AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಯಲ್ಲಿ ಕುಸ್ತಿ ಅಖಾಡ: ಕೈ-ಕೈ ಮಿಲಾಯಿಸಿದ ಸ್ಪರ್ಧಿಗಳು, ಗೆದ್ದಿದ್ದು ಯಾರು?

Bigg Boss 10: ಬಿಗ್​ಬಾಸ್ ಸ್ಪರ್ಧಿಗಳು ಟಾಸ್ಕ್​ ನಿರ್ವಹಿಸುವ ವಿಚಾರವಾಗಿ ಪರಸ್ಪರ ಕೈ-ಕೈ ಮಿಲಾಯಿಸುವಷ್ಟು ದ್ವೇಷ-ಸಿಟ್ಟು ಇಟ್ಟುಕೊಂಡಿರುವ ಸಂದರ್ಭದಲ್ಲಿ ಸ್ವತಃ ಬಿಗ್​ಬಾಸ್, ಸ್ಪರ್ಧಿಗಳಿಗೆ ಕುಸ್ತಿ ಪಂದ್ಯಾವಳಿಯನ್ನು ಆಯೋಜನೆ ಮಾಡಿದರು. ಅಂತಿಮವಾಗಿ ಗೆದ್ದವರು ಯಾರು?

ಬಿಗ್​ಬಾಸ್ ಮನೆಯಲ್ಲಿ ಕುಸ್ತಿ ಅಖಾಡ: ಕೈ-ಕೈ ಮಿಲಾಯಿಸಿದ ಸ್ಪರ್ಧಿಗಳು, ಗೆದ್ದಿದ್ದು ಯಾರು?
ಕುಸ್ತಿ
ಮಂಜುನಾಥ ಸಿ.
|

Updated on: Nov 02, 2023 | 11:17 PM

Share

ಹಳ್ಳಿ ಟಾಸ್ಕ್​ ಪ್ರಾರಂಭವಾದಾಗಿನಿಂದಲೂ ಬಿಗ್​ಬಾಸ್ (Bigg Boss) ಮನೆ ರಣಾಂಗಣವಾಗಿ ಮಾರ್ಪಟ್ಟಿತ್ತು. ಸ್ಪರ್ಧಿಗಳು ಪರಸ್ಪರ ಕಿತ್ತಾಡುತ್ತಾ, ಕೂಗಾಡುತ್ತಾ, ಪರಸ್ಪರ ಬೈದಾಡುತ್ತಾ ಟಾಸ್ಕ್​ಗಳನ್ನು ಆಡಿದರು, ಹಾಳು ಸಹ ಮಾಡಿದರು. ವಿಶೇಷವಾಗಿ ವಿನಯ್​ರ ವರ್ತನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಟೀಕೆ ವ್ಯಕ್ತವಾಗಿತ್ತು. ಸ್ಪರ್ಧಿಗಳು ಪರಸ್ಪರ ಕೈ-ಕೈ ಮಿಲಾಯಿಸುವಷ್ಟು ದ್ವೇಷ-ಸಿಟ್ಟು ಇಟ್ಟುಕೊಂಡಿರುವ ಸಂದರ್ಭದಲ್ಲಿ ಸ್ವತಃ ಬಿಗ್​ಬಾಸ್, ಸ್ಪರ್ಧಿಗಳಿಗೆ ಕುಸ್ತಿ ಪಂದ್ಯಾವಳಿಯನ್ನು ಆಯೋಜನೆ ಮಾಡಿದರು.

ಹಳ್ಳಿ ಟಾಸ್ಕ್​ನ ಕೊನೆಯ ಸ್ಪರ್ಧೆಯಾಗಿ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ರಾಜ್ಯ, ರಾಷ್ಟ್ರೀಯ ಮಟ್ಟದ ಇಬ್ಬರು ಕುಸ್ತಿ ಸ್ಪರ್ಧಿಗಳು ಬಿಗ್​ಬಾಸ್ ಮನೆಗೆ ಆಗಮಿಸಿ ಪಂದ್ಯಾವಳಿಯನ್ನು ನಡೆಸಿಕೊಟ್ಟರು. ಮೊದಲೇ ನಿಯಮಗಳನ್ನು ಸೂಕ್ತವಾಗಿ ವಿವರಿಸಿ, ಅದಾಗಲೇ ಸಿದ್ಧಪಡಿಸಿದ ಕುಸ್ತಿ ಅಖಾಡದಲ್ಲಿ ಸ್ಪರ್ಧಿಗಳನ್ನು ಕುಸ್ತಿ ಆಡಲು ಬಿಡಲಾಯ್ತು. ಮೊದಲಿಗೆ ವಿನಯ್ ಹಾಗೂ ಮೈಖಲ್ ಪರಸ್ಪರ ಸ್ಪರ್ಧಿಸಿದರು. ಎರಡು ಸುತ್ತಿನಲ್ಲಿಯೂ ವಿನಯ್ ಗೆಲುವು ಸಾಧಿಸಿದರು. ಗೆದ್ದ ಬಳಿಕ ಎದುರಾಳಿ ತಂಡದ ಎದುರು ಹೋಗಿ ತೊಡೆತಟ್ಟಿದರು.

ಅದಾದ ಬಳಿಕ ಸಂಗೀತಾ ಮತ್ತು ನೀತು ಪರಸ್ಪರ ಸ್ಪರ್ಧೆ ಮಾಡಿದರು. ಅದರಲ್ಲಿ ಅಚ್ಚರಿಯ ರೀತಿಯಲ್ಲಿ ಸಂಗೀತಾ ಗೆಲುವು ಸಾಧಿಸಿದರು. ಅದಾದ ಬಳಿಕ ಕಾರ್ತಿಕ್ ಹಾಗೂ ಸ್ನೇಹಿತ್ ನಡುವೆ ಸ್ಪರ್ಧೆ ನಡೆಯಿತು ಆ ಸ್ಪರ್ಧೆಯಲ್ಲಿ ಸಹ ಅಚ್ಚರಿಯ ರೀತಿ ಸ್ನೇಹಿತ್ ಗೆಲುವು ಸಾಧಿಸಿದರು. ಕಾರ್ತಿಕ್ ಹೆಚ್ಚೇನೂ ಪ್ರಯತ್ನವೇ ಮಾಡದೆ ಸೋತರು. ಅಲ್ಲಿಗೆ ಕುಸ್ತಿ ಪಂದ್ಯಾವಳಿಯಲ್ಲಿ ಅಂತಿಮ ಜಯ ವಿನಯ್ ತಂಡದವರದ್ದಾಯಿತು.

ಇದನ್ನೂ ಓದಿ:ಬೈಗುಳ, ನೂಕಾಟ-ತಳ್ಳಾಟ: ರಣಾಂಗಣವಾದ ಬಿಗ್​ಬಾಸ್ ಮನೆ

ಅಂತಿಮವಾಗಿ ಈ ವಾರದ ವಿಜೇತರನ್ನು ಘೋಷಿಸಿದ ಬಿಗ್​ಬಾಸ್, ಮೊದಲ ಟಾಸ್ಕ್​ನಲ್ಲಿ ಎರಡೂ ತಂಡಗಳು ಗೆಲ್ಲಲಿಲ್ಲ. ಎರಡನೇ ಟಾಸ್ಕ್ ಅನ್ನು ರದ್ದು ಮಾಡಲಾಯ್ತು. ಮೂರನೇ ಟಾಸ್ಕ್​ ನಲ್ಲಿ ವಿನಯ್ ತಂಡ ಗೆದ್ದಿದ್ದರಿಂದ ಈ ವಾರದ ವಿಜೇತರು ಅವರೇ ಆಗಿದ್ದು, ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಆಡಲು ಅವರು ಅರ್ಹರು ಎಂದು ಘೋಷಿಸಿದರು. ಜೊತೆಗೆ ತುಕಾಲಿ ಸಂತು, ಗುಟ್ಟಾಗಿ ವಿನಯ್​ ತಂಡಕ್ಕೆ ಬೆಂಬಲಿಸಿದ್ದರಿಂದ ಅವರಿಗೂ ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಆಡುವ ಅವಕಾಶ ದೊರಕಿತು.

ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಟೈರು ಗುಡುಗಿಸುವ ಸರಳ ಆಟದಲ್ಲಿ ಅಂತಿಮವಾಗಿ ವಿನಯ್ ಹಾಗೂ ತುಕಾಲಿ ಸಂತು ಉಳಿದರು. ತುಕಾಲಿ ಅವರಿಗೆ ವಿನಯ್ ಅವರನ್ನು ಹೊರಗಿಡುವ ಅವಕಾಶವಿದ್ದರೂ ಸಹ ಅವರು ಹೊರಗೆ ಇಡಲಿಲ್ಲ. ಇದು ಮನೆಯಲ್ಲಿ ಕೆಲ ಸದಸ್ಯರ ಅಸಮಾಧಾನಕ್ಕೆ ಕಾರಣವಾಯ್ತು. ಕ್ಯಾಪ್ಟನ್ಸಿ ಟಾಸ್ಕ್​ ನಾಳೆ ನಡೆಯಲಿದ್ದು, ಈ ಬಾರಿ ಬಿಗ್​ಬಾಸ್ ಮನೆ ಕ್ಯಾಪ್ಟನ್ ಯಾರಾಗಲಿದ್ದಾರೆ ಎಂಬುದು ನಾಳೆ ತಿಳಿಯಲಿದೆ. ಜೊತೆಗೆ ಈ ವಾರದ ಕಳಪೆ ಯಾರು ಎಂಬುದು ಸಹ ನಾಳೆಯೇ ತಿಳಿಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