AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ 10ಕ್ಕೆ ವೇದಿಕೆ ರೆಡಿ: ಪ್ರಸಾರದ ದಿನಾಂಕ ಬಹಿರಂಗ

Bigg Boss 10: ಬಿಗ್​ಬಾಸ್ 10 ಇನ್ನೇನು ಆರಂಭವಾಗಲಿದೆ ಎಂದು ಕೆಲವು ದಿನಗಳ ಹಿಂದಷ್ಟೆ ಪ್ರೋಮೋ ಬಿಡುಗಡೆ ಮಾಡಲಾಗಿತ್ತು. ಇದೀಗ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದ್ದು, ಬಿಗ್​ಬಾಸ್ 10 ಯಾವ ದಿನದಿಂದ ಆರಂಭವಾಗಲಿದೆ ಎಂಬ ಮಾಹಿತಿ ನೀಡಲಾಗಿದೆ.

ಬಿಗ್​ಬಾಸ್ 10ಕ್ಕೆ ವೇದಿಕೆ ರೆಡಿ: ಪ್ರಸಾರದ ದಿನಾಂಕ ಬಹಿರಂಗ
ಬಿಗ್ ಬಾಸ್
ಮಂಜುನಾಥ ಸಿ.
|

Updated on: Sep 22, 2023 | 11:25 PM

Share

ಬಿಗ್​ಬಾಸ್ (Bigg Boss) ಮತ್ತೆ ಬಂದಿದೆ. ಯಶಸ್ವಿಯಾಗಿ ಒಂಬತ್ತು ಸೀಸನ್​ಗಳನ್ನು ಮುಗಿಸಿ ಇದೀಗ ಹತ್ತನೇ ಸೀಸನ್​ಗೆ ಆರಂಭಕ್ಕೆ ವೇದಿಕೆ ರೆಡಿಯಾಗಿದೆ. ಸೆಪ್ಟೆಂಬರ್ 14 ಬಿಗ್​ಬಾಸ್ ಸೀಸನ್ 10ರ ಎರಡನೇ ಪ್ರೋಮೋ ಬಿಡುಗಡೆ ಮಾಡಲಾಗಿತ್ತು. ಸುದೀಪ್ ಕಾಣಿಸಿಕೊಂಡಿದ್ದ ಈ ಪ್ರೋಮೋನಲ್ಲಿ ಬಿಗ್​ಬಾಸ್ ಆರಂಭವಾಗಲಿದೆ ಎಂದಷ್ಟೆ ಹೇಳಲಾಗಿತ್ತು. ಈಗ ಬಿಡುಗಡೆ ಆಗಿರುವ ಹೊಸ ಪ್ರೋಮೋನಲ್ಲಿ ಬಿಗ್​ಬಾಸ್ 10 ಆರಂಭದ ದಿನಾಂಕದ ಬಗ್ಗೆ ಮಾಹಿತಿ ನೀಡಲಾಗಿದೆ.

ಕನ್ನಡ ಬಿಗ್​ಬಾಸ್ 10ನೇ ಸೀಸನ್ ಪ್ರಸಾರ ಅಕ್ಟೋಬರ್ 08 ರಿಂದ ಆರಂಭವಾಗಲಿದೆ. ಅಕ್ಟೋಬರ್ 8ರಂದು ಬಿಗ್​ಬಾಸ್ 10ಕ್ಕೆ ಅದ್ಧೂರಿ ಚಾಲನೆ ದೊರೆಯಲಿದೆ. ಈ ಹಿಂದೆ ಸೆಪ್ಟೆಂಬರ್ 14ರಂದು ಬಿಡುಗಡೆ ಮಾಡಲಾಗಿದ್ದ ಪ್ರೋಮೋ ಅನ್ನೇ ಇಂದು ಮತ್ತೊಮ್ಮೆ ಬಿಡುಗಡೆ ಮಾಡಲಾಗಿದ್ದು, ಪ್ರೋಮೋನ ಅಂತ್ಯದಲ್ಲಿ ಅಕ್ಟೋಬರ್ 8ರಿಂದ ಪ್ರಸಾರ ಆರಂಭವಾಗಲಿದೆ ಎಂದು ಸೇರಿಸಲಾಗಿದೆ. ‘ಊರ ಹಬ್ಬಕ್ಕೆ ಇಲ್ಲಿದೆ ರೀಸನ್; ಶುರುವಾಗ್ತಿದೆ ಹ್ಯಾಪಿ ‘ಬಿಗ್​ಬಾಸ್ ಕನ್ನಡ’ ಹತ್ತನೇ ಸೀಸನ್ ಅಕ್ಟೋಬರ್ 8 ರಿಂದ” ಎಂದು ಮಾಹಿತಿಯನ್ನು ಪ್ರೋಮೋ ಜೊತೆಗೆ ಹಂಚಿಕೊಳ್ಳಲಾಗಿದೆ.

