AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಸ್ಥಿತಿ ಅತಂತ್ರ: ಆರು ಜನರ ಹಣೆ ಬರಹ ನಿರ್ಧರಿಸಲಿರುವ ಬಿಗ್​ಬಾಸ್

Bigg Boss 10: ಅತಂತ್ರ ಸ್ಥಿತಿಯಲ್ಲಿರುವ ಡ್ರೋನ್ ಪ್ರತಾಪ್, ರಕ್ಷಕ್ ಬುಲೆಟ್ ಹಾಗೂ ಇನ್ನೂ ನಾಲ್ಕು ಜನ ಅಂತೂ ಇಂತು ಬಿಗ್​ಬಾಸ್​ ಮನೆ ಪ್ರವೇಶಿಸಿದ್ದು, ಅವರ ಭವಿಷ್ಯ ಸ್ವತಃ ಬಿಗ್​ಬಾಸ್ ಕೈಯಲ್ಲಿದೆ.

ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಸ್ಥಿತಿ ಅತಂತ್ರ: ಆರು ಜನರ ಹಣೆ ಬರಹ ನಿರ್ಧರಿಸಲಿರುವ ಬಿಗ್​ಬಾಸ್
ಮಂಜುನಾಥ ಸಿ.
| Edited By: |

Updated on:Oct 09, 2023 | 6:36 AM

Share

ಬಿಗ್​ಬಾಸ್ (Bigg Boss) ಕನ್ನಡ ಸೀಸನ್ 10 ಅಕ್ಟೋಬರ್ 8ರಂದು ಪ್ರಸಾರ ಆರಂಭಿಸಿದೆ. ಬಿಗ್​ಬಾಸ್ ಸ್ಪರ್ಧಿಗಳನ್ನು ಚಾನೆಲ್​ನವರು ಆರಿಸುವ ಪರಿಪಾಠ ಇತ್ತು. ಇದೇ ಪರಿಪಾಠ ಈ ಬಾರಿಯೂ ಮುಂದುವರೆದಿದೆಯಾದರೂ ಇದಕ್ಕೆ ಸಣ್ಣ ಟ್ವಿಸ್ಟ್ ಸೇರಿಸಲಾಗಿದೆ. ಹೀಗೆ ಆಯ್ಕೆ ಆಗಿ ಬಿಗ್​ಬಾಸ್ ವೇದಿಕೆಗೆ ಬರುವ ಸ್ಪರ್ಧಿಗಳನ್ನು ಬಿಗ್​ಬಾಸ್ ಮನೆಯ ಒಳಗೆ ಕಳಿಸುವ ಅಧಿಕಾರ ಕಾರ್ಯಕ್ರಮದಲ್ಲಿ ಹಾಜರಿದ್ದ ವೀಕ್ಷಕರಿಗೆ ನೀಡಲಾಗಿತ್ತು. ವೀಕ್ಷಕರು ಮತ ಹಾಕಿದ ಸ್ಪರ್ಧಿಗಳಷ್ಟೆ ಬಿಗ್​ಬಾಸ್ ಮನೆಯೊಳಗೆ ಎಂಟ್ರಿ ಪಡೆದರು. ಮತ ಗಳಿಸದವರು ತಮ್ಮ ಮನೆಗೆ ವಾಪಸ್ಸಾದರು. ಅರ್ಧಂಬರ್ಧ ಮತ ಗಳಿಸಿದವರು ತ್ರಿಶಂಕು ಸ್ಥಿತಿಯಲ್ಲಿದ್ದಾರೆ.

ಶೇಕಡ 80ಕ್ಕೂ ಹೆಚ್ಚು ಮತಗಳನ್ನು ಗಳಿಸಿದ ಸ್ಪರ್ಧಿಗಳಿಗೆ ಬಿಗ್​ಬಾಸ ಮನೆಯ ಒಳಕ್ಕೆ ಹೋಗುವ ಅವಕಾಶ ಲಭಿಸುತ್ತಿತ್ತು. ಯಾರಿಗೆ 40ಕ್ಕೂ ಕಡಿಮೆ ಮತಗಳು ಬರುತ್ತವೆಯೋ ಅವರು ವಾಪಸ್ ತಮ್ಮ ಮನೆಗೆ ಹೋಗಬೇಕಿತ್ತು. ಯಾರಿಗೆ 80ಕ್ಕಿಂತಲೂ ಕಡಿಮೆ, 40ಕ್ಕಿಂತಲೂ ಹೆಚ್ಚು ಮತಗಳು ಬರುತ್ತವೆಯೋ ಅವರು ಬಿಗ್​ಬಾಸ್​ನ ನಿರ್ಣಯಕ್ಕಾಗಿ ಕಾಯಬೇಕಿತ್ತು. ಈ ರೀತಿಯ ಹೊಸ ವ್ಯವಸ್ಥೆಯನ್ನು ಈ ಬಾರಿ ಪರಿಚಯಿಸಲಾಗಿತ್ತು.

