AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಯಲ್ಲಿ ಬಳೆ ಚರ್ಚೆ: ಬಳೆಗೆ ವಿಶೇಷ ಗೌರವ ನೀಡಿದ ಕಿಚ್ಚ ಸುದೀಪ್

Bigg Boss: ಬಿಗ್​ಬಾಸ್ ಮನೆಯಲ್ಲಿ ತಾನು ಆನೆ ಅಂದುಕೊಂಡು ಮೆರೆಯುತ್ತಿದ್ದ ವಿನಯ್​, ಅಹಂಕಾರದಲ್ಲಿ ಬಳೆಗಳ ಬಗ್ಗೆ ಅದನ್ನು ತೊಟ್ಟುಕೊಳ್ಳುವ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಆದರೆ ಸುದೀಪ್ ಅದೇ ಬಳೆಗಳಿಗೆ ವಿಶೇಷ ಗೌರವ ನೀಡಿ, ಬಳೆಗಳ ಮಹತ್ವ ಸಾರಿದರು.

ಬಿಗ್​ಬಾಸ್ ಮನೆಯಲ್ಲಿ ಬಳೆ ಚರ್ಚೆ: ಬಳೆಗೆ ವಿಶೇಷ ಗೌರವ ನೀಡಿದ ಕಿಚ್ಚ ಸುದೀಪ್
ಬಳೆ
ಮಂಜುನಾಥ ಸಿ.
|

Updated on:Nov 04, 2023 | 11:51 PM

Share

ಬಿಗ್​ಬಾಸ್ (Bigg Boss) ಮನೆಯಲ್ಲಿ ವಿನಯ್ ಆಡಿದ ಮಾತು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಟಾಸ್ಕ್ ಒಂದನ್ನು ಆಡುವಾಗ ಎದುರಾಳಿ ತಂಡದ ಕಾರ್ತಿಕ್ ಅನ್ನು ಅವಮಾನಗೊಳಿಸುವ ಉದ್ದೇಶದಿಂದ ಬಳೆ ಹಾಕ್ಕೊಂಡು ಆಡು, ಬಳೆಗಳ ರಾಜ ಎಂದೆಲ್ಲ ವಿನಯ್ (Vinay) ಕರೆದಿದ್ದರು. ಆ ಮೂಲಕ ಬಳೆ ತೊಡುವವರೆಂದರೆ ಅಸಮರ್ಥರು, ಬಲಹೀನರು ಎಂಬರ್ಥದ ಮಾತುಗಳನ್ನು ಆಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ವಿನಯ್​ ಆಡಿದ ಮಾತನ್ನು ಸಂಗೀತಾ ಹೊರತಾಗಿ ಇನ್ಯಾರು ವಿರೋಧಿಸಿರಲಿಲ್ಲ. ಹಾಗಾಗಿ ಈ ವಿಷಯದ ಬಗ್ಗೆ ಸುದೀಪ್ ನಿಲುವೇನು ಎಂಬುದು ಜನರ ನಿರೀಕ್ಷೆಯಾಗಿತ್ತು. ನಿರೀಕ್ಷೆಗೆ ತಕ್ಕಂತೆ ಸುದೀಪ್ ಘನತೆಯಿಂದ ವಿಷಯವನ್ನು ಸಂಭಾಳಿಸಿರುವ ಜೊತೆಗೆ ಬಳೆಗೆ ಒಂದು ವಿಶೇಷ ಗೌರವವನ್ನು ಸಹ ಕೊಟ್ಟಿದ್ದಾರೆ.

ಬಳೆಯ ವಿಷಯ ತೆಗೆದಿದ್ದ ವಿನಯ್​ಗೆ ಮಾತಿನ ಚಾಟಿ ಬೀಸಿದ ಸುದೀಪ್, ವಿನಯ್​ ಸ್ವತಃ ತಾವಾಗಿಯೇ ಕ್ಷಮೆ ಕೇಳುವಂತೆ ಮಾಡಿದರು. ಬಳಿಕ ಬಳೆಯ ಮಹತ್ವದ ಜೊತೆಗೆ ಮಹಿಳೆಯ ಮಹತ್ವದ ಬಗ್ಗೆಯೂ ಬಿಗ್​ಬಾಸ್ ಮನೆಯ ಕೆಲವರಿಗೆ ಮನದಟ್ಟು ಮಾಡಿದ ಸುದೀಪ್, ಪ್ರತಿ ವಾರ ನೀಡುವಂತೆ ಈ ವಾರವೂ ಕಿಚ್ಚನ ಚಪ್ಪಾಳೆ ನೀಡಿದರು. ಆದರೆ ಈ ಬಾರಿ ತುಸು ವಿಶೇಷವಾಗಿತ್ತು.

