AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ 15ಕ್ಕೆ ಸಲ್ಮಾನ್​-ರಣವೀರ್​ ಕೊಟ್ರು ಅದ್ದೂರಿ ಚಾಲನೆ; ಇಲ್ಲಿದೆ ಸ್ಪರ್ಧಿಗಳ ಪಟ್ಟಿ

ಈ ಬಾರಿಯ ‘ಬಿಗ್​ ಬಾಸ್​ 15’ ಕಾಡಿನ ಥೀಮ್​ನೊಂದಿಗೆ ಮೂಡಿ ಬರುತ್ತಿದೆ. ಈ ಕಾರಣಕ್ಕೆ ಬಿಗ್​ ಬಾಸ್​ ಮನೆಯನ್ನು ಕಾಡಿನ ರೀತಿಯಲ್ಲೇ ಸಿದ್ಧಮಾಡಲಾಗಿದೆ. ಇಡೀ ಮನೆಗೆ ವಿಶೇಷ ಲುಕ್​ ನೀಡಲಾಗಿದೆ.

ಬಿಗ್​ ಬಾಸ್​ 15ಕ್ಕೆ ಸಲ್ಮಾನ್​-ರಣವೀರ್​ ಕೊಟ್ರು ಅದ್ದೂರಿ ಚಾಲನೆ; ಇಲ್ಲಿದೆ ಸ್ಪರ್ಧಿಗಳ ಪಟ್ಟಿ
ರಣವೀರ್​ ಸಿಂಗ್​-ಸಲ್ಮಾನ್​ ಖಾನ್​
TV9 Web
| Edited By: |

Updated on: Oct 03, 2021 | 9:59 PM

Share

ಹಿಂದಿ ಬಿಗ್​ ಬಾಸ್​ 15ಕ್ಕೆ ಇಂದು (ಅಕ್ಟೋಬರ್​ 3) ಚಾಲನೆ ನೀಡಲಾಗಿದೆ. ಬಿಗ್​ ಬಾಸ್​ ಒಟಿಟಿ ಪೂರ್ಣಗೊಳ್ಳುತ್ತಿದ್ದಂತೆ ಈ ಶೋ ಆರಂಭವಾಗಿದ್ದು ವೀಕ್ಷಕರಿಗೆ ಖುಷಿ ನೀಡಿದೆ. ಬಿಗ್​ ಬಾಸ್​ ಮನೆ ಒಳಗೆ ಪ್ರವೇಶ ಪಡೆಯುವ ಸ್ಪರ್ಧಿಗಳು ಯಾರು ಎನ್ನುವ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಒಳಗೆ ಎಂಟ್ರಿ ಪಡೆದಿದ್ದಾರೆ.

ಈ ಬಾರಿಯ ‘ಬಿಗ್​ ಬಾಸ್​ 15’ ಕಾಡಿನ ಥೀಮ್​ನೊಂದಿಗೆ ಮೂಡಿ ಬರುತ್ತಿದೆ. ಈ ಕಾರಣಕ್ಕೆ ಬಿಗ್​ ಬಾಸ್​ ಮನೆಯನ್ನು ಕಾಡಿನ ರೀತಿಯಲ್ಲೇ ಸಿದ್ಧಮಾಡಲಾಗಿದೆ. ಇಡೀ ಮನೆಗೆ ವಿಶೇಷ ಲುಕ್​ ನೀಡಲಾಗಿದೆ. ಇದು ವೀಕ್ಷಕರಿಗೆ ಸಾಕಷ್ಟು ಖುಷಿ ನೀಡಿದೆ. ಬಿಗ್​ ಬಾಸ್​ ಒಟಿಟಿ ಕೇವಲ ವೂಟ್​ನಲ್ಲಿ ಮಾತ್ರ ಪ್ರಸಾರವಾಗುತ್ತಿತ್ತು. ಆದರೆ, ‘ಬಿಗ್​ ಬಾಸ್ 15’ ಟಿವಿಯಲ್ಲಿ ಪ್ರಸಾರವಾಗಲಿದೆ. ಕಲರ್ಸ್​ ಟಿವಿಯಲ್ಲಿ ರಾತ್ರಿ 9:30ಕ್ಕೆ ಈ ರಿಯಾಲಿಟಿ ಶೋ ಪ್ರಸಾರವಾಗಲಿದೆ. ವೀಕೆಂಡ್​ನಲ್ಲಿ ನಿರೂಪಣೆಗೆ ಸಲ್ಮಾನ್​ ಖಾನ್​ ಆಗಮಿಸಲಿದ್ದಾರೆ.

ಮೊದಲ ದಿನ ಈ ಶೋಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಸಲ್ಮಾನ್​ ಖಾನ್​ ಈ ಶೋ ನಡೆಸಿಕೊಟ್ಟಿದ್ದಾರೆ. ಬಾಲಿವುಡ್​​ನ ಖ್ಯಾತ ನಟ ರಣವೀರ್​ ಸಿಂಗ್, ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ವಿಶೇಷ ಅತಿಥಿಯಾಗಿ ಆಗಮಿಸಿದ್ದಾರೆ. ನಟಿ ಮೌನಿ ರಾಯ್​ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದಾರೆ. 100 ದಿನಕ್ಕೂ ಅಧಿಕ ದಿನಗಳ ಕಾಲ ಈ ಶೋ ವೀಕ್ಷಕರನ್ನು ರಂಜಿಸಲಿದೆ. ಸಾಮಾನ್ಯವಾಗಿ ಹಿಂದಿ ಬಿಗ್​ ಬಾಸ್​ಅನ್ನು​ ಅಕ್ಟೋಬರ್​ ತಿಂಗಳಲ್ಲೇ ಆರಂಭಿಸಲಾಗುತ್ತದೆ. ಈ ಬಾರಿಯೂ ಅದೇ ಸಂಪ್ರದಾಯ ಮುಂದುವರಿದಿದೆ.

ಈ ಬಾರಿ ವಿಧಿ ಪಾಂಡ್ಯಾ, ವಿಶಾಲ್​ ಕೋಟಿಯಾನ್​, ಕರಣ್​ ಕುಂದ್ರಾ, ತೇಜಸ್ವಿ ಪ್ರಕಾಶ್​, ಸಿಂಬಾ ನಾಗ್​ಪಾಲ್​, ಮೀಶಾ ಅಯ್ಯರ್​, ಐಶಾನ್​ ಸೆಹಗಾಲ್​, ದೋನಲ್​ ಬಿಶ್ಟ್​​, ಸಾಹಿಲ್​ ಶ್ರಾಫ್​, ಆಕಾಶಾ ಸಿಂಗ್​, ಉಮರ್ ರಿಯಾಜ್, ಅಫ್ಸಾನಾ ಖಾನ್​ ಮತ್ತು ಜಯ್​ ಭಾನುಶಾಲಿ ಬಿಗ್​ ಬಾಸ್​ ಮನೆ ಸೇರಿದ್ದಾರೆ.

ಇದನ್ನೂ ಓದಿ:Bigg Boss 15: ಕಾಡಿನಲ್ಲಿ ನಡೆಯಲಿದೆ ಬಿಗ್​ ಬಾಸ್​; ಮನೆ ನೋಡಿ ಹೌಹಾರಿದ ವೀಕ್ಷಕರು 

ಏರ್​ಪೋರ್ಟ್​​ನಲ್ಲಿ ಸಲ್ಮಾನ್​ ಖಾನ್ ಅವರನ್ನು ತಡೆದಿದ್ದ ಸಿಐ​ಎಸ್ಎಫ್​ ಅಧಿಕಾರಿಗೆ ಈಗ ಸಂಕಷ್ಟ; ಕಾರಣ ಏನು?

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್