AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಮಾರಾಮಾರಿ; ಹೆಣ್ಣುಮಕ್ಕಳಿಗೂ ಬಿತ್ತು ಪೆಟ್ಟು

ಬಿಗ್​ ಬಾಸ್​ ಮನೆಯನ್ನು ಕಾಡಿನ ರೀತಿಯಲ್ಲೇ ಸಿದ್ಧಮಾಡಲಾಗಿದೆ. ಇಡೀ ಮನೆಗೆ ವಿಶೇಷ ಲುಕ್​ ನೀಡಲಾಗಿದೆ. ಇದು ವೀಕ್ಷಕರಿಗೆ ಸಾಕಷ್ಟು ಖುಷಿ ನೀಡಿದೆ. ಬಿಗ್​ ಬಾಸ್​ ಮನೆ ಬದಲಾದರೂ ಮನೆಗೆ ತೆರಳುವವರ ಸ್ಥಿತಿ ಬದಲಾಗಿಲ್ಲ.

ಬಿಗ್​ ಬಾಸ್​ ಮನೆಯಲ್ಲಿ ಮಾರಾಮಾರಿ; ಹೆಣ್ಣುಮಕ್ಕಳಿಗೂ ಬಿತ್ತು ಪೆಟ್ಟು
TV9 Web
| Edited By: |

Updated on:Oct 15, 2021 | 5:02 PM

Share

ಬಿಗ್​ ಬಾಸ್​ ಎಂದಾಕ್ಷಣ ನೆನಪಿಗೆ ಬರೋದು ಕಾಂಟ್ರವರ್ಸಿ. ಮನೆ ಸೇರಿದ ನಂತರ ಎಲ್ಲರೂ ತಮ್ಮ ತನವನ್ನು ಮರೆತು, ಹೊಡೆದಾಡಿಕೊಳ್ಳಲು, ಕೈಕೈ ಮಿಲಾಯಿಸಿಕೊಳ್ಳಲು ಮುಂದಾಗುತ್ತಾರೆ. ಈ ವಿಚಾರದಲ್ಲಿ ಬಿಗ್​ ಬಾಸ್ ಪ್ರತಿ ಬಾರಿಯೂ ಹೈಲೈಟ್​ ಆಗುತ್ತದೆ. ಈ ಬಾರಿಯ ಬಿಗ್​ ಬಾಸ್​ ಸೀಸನ್​ 15ರಲ್ಲಿಯೂ ಇದು ಮುಂದುವರಿದಿದೆ. ದೊಡ್ಮನೆ ಆಟ ಶುರುವಾದ ಕೆಲವೇ ದಿನಗಳಲ್ಲಿ ಹೊಡೆದಾಟ-ಬಡಿದಾಟ ಆರಂಭವಾಗಿದೆ.

ಈ ಬಾರಿಯ ‘ಬಿಗ್​ ಬಾಸ್​ 15’ ಕಾಡಿನ ಥೀಮ್​ನೊಂದಿಗೆ ಮೂಡಿ ಬರುತ್ತಿದೆ. ಈ ಕಾರಣಕ್ಕೆ ಬಿಗ್​ ಬಾಸ್​ ಮನೆಯನ್ನು ಕಾಡಿನ ರೀತಿಯಲ್ಲೇ ಸಿದ್ಧಮಾಡಲಾಗಿದೆ. ಇಡೀ ಮನೆಗೆ ವಿಶೇಷ ಲುಕ್​ ನೀಡಲಾಗಿದೆ. ಇದು ವೀಕ್ಷಕರಿಗೆ ಸಾಕಷ್ಟು ಖುಷಿ ನೀಡಿದೆ. ಬಿಗ್​ ಬಾಸ್​ ಮನೆ ಬದಲಾದರೂ ಮನೆಗೆ ತೆರಳುವವರ ಮನಸ್ಥಿತಿ ಬದಲಾಗಿಲ್ಲ. ಮನೆಗೆ ತೆರಳಿದ ನಂತರ ಅವರು ಹೊಡೆದುಕೊಂಡಿದ್ದಾರೆ.

ಬಿಗ್​ ಬಾಸ್ ಮನೆಯಲ್ಲಿ ನಡೆದ ಫೈಟ್​ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಎಲ್ಲರೂ ಮುಖಮೂತಿ ನೋಡದೇ ಹೊಡೆದುಕೊಂಡಿದ್ದಾರೆ. ಹೆಣ್ಣು ಮಕ್ಕಳಿಗೂ ಹೊಡೆತಗಳು ಬಿದ್ದಿವೆ. ಇದನ್ನು ನೋಡಿ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಇದು ಅತಿಯಾಯಿತು ಎಂದು ಹೇಳಿಕೊಂಡಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದೆ.

ಅಕ್ಟೋಬರ್​ 3ರಂದು ಬಿಗ್​ ಬಾಸ್​ ಪ್ರಾರಂಭವಾಗಿತ್ತು. ಮೊದಲ ದಿನವೇ ಈ ರಿಯಾಲಿಟಿ ಶೋಗೆ ಅದ್ದೂರಿ ಸ್ವಾಗತ ಸಿಕ್ಕಿತ್ತು. ಸಲ್ಮಾನ್​ ಖಾನ್​ ಶೋ ನಡೆಸಿಕೊಟ್ಟಿದ್ದರು. ಬಾಲಿವುಡ್​​ನ ಖ್ಯಾತ ನಟ ರಣವೀರ್​ ಸಿಂಗ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು. ನಟಿ ಮೌನಿ ರಾಯ್​ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ವಿಧಿ ಪಾಂಡ್ಯಾ, ವಿಶಾಲ್​ ಕೋಟಿಯಾನ್​, ಶಮಿತಾ ಶೆಟ್ಟಿ, ಕರಣ್​ ಕುಂದ್ರಾ, ತೇಜಸ್ವಿ ಪ್ರಕಾಶ್​, ಸಿಂಬಾ ನಾಗ್​ಪಾಲ್​, ಮೀಶಾ ಅಯ್ಯರ್​, ಐಶಾನ್​ ಸೆಹಗಾಲ್​, ದೋನಲ್​ ಬಿಶ್ಟ್​​, ಸಾಹಿಲ್​ ಶ್ರಾಫ್​, ಆಕಾಶಾ ಸಿಂಗ್​, ಉಮರ್ ರಿಯಾಜ್ ಮೊದಲಾದವರು ಬಿಗ್​ ಬಾಸ್ ಮನೆಯಲ್ಲಿದ್ದಾರೆ.

ಇದನ್ನೂ ಓದಿ: ನನಗೆ ಸುಕೃತಾ ಜತೆ ಮದುವೆ ಫಿಕ್ಸ್​ ಆಗಿದೆ ಎಂದ ಬಿಗ್​ ಬಾಸ್​ ಶೈನ್ ಶೆಟ್ಟಿ

ಬಿಗ್​ ಬಾಸ್​​​ನಲ್ಲಿ ರಾಜ್​ ಕುಂದ್ರಾ ಬಗ್ಗೆ ಜೋಕ್​ ಮಾಡಿದ ಸಲ್ಮಾನ್​; ಮುಜುಗರಕ್ಕೊಳಗಾದ ಶಮಿತಾ ಶೆಟ್ಟಿ

Published On - 3:37 pm, Fri, 15 October 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?