್ನೆಲೆ ಏನು?

ಬಿಗ್​ಬಾಸ್ ಮನೆಯಲ್ಲಿ ಹರ ಹರ ಮಹಾದೇವ: ಹೃದಯ ಗೆಲ್ಲಬಲ್ಲರೇ ವಿನಯ್?
ವಿನಯ್
ಮಂಜುನಾಥ ಸಿ.
| Edited By: |

Updated on:Oct 09, 2023 | 9:02 AM

Share

ಬಿಗ್​ಬಾಸ್ (Bigg Boss) ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ‘ಹರ ಹರ ಮಹಾದೇವ’ ಧಾರಾವಾಹಿ ನಟ ವಿನಯ್ ಗೌಡ ಮನೆ ಪ್ರವೇಶಿಸಿದ್ದಾರೆ. ‘ಹರ ಹರ ಮಹಾದೇವ’ ಧಾರಾವಾಹಿಯಲ್ಲಿ ಶಿವ ಪಾತ್ರಧಾರಿಯಾಗಿ ನಟಿಸಿರುವ ವಿನಯ್ ಅದ್ಧೂರಿಯಾಗಿ ಬಿಗ್​ಬಾಸ್ ಮನೆ ಪ್ರವೇಶಿಸಿದ್ದಾರೆ. ವಿಶೇಷವೆಂದರೆ ಸುರಸುಂದರ ಅವಿನಾಶ್ ಅವರು ನಾಲ್ಕನೇ ಸ್ಪರ್ಧಿ ಆಗಿದ್ದರು, ಆದರೆ ಅವರು ಕಡಿಮೆ ಮತ ಪಡೆದ ಕಾರಣ ಅವರನ್ನು ಮನೆಯ ಒಳಗೆ ಕಳಿಸಲಿಲ್ಲ. ಹಾಗಾಗಿ ನಾಲ್ಕನೇ ಸ್ಪರ್ಧಿಯಾಗಿ ವಿನಯ್ ಮನೆಗೆ ಎಂಟ್ರಿ ಪಡೆದರು. ಈ ರಿಯಾಲಿಟಿ ಶೋ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಪ್ರಸಾರ ಆಗಲಿದೆ.

ತಂದೆ-ತಾಯಿ ವಿಚ್ಛೇದನದಿಂದಾಗಿ ಮಾನಸಿಕ ಏರಿಳಿತಗಳ ಬಾಲ್ಯ ಕಳೆದ ವಿನಯ್, ತಂದೆ-ತಾಯಿಯ ಸಮಸ್ಯೆಯಿಂದಲೇ ಮನೆ ಬಿಟ್ಟು ಹೊರಬಂದು ಸ್ವತಂತ್ರ್ಯವಾಗಿ ಬದುಕಲು ಆರಂಭಿಸಿದರು. ಎಳವೆಯಿಂದಲೇ ಸವಾಲುಗಳನ್ನು ಎದುರಿಸುತ್ತಾ, ಭಿನ್ನ ಹಾದಿಯನ್ನು ತುಳಿಯುತ್ತಾ ಬಂದಿರುವ ವಿನಯ್ ಅವರಿಗೆ ಬಾಡಿಬಿಲ್ಡಿಂಗ್ ಬಹಳ ಮೆಚ್ಚಿನ ಹವ್ಯಾಸ.

ಇದನ್ನೂ ಓದಿ:ಹಿಂದಿ ಬಿಗ್​ಬಾಸ್ ಹೊಸ ಸೀಸನ್ ಘೋಷಣೆ: ಸಲ್ಮಾನ್ ಖಾನ್​ಗೆ ಬಿಡುವೇ ಇಲ್ಲ

‘ಹರ ಹರ ಮಹದೇವ್’ ಧಾರಾವಾಹಿಯಲ್ಲಿ ಶಿವನ ಪಾತ್ರಧಾರಿಯಾಗಿ ಕರ್ನಾಟಕದಲ್ಲಿ ಲಕ್ಷಾಂತರ ಮನ ಗೆದ್ದಿರುವ ವಿನಯ್​ಗೆ ಪ್ರಪಂಚವೆಂದರೆ ಅವರ 14 ವರ್ಷದ ಮಗ ಹಾಗೂ ಪತ್ನಿ ಇಬ್ಬರೇ. ತನ್ನ ಬಾಲ್ಯದಂತೆ ಮಗನ ಬಾಲ್ಯ ಆಗಬಾರದೆಂಬ ಕಾಳಜಿಯಿಂದ ಮಗನೊಟ್ಟಿಗೆ ಹೆಚ್ಚು ಸಮಯ ಕಳೆಯುತ್ತಾ, ಆರೋಗ್ಯಕರ ವಾತಾವರಣದಲ್ಲಿ ಮಗನನ್ನು ಬೆಳೆಸುತ್ತಿದ್ದಾರೆ.

ಅಂದಹಾಗೆ ವಿನಯ್​ಗೆ ಒಸಿಡಿ ಸಮಸ್ಯೆ ಇದೆ. ಅಂದರೆ ವಿನಯ್​ಗೆ ಎಲ್ಲವೂ ಶುಚಿಯಾಗಿರಬೇಕು. ಅದರಲ್ಲಿಯೂ ಬಾತ್​ರೂಂಗಳು ಕೊಳಕಾಗಿದ್ದರೆ, ವಾಸನೆ ಬರುವಂತಿದ್ದರೆ ವಿನಯ್​ ಸಹಿಸಲಾರರು. ಆದರೆ ಬಿಗ್​ಬಾಸ್​ನಲ್ಲಿ ಅದಕ್ಕೆ ವಿರುದ್ಧವಾಗಿ ನಡೆಯುತ್ತದೆ. ಅದರಲ್ಲಿಯೂ ಪುರುಷರ ಬಾತ್​ರೂಂ ಬಹಳ ಕೊಳಕಾಗಿರುತ್ತದೆ. ಬಾತ್​ರೂಂ ಏರಿಯಾ ಅಂತೂ ಕೊಳಕು ಬಟ್ಟೆಗಳಿಂದಲೇ ತುಂಬಿರುತ್ತದೆ. ಇದನ್ನು ವಿನಯ್ ಹೇಗೆ ಸಹಿಸಿಕೊಳ್ಳುತ್ತಾರೋ ನೋಡಬೇಕು. ಈವರೆಗೆ ನಮ್ರತಾ, ಸ್ನೇಹಿತ್ ಗೌಡ, ಈಶಾನಿ ಹಾಗೂ ನಾಲ್ಕನೇ ಸ್ಪರ್ಧಿಯಾಗಿ ವಿನಯ್ ಕಾಲಿಟ್ಟಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Sun, 8 October 23

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು