AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ 15ಕ್ಕೆ ಸಲ್ಮಾನ್​-ರಣವೀರ್​ ಕೊಟ್ರು ಅದ್ದೂರಿ ಚಾಲನೆ; ಇಲ್ಲಿದೆ ಸ್ಪರ್ಧಿಗಳ ಪಟ್ಟಿ

ಈ ಬಾರಿಯ ‘ಬಿಗ್​ ಬಾಸ್​ 15’ ಕಾಡಿನ ಥೀಮ್​ನೊಂದಿಗೆ ಮೂಡಿ ಬರುತ್ತಿದೆ. ಈ ಕಾರಣಕ್ಕೆ ಬಿಗ್​ ಬಾಸ್​ ಮನೆಯನ್ನು ಕಾಡಿನ ರೀತಿಯಲ್ಲೇ ಸಿದ್ಧಮಾಡಲಾಗಿದೆ. ಇಡೀ ಮನೆಗೆ ವಿಶೇಷ ಲುಕ್​ ನೀಡಲಾಗಿದೆ.

ಬಿಗ್​ ಬಾಸ್​ 15ಕ್ಕೆ ಸಲ್ಮಾನ್​-ರಣವೀರ್​ ಕೊಟ್ರು ಅದ್ದೂರಿ ಚಾಲನೆ; ಇಲ್ಲಿದೆ ಸ್ಪರ್ಧಿಗಳ ಪಟ್ಟಿ
ರಣವೀರ್​ ಸಿಂಗ್​-ಸಲ್ಮಾನ್​ ಖಾನ್​
TV9 Web
| Edited By: |

Updated on: Oct 03, 2021 | 9:59 PM

Share

ಹಿಂದಿ ಬಿಗ್​ ಬಾಸ್​ 15ಕ್ಕೆ ಇಂದು (ಅಕ್ಟೋಬರ್​ 3) ಚಾಲನೆ ನೀಡಲಾಗಿದೆ. ಬಿಗ್​ ಬಾಸ್​ ಒಟಿಟಿ ಪೂರ್ಣಗೊಳ್ಳುತ್ತಿದ್ದಂತೆ ಈ ಶೋ ಆರಂಭವಾಗಿದ್ದು ವೀಕ್ಷಕರಿಗೆ ಖುಷಿ ನೀಡಿದೆ. ಬಿಗ್​ ಬಾಸ್​ ಮನೆ ಒಳಗೆ ಪ್ರವೇಶ ಪಡೆಯುವ ಸ್ಪರ್ಧಿಗಳು ಯಾರು ಎನ್ನುವ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಒಳಗೆ ಎಂಟ್ರಿ ಪಡೆದಿದ್ದಾರೆ.

ಈ ಬಾರಿಯ ‘ಬಿಗ್​ ಬಾಸ್​ 15’ ಕಾಡಿನ ಥೀಮ್​ನೊಂದಿಗೆ ಮೂಡಿ ಬರುತ್ತಿದೆ. ಈ ಕಾರಣಕ್ಕೆ ಬಿಗ್​ ಬಾಸ್​ ಮನೆಯನ್ನು ಕಾಡಿನ ರೀತಿಯಲ್ಲೇ ಸಿದ್ಧಮಾಡಲಾಗಿದೆ. ಇಡೀ ಮನೆಗೆ ವಿಶೇಷ ಲುಕ್​ ನೀಡಲಾಗಿದೆ. ಇದು ವೀಕ್ಷಕರಿಗೆ ಸಾಕಷ್ಟು ಖುಷಿ ನೀಡಿದೆ. ಬಿಗ್​ ಬಾಸ್​ ಒಟಿಟಿ ಕೇವಲ ವೂಟ್​ನಲ್ಲಿ ಮಾತ್ರ ಪ್ರಸಾರವಾಗುತ್ತಿತ್ತು. ಆದರೆ, ‘ಬಿಗ್​ ಬಾಸ್ 15’ ಟಿವಿಯಲ್ಲಿ ಪ್ರಸಾರವಾಗಲಿದೆ. ಕಲರ್ಸ್​ ಟಿವಿಯಲ್ಲಿ ರಾತ್ರಿ 9:30ಕ್ಕೆ ಈ ರಿಯಾಲಿಟಿ ಶೋ ಪ್ರಸಾರವಾಗಲಿದೆ. ವೀಕೆಂಡ್​ನಲ್ಲಿ ನಿರೂಪಣೆಗೆ ಸಲ್ಮಾನ್​ ಖಾನ್​ ಆಗಮಿಸಲಿದ್ದಾರೆ.

ಮೊದಲ ದಿನ ಈ ಶೋಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಸಲ್ಮಾನ್​ ಖಾನ್​ ಈ ಶೋ ನಡೆಸಿಕೊಟ್ಟಿದ್ದಾರೆ. ಬಾಲಿವುಡ್​​ನ ಖ್ಯಾತ ನಟ ರಣವೀರ್​ ಸಿಂಗ್, ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ವಿಶೇಷ ಅತಿಥಿಯಾಗಿ ಆಗಮಿಸಿದ್ದಾರೆ. ನಟಿ ಮೌನಿ ರಾಯ್​ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದಾರೆ. 100 ದಿನಕ್ಕೂ ಅಧಿಕ ದಿನಗಳ ಕಾಲ ಈ ಶೋ ವೀಕ್ಷಕರನ್ನು ರಂಜಿಸಲಿದೆ. ಸಾಮಾನ್ಯವಾಗಿ ಹಿಂದಿ ಬಿಗ್​ ಬಾಸ್​ಅನ್ನು​ ಅಕ್ಟೋಬರ್​ ತಿಂಗಳಲ್ಲೇ ಆರಂಭಿಸಲಾಗುತ್ತದೆ. ಈ ಬಾರಿಯೂ ಅದೇ ಸಂಪ್ರದಾಯ ಮುಂದುವರಿದಿದೆ.

ಈ ಬಾರಿ ವಿಧಿ ಪಾಂಡ್ಯಾ, ವಿಶಾಲ್​ ಕೋಟಿಯಾನ್​, ಕರಣ್​ ಕುಂದ್ರಾ, ತೇಜಸ್ವಿ ಪ್ರಕಾಶ್​, ಸಿಂಬಾ ನಾಗ್​ಪಾಲ್​, ಮೀಶಾ ಅಯ್ಯರ್​, ಐಶಾನ್​ ಸೆಹಗಾಲ್​, ದೋನಲ್​ ಬಿಶ್ಟ್​​, ಸಾಹಿಲ್​ ಶ್ರಾಫ್​, ಆಕಾಶಾ ಸಿಂಗ್​, ಉಮರ್ ರಿಯಾಜ್, ಅಫ್ಸಾನಾ ಖಾನ್​ ಮತ್ತು ಜಯ್​ ಭಾನುಶಾಲಿ ಬಿಗ್​ ಬಾಸ್​ ಮನೆ ಸೇರಿದ್ದಾರೆ.

ಇದನ್ನೂ ಓದಿ:Bigg Boss 15: ಕಾಡಿನಲ್ಲಿ ನಡೆಯಲಿದೆ ಬಿಗ್​ ಬಾಸ್​; ಮನೆ ನೋಡಿ ಹೌಹಾರಿದ ವೀಕ್ಷಕರು 

ಏರ್​ಪೋರ್ಟ್​​ನಲ್ಲಿ ಸಲ್ಮಾನ್​ ಖಾನ್ ಅವರನ್ನು ತಡೆದಿದ್ದ ಸಿಐ​ಎಸ್ಎಫ್​ ಅಧಿಕಾರಿಗೆ ಈಗ ಸಂಕಷ್ಟ; ಕಾರಣ ಏನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್