ಈ ಹಿಂದಿನ ಬಾರಿಯಂತೆ ಈ ಬಾರಿಯೂ ಜನಪ್ರಿಯ ಟಿವಿ, ಸಿನಿಮಾ ತಾರೆಯರ ಜೊತೆಗೆ ಸೋಷಿಯಲ್ ಮೀಡಿಯಾ ಸೆಲೆಬ್ರಿಟಿಗಳು ಸಹ ಬಿಗ್​ಬಾಸ್ ಮನೆ ಸೇರಲಿದ್ದಾರೆ. ಈ ಬಾರಿ ಯಾರ್ಯಾರು ಬಿಗ್​ಬಾಸ್ ಮನೆ ಸೇರಲಿದ್ದಾರೆ ಎಂಬ ಲೆಕ್ಕಾಚಾರ ಈಗಾಗಲೇ ಆರಂಭವಾಗಲಿದೆ. ಆದರೆ ಸ್ಪರ್ಧಿಗಳ ಪಟ್ಟಿಯನ್ನು ಪ್ರತಿಭಾರಿಯಂತೆ ಗೌಪ್ಯವಾಗಿಟ್ಟಿರುವ ವಾಹಿನಿ, ಕಾರ್ಯಕ್ರಮದ ಲಾಂಚ್ ದಿನವೇ ಪ್ರೇಕ್ಷಕರಿಗೆ ಸ್ಪರ್ಧಿಗಳ ಮಾಹಿತಿ ತಿಳಿಯುವಂತೆ ಜಾಗೃತೆ ವಹಿಸಿದೆ.

ಇದನ್ನೂ ಓದಿ:ಎರಡೇ ವಾರಕ್ಕೆ ಬಿಗ್​ಬಾಸ್​ನಿಂದ ಹೊರಬಂದ ಶಕೀಲ, ಪಡೆದ ಸಂಭಾವನೆ ಎಷ್ಟು?

ಇದು ಹತ್ತನೇ ಸೀಸನ್ ಆಗಿರುವ ಕಾರಣ ತುಸು ಭಿನ್ನವಾಗಿ, ಅದ್ಧೂರಿಯಾಗಿ ಬಿಗ್​ಬಾಸ್ ರಿಯಾಲಿಟಿ ಶೋ ಇರಲಿದೆ ಎನ್ನಲಾಗುತ್ತಿದೆ. ಸಾಮಾನ್ಯರೂ ಈ ಬಾರಿ ಬಿಗ್​ಬಾಸ್ ಮನೆ ಸೇರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಬಿಗ್​ಬಾಸ್​ 10ರ ಮೊದಲ ಪ್ರೋಮೋ ಈ ಬಗ್ಗೆ ಸಣ್ಣ ಸುಳಿವೊಂದನ್ನು ಬಿಟ್ಟುಕೊಟ್ಟಿದೆ.

ಇನ್ನು ಈ ಬಾರಿ ಯಾವ ಯಾವ ಸ್ಪರ್ಧಿಗಳು ಬಿಗ್​ಬಾಸ್ ಮನೆ ಸೇರಲಿದ್ದಾರೆ ಎಂಬ ಕುತೂಹಲ ಸಾಮಾನ್ಯ. ಕಳೆದ ಬಾರಿಯಂತೆ ಅನುಭವಿ ಸ್ಪರ್ಧಿಗಳು ಹಾಗೂ ಹೊಸ ಸ್ಪರ್ಧಿಗಳ ನಡುವೆ ಸ್ಪರ್ಧೆ ಮಾಡಿಸುತ್ತಾರೆಯೇ? ಅಥವಾ ಈ ಬಾರಿ ಸಂಪೂರ್ಣ ಹೊಸಬರನ್ನೇ ಕರೆತರುತ್ತಾರೆಯೋ ಕಾದು ನೋಡಬೇಕಿದೆ.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು