Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮಾರಾಮಾರಿ; ಹೆಣ್ಣುಮಕ್ಕಳಿಗೂ ಬಿತ್ತು ಪೆಟ್ಟು

ಬಿಗ್​ ಬಾಸ್​ ಮನೆಯನ್ನು ಕಾಡಿನ ರೀತಿಯಲ್ಲೇ ಸಿದ್ಧಮಾಡಲಾಗಿದೆ. ಇಡೀ ಮನೆಗೆ ವಿಶೇಷ ಲುಕ್​ ನೀಡಲಾಗಿದೆ. ಇದು ವೀಕ್ಷಕರಿಗೆ ಸಾಕಷ್ಟು ಖುಷಿ ನೀಡಿದೆ. ಬಿಗ್​ ಬಾಸ್​ ಮನೆ ಬದಲಾದರೂ ಮನೆಗೆ ತೆರಳುವವರ ಸ್ಥಿತಿ ಬದಲಾಗಿಲ್ಲ.

ಬಿಗ್​ ಬಾಸ್​ ಮನೆಯಲ್ಲಿ ಮಾರಾಮಾರಿ; ಹೆಣ್ಣುಮಕ್ಕಳಿಗೂ ಬಿತ್ತು ಪೆಟ್ಟು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 15, 2021 | 5:02 PM

ಬಿಗ್​ ಬಾಸ್​ ಎಂದಾಕ್ಷಣ ನೆನಪಿಗೆ ಬರೋದು ಕಾಂಟ್ರವರ್ಸಿ. ಮನೆ ಸೇರಿದ ನಂತರ ಎಲ್ಲರೂ ತಮ್ಮ ತನವನ್ನು ಮರೆತು, ಹೊಡೆದಾಡಿಕೊಳ್ಳಲು, ಕೈಕೈ ಮಿಲಾಯಿಸಿಕೊಳ್ಳಲು ಮುಂದಾಗುತ್ತಾರೆ. ಈ ವಿಚಾರದಲ್ಲಿ ಬಿಗ್​ ಬಾಸ್ ಪ್ರತಿ ಬಾರಿಯೂ ಹೈಲೈಟ್​ ಆಗುತ್ತದೆ. ಈ ಬಾರಿಯ ಬಿಗ್​ ಬಾಸ್​ ಸೀಸನ್​ 15ರಲ್ಲಿಯೂ ಇದು ಮುಂದುವರಿದಿದೆ. ದೊಡ್ಮನೆ ಆಟ ಶುರುವಾದ ಕೆಲವೇ ದಿನಗಳಲ್ಲಿ ಹೊಡೆದಾಟ-ಬಡಿದಾಟ ಆರಂಭವಾಗಿದೆ.

ಈ ಬಾರಿಯ ‘ಬಿಗ್​ ಬಾಸ್​ 15’ ಕಾಡಿನ ಥೀಮ್​ನೊಂದಿಗೆ ಮೂಡಿ ಬರುತ್ತಿದೆ. ಈ ಕಾರಣಕ್ಕೆ ಬಿಗ್​ ಬಾಸ್​ ಮನೆಯನ್ನು ಕಾಡಿನ ರೀತಿಯಲ್ಲೇ ಸಿದ್ಧಮಾಡಲಾಗಿದೆ. ಇಡೀ ಮನೆಗೆ ವಿಶೇಷ ಲುಕ್​ ನೀಡಲಾಗಿದೆ. ಇದು ವೀಕ್ಷಕರಿಗೆ ಸಾಕಷ್ಟು ಖುಷಿ ನೀಡಿದೆ. ಬಿಗ್​ ಬಾಸ್​ ಮನೆ ಬದಲಾದರೂ ಮನೆಗೆ ತೆರಳುವವರ ಮನಸ್ಥಿತಿ ಬದಲಾಗಿಲ್ಲ. ಮನೆಗೆ ತೆರಳಿದ ನಂತರ ಅವರು ಹೊಡೆದುಕೊಂಡಿದ್ದಾರೆ.

ಬಿಗ್​ ಬಾಸ್ ಮನೆಯಲ್ಲಿ ನಡೆದ ಫೈಟ್​ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಎಲ್ಲರೂ ಮುಖಮೂತಿ ನೋಡದೇ ಹೊಡೆದುಕೊಂಡಿದ್ದಾರೆ. ಹೆಣ್ಣು ಮಕ್ಕಳಿಗೂ ಹೊಡೆತಗಳು ಬಿದ್ದಿವೆ. ಇದನ್ನು ನೋಡಿ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಇದು ಅತಿಯಾಯಿತು ಎಂದು ಹೇಳಿಕೊಂಡಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದೆ.

ಅಕ್ಟೋಬರ್​ 3ರಂದು ಬಿಗ್​ ಬಾಸ್​ ಪ್ರಾರಂಭವಾಗಿತ್ತು. ಮೊದಲ ದಿನವೇ ಈ ರಿಯಾಲಿಟಿ ಶೋಗೆ ಅದ್ದೂರಿ ಸ್ವಾಗತ ಸಿಕ್ಕಿತ್ತು. ಸಲ್ಮಾನ್​ ಖಾನ್​ ಶೋ ನಡೆಸಿಕೊಟ್ಟಿದ್ದರು. ಬಾಲಿವುಡ್​​ನ ಖ್ಯಾತ ನಟ ರಣವೀರ್​ ಸಿಂಗ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ನಟಿ ಮೌನಿ ರಾಯ್​ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ವಿಧಿ ಪಾಂಡ್ಯಾ, ವಿಶಾಲ್​ ಕೋಟಿಯಾನ್​, ಶಮಿತಾ ಶೆಟ್ಟಿ, ಕರಣ್​ ಕುಂದ್ರಾ, ತೇಜಸ್ವಿ ಪ್ರಕಾಶ್​, ಸಿಂಬಾ ನಾಗ್​ಪಾಲ್​, ಮೀಶಾ ಅಯ್ಯರ್​, ಐಶಾನ್​ ಸೆಹಗಾಲ್​, ದೋನಲ್​ ಬಿಶ್ಟ್​​, ಸಾಹಿಲ್​ ಶ್ರಾಫ್​, ಆಕಾಶಾ ಸಿಂಗ್​, ಉಮರ್ ರಿಯಾಜ್ ಮೊದಲಾದವರು ಬಿಗ್​ ಬಾಸ್ ಮನೆಯಲ್ಲಿದ್ದಾರೆ.

ಇದನ್ನೂ ಓದಿ: ನನಗೆ ಸುಕೃತಾ ಜತೆ ಮದುವೆ ಫಿಕ್ಸ್​ ಆಗಿದೆ ಎಂದ ಬಿಗ್​ ಬಾಸ್​ ಶೈನ್ ಶೆಟ್ಟಿ

ಬಿಗ್​ ಬಾಸ್​​​ನಲ್ಲಿ ರಾಜ್​ ಕುಂದ್ರಾ ಬಗ್ಗೆ ಜೋಕ್​ ಮಾಡಿದ ಸಲ್ಮಾನ್​; ಮುಜುಗರಕ್ಕೊಳಗಾದ ಶಮಿತಾ ಶೆಟ್ಟಿ

Published On - 3:37 pm, Fri, 15 October 21

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್