ಇದನ್ನೂ ಓದಿ:ಟ್ರೋಲ್​ ಆದ ಬಿಗ್​ ಬಾಸ್​ ಸ್ಪರ್ಧಿಗಳ ಬಗ್ಗೆ ಪ್ರಶ್ನೆ: ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್​ ಗರಂ

ಡ್ರೋನ್ ಪ್ರತಾಪ್, ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್, ನಟಿ ತನಿಷಾ, ‘777 ಚಾರ್ಲಿ’ ನಟಿ ಸಂಗೀತಾ, ಹಳ್ಳಿಕಾರ್ ತಳಿ ರಕ್ಷಕ, ರೈ ಹಳ್ಳಿಕಾರ್ ಸಂತೋಶ್, ಹಲವು ಧಾರಾವಾಹಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾದಲ್ಲಿ ನಟಿಸಿರುವ ಕಾರ್ತಿಕ್ ಮಹೇಶ್ ಅವರುಗಳು 80ಕ್ಕಿಂತಲೂ ಕಡಿಮೆ 40ಕ್ಕಿಂತಲೂ ಹೆಚ್ಚು ಮತಗಳನ್ನು ಪಡೆದು ಅತಂತ್ರ ಸ್ಥಿತಿಯಲ್ಲಿದ್ದರು. ಸೋಷಿಯಲ್ ಮೀಡಿಯಾ ಸ್ಟಾರ್ ಸುರಸುಂದರ ಅವಿನಾಶ್ ಹಾಗೂ ನಟಿಯೊಬ್ಬರು 40ಕ್ಕಿಂತಲೂ ಕಡಿಮೆ ಅಂಕ ಪಡೆದು ಬಿಗ್​ಬಾಸ್ ವೇದಿಕೆಯಿಂದ ನಿರಾಸೆಗೊಂಡು ಮನೆಗೆ ವಾಪಸ್ಸಾದರು.

ಅತಂತ್ರ ಸ್ಥಿತಿಯಲ್ಲಿದ್ದ ಆರು ಮಂದಿ ಸ್ಪರ್ಧಿಗಳನ್ನು ಕಾರ್ಯಕ್ರಮದ ಕೊನೆಯಲ್ಲಿ ವೇದಿಕೆ ಕರೆದ ಸುದೀಪ್, ನಿಮ್ಮ ಮುಂದಿನ ಸ್ಥಿತಿಯನ್ನು ಬಿಗ್​ಬಾಸ್ ನಿರ್ಣಯ ಮಾಡಲಿದ್ದಾರೆ. ಸದ್ಯಕ್ಕೆ ನೀವುಗಳು ಬಿಗ್​ಬಾಸ್ ಮನೆಯ ಒಳಗೆ ಹೋಗಬಹುದು ಆದರೆ ನೀವು ನೀಡುವ ಫರ್ಪಾಮೆನ್ಸ್, ನಿಮ್ಮ ತೊಡಗಿಕೊಳ್ಳುವಿಕೆ, ವ್ಯಕ್ತಿತ್ವ ಇನ್ನಿತರೆಗಳನ್ನು ಗಮನಿಸಿ, ನಿಮ್ಮಲ್ಲಿ ಯಾರು ಉಳಿದುಕೊಳ್ಳಬೇಕು, ಯಾರು ಉಳಿದುಕೊಳ್ಳಬಾರದು ಎಂಬುದನ್ನು ಬಿಗ್​ಬಾಸ್ ನಿರ್ಣಯ ಮಾಡುತ್ತಾರೆ. ಹಾಗಾಗಿ ಈ ಒಂದು ವಾರ ಚೆನ್ನಾಗಿ ಆಟವಾಡಿ ಎಂದು ಸಲಹೆ ನೀಡಿ, ಎಲ್ಲರಿಗೂ ಮೈಕ್ ನೀಡಿ ಮನೆಯ ಒಳಗೆ ಕಳಿಸಿದರು ಸುದೀಪ್.

ಇಂದು ಬಿಗ್​ಬಾಸ್ ವೇದಿಕೆ ಮೇಲೆ 19 ಜನ ಸ್ಪರ್ಧಿಗಳು ಬಂದಿದ್ದರು. ಅದರಲ್ಲಿ 11 ಜನ ನೇರವಾಗಿ ಬಿಗ್​ಬಾಸ್ ಮನೆ ಪ್ರವೇಶ ಮಾಡಿದರು. 6 ಮಂದಿ ಅತಂತ್ರ ಸ್ಥಿತಿಯಲ್ಲಿ ಬಿಗ್​ಬಾಸ್ ಮನೆ ಪ್ರವೇಶಿಸಿದರು. ಇಬ್ಬರು ನಿರಾಶರಾಗಿ ಮರಳಿ ತಮ್ಮ ಮನೆಗೆ ವಾಪಸ್ಸಾದರು. ಮೊದಲ ವಾರದ ಎಲಿಮಿನೇಶನ್​ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಆರು ಮಂದಿಯಲ್ಲಿ ಯಾರಾದರೂ ಒಬ್ಬರು ಎಲಿಮಿನೇಟ್ ಆಗುವ ಸಾಧ್ಯತೆಯೇ ಹೆಚ್ಚಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:46 pm, Sun, 8 October 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