ವಿನಯ್​ಗೆ ಸ್ಟೋರ್​ ರೂಂನಲ್ಲಿದ್ದ ಫೋಟೊ ಒಂದನ್ನು ತೆಗೆದುಕೊಂಡು ಬರುವಂತೆ ಹೇಳಿದರು ಸುದೀಪ್, ಅದನ್ನು ವಿನಯ್​ರಿಂದಲೇ ಓಪನ್ ಮಾಡಿಸಿದರು. ಅದರಲ್ಲಿ ವಿನಯ್, ಬಳೆಯ ಬಗ್ಗೆ ವಿನಯ್ ಮಾತನಾಡಿದಾಗ ಅದನ್ನು ವಿರೋಧ ಮಾಡಿದ ಸಂಗೀತಾ ತಾವು ತೊಟ್ಟುಕೊಂಡಿದ್ದ ಹಸಿರು ಬಳೆಗಳನ್ನು ಕೈಎತ್ತಿ ತೋರಿಸಿದ ಚಿತ್ರವಿತ್ತು. ಈ ವಾರದ ಕಿಚ್ಚ ಸುದೀಪ್​ರ ಕಿಚ್ಚನ ಚಪ್ಪಾಳೆ ಬಳೆಗಳಿಗಾಗಿತ್ತು. ಆ ಬಳೆಗಳ ಚಿತ್ರವನ್ನು ವಾಲ್ ಆಫ್​ ಫೇಮ್​ಗೆ ಸಹ ತೂಗು ಹಾಕಲಾಯಿತು. ಯಾರೂ ನಿರೀಕ್ಷಿಸದ ರೀತಿಯಲ್ಲಿ ಸುದೀಪ್​ ಬಳೆಗಳಿಗೆ ಆ ಮೂಲಕ ಮಹಿಳೆಯರಿಗೆ, ಮಹಿಳಾ ಶಕ್ತಿಗೆ ಗೌರವ ನೀಡಿದರು.

ಇದನ್ನೂ ಓದಿ:ಬಿಗ್​ಬಾಸ್ ಮನೆಯ ಡವ್ ರಾಣಿ ನಮ್ರತಾ ಏಟಿಗೆ ಮನೆಯವರೆಲ್ಲ ಸುಸ್ತೋ-ಸುಸ್ತು

ಮಾತ್ರವೇ ಅಲ್ಲದೆ, ಬಳೆಗಳ ಬಗ್ಗೆ ಆ ಮೂಲಕ ಮಹಿಳೆಯರ ಬಗ್ಗೆ ಋಣಾತ್ಮಕವಾಗಿ ಮಾತನಾಡಿದ ವಿನಯ್​ಗೆ ಸರಿಯಾಗಿ ಬುದ್ಧಿ ಹೇಳಿದ ಜೊತೆಗೆ, ವಿನಯ್ ಹಾಗೆ ಮಾತನಾಡಿದಾಗ ವಿರೋಧ ವ್ಯಕ್ತಪಡಿಸದೆ ಅವರೊಂದಿಗೆ ಸೇರಿ ನಗುತ್ತಿದ್ದ ನಮ್ರತಾ, ತುಕಾಲಿ ಸಂತುಗೂ ಸಹ ಸರಿಯಾಗಿ ಕ್ಲಾಸ್ ತೆಗೆದುಕೊಂಡರು. ಇದರ ಜೊತೆಗೆ ವಿನಯ್​ರ ಆ ಮಾತನ್ನು ವಿರೋಧಿಸಿದ ಬಿಗ್​ಬಾಸ್ ಮನೆಯ ಏಕೈಕ ವ್ಯಕ್ತಿ ಸಂಗೀತಾ ಶೃಂಗೇರಿಯ ಬಗ್ಗೆ ಮೆಚ್ಚುಗೆಯನ್ನು ಸಹ ಕಿಚ್ಚ ಸುದೀಪ್ ವ್ಯಕ್ತಪಡಿಸಿದರು.

ಇನ್ನು ವಿನಯ್​, ಮಹಿಳೆಯರಿಗೆ ಅಪಮಾನ ಮಾಡಿದರೆ, ಇದೇ ವಾರ ತಮಗೆ ಸಿಕ್ಕ ನಾಮಿನೇಷನ್ ಪಾಸ್​ಗಳನ್ನು ಮಹಿಳೆಯರಿಗೆ ನೀಡಿ ಅವರಿಗೆ ಗೌರವ ನೀಡಿದ ಡ್ರೋನ್ ಪ್ರತಾಪ್​ಗೆ ಸಹ ಮೆಚ್ಚುಗೆ ವ್ಯಕ್ತಪಡಿಸಿದರು ಸುದೀಪ್. ಒಟ್ಟಾರೆ ಶನಿವಾರದ ಎಪಿಸೋಡ್​ನಲ್ಲಿ ಸುದೀಪ್ ಆಡಿದ ಮಾತುಗಳು, ನಡೆದುಕೊಂಡ ರೀತಿಗೆ ಮೆಚ್ಚುಗೆ ವ್ಯಕ್ತವಾಗಿದೆ. ಬಿಗ್​ಬಾಸ್ ಕನ್ನಡ ಸೀಸನ್ 10 ಕಲರ್ಸ್​ ವಾಹಿನಿಯಲ್ಲಿ ಪ್ರತಿದಿನ ರಾತ್ರಿ 9:30ಕ್ಕೆ ಹಾಗೂ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ 24 ಗಂಟೆ ಲೈವ್ ಪ್ರಸಾರವಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:50 pm, Sat, 4 November 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?