ಬಿಗ್​ ಬಾಸ್​ 15ಕ್ಕೆ ಸಲ್ಮಾನ್​-ರಣವೀರ್​ ಕೊಟ್ರು ಅದ್ದೂರಿ ಚಾಲನೆ; ಇಲ್ಲಿದೆ ಸ್ಪರ್ಧಿಗಳ ಪಟ್ಟಿ

ಈ ಬಾರಿಯ ‘ಬಿಗ್​ ಬಾಸ್​ 15’ ಕಾಡಿನ ಥೀಮ್​ನೊಂದಿಗೆ ಮೂಡಿ ಬರುತ್ತಿದೆ. ಈ ಕಾರಣಕ್ಕೆ ಬಿಗ್​ ಬಾಸ್​ ಮನೆಯನ್ನು ಕಾಡಿನ ರೀತಿಯಲ್ಲೇ ಸಿದ್ಧಮಾಡಲಾಗಿದೆ. ಇಡೀ ಮನೆಗೆ ವಿಶೇಷ ಲುಕ್​ ನೀಡಲಾಗಿದೆ.

ಬಿಗ್​ ಬಾಸ್​ 15ಕ್ಕೆ ಸಲ್ಮಾನ್​-ರಣವೀರ್​ ಕೊಟ್ರು ಅದ್ದೂರಿ ಚಾಲನೆ; ಇಲ್ಲಿದೆ ಸ್ಪರ್ಧಿಗಳ ಪಟ್ಟಿ
ರಣವೀರ್​ ಸಿಂಗ್​-ಸಲ್ಮಾನ್​ ಖಾನ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 03, 2021 | 9:59 PM

ಹಿಂದಿ ಬಿಗ್​ ಬಾಸ್​ 15ಕ್ಕೆ ಇಂದು (ಅಕ್ಟೋಬರ್​ 3) ಚಾಲನೆ ನೀಡಲಾಗಿದೆ. ಬಿಗ್​ ಬಾಸ್​ ಒಟಿಟಿ ಪೂರ್ಣಗೊಳ್ಳುತ್ತಿದ್ದಂತೆ ಈ ಶೋ ಆರಂಭವಾಗಿದ್ದು ವೀಕ್ಷಕರಿಗೆ ಖುಷಿ ನೀಡಿದೆ. ಬಿಗ್​ ಬಾಸ್​ ಮನೆ ಒಳಗೆ ಪ್ರವೇಶ ಪಡೆಯುವ ಸ್ಪರ್ಧಿಗಳು ಯಾರು ಎನ್ನುವ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಒಳಗೆ ಎಂಟ್ರಿ ಪಡೆದಿದ್ದಾರೆ.

ಈ ಬಾರಿಯ ‘ಬಿಗ್​ ಬಾಸ್​ 15’ ಕಾಡಿನ ಥೀಮ್​ನೊಂದಿಗೆ ಮೂಡಿ ಬರುತ್ತಿದೆ. ಈ ಕಾರಣಕ್ಕೆ ಬಿಗ್​ ಬಾಸ್​ ಮನೆಯನ್ನು ಕಾಡಿನ ರೀತಿಯಲ್ಲೇ ಸಿದ್ಧಮಾಡಲಾಗಿದೆ. ಇಡೀ ಮನೆಗೆ ವಿಶೇಷ ಲುಕ್​ ನೀಡಲಾಗಿದೆ. ಇದು ವೀಕ್ಷಕರಿಗೆ ಸಾಕಷ್ಟು ಖುಷಿ ನೀಡಿದೆ. ಬಿಗ್​ ಬಾಸ್​ ಒಟಿಟಿ ಕೇವಲ ವೂಟ್​ನಲ್ಲಿ ಮಾತ್ರ ಪ್ರಸಾರವಾಗುತ್ತಿತ್ತು. ಆದರೆ, ‘ಬಿಗ್​ ಬಾಸ್ 15’ ಟಿವಿಯಲ್ಲಿ ಪ್ರಸಾರವಾಗಲಿದೆ. ಕಲರ್ಸ್​ ಟಿವಿಯಲ್ಲಿ ರಾತ್ರಿ 9:30ಕ್ಕೆ ಈ ರಿಯಾಲಿಟಿ ಶೋ ಪ್ರಸಾರವಾಗಲಿದೆ. ವೀಕೆಂಡ್​ನಲ್ಲಿ ನಿರೂಪಣೆಗೆ ಸಲ್ಮಾನ್​ ಖಾನ್​ ಆಗಮಿಸಲಿದ್ದಾರೆ.

ಮೊದಲ ದಿನ ಈ ಶೋಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಸಲ್ಮಾನ್​ ಖಾನ್​ ಈ ಶೋ ನಡೆಸಿಕೊಟ್ಟಿದ್ದಾರೆ. ಬಾಲಿವುಡ್​​ನ ಖ್ಯಾತ ನಟ ರಣವೀರ್​ ಸಿಂಗ್, ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ವಿಶೇಷ ಅತಿಥಿಯಾಗಿ ಆಗಮಿಸಿದ್ದಾರೆ. ನಟಿ ಮೌನಿ ರಾಯ್​ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದಾರೆ. 100 ದಿನಕ್ಕೂ ಅಧಿಕ ದಿನಗಳ ಕಾಲ ಈ ಶೋ ವೀಕ್ಷಕರನ್ನು ರಂಜಿಸಲಿದೆ. ಸಾಮಾನ್ಯವಾಗಿ ಹಿಂದಿ ಬಿಗ್​ ಬಾಸ್​ಅನ್ನು​ ಅಕ್ಟೋಬರ್​ ತಿಂಗಳಲ್ಲೇ ಆರಂಭಿಸಲಾಗುತ್ತದೆ. ಈ ಬಾರಿಯೂ ಅದೇ ಸಂಪ್ರದಾಯ ಮುಂದುವರಿದಿದೆ.

ಈ ಬಾರಿ ವಿಧಿ ಪಾಂಡ್ಯಾ, ವಿಶಾಲ್​ ಕೋಟಿಯಾನ್​, ಕರಣ್​ ಕುಂದ್ರಾ, ತೇಜಸ್ವಿ ಪ್ರಕಾಶ್​, ಸಿಂಬಾ ನಾಗ್​ಪಾಲ್​, ಮೀಶಾ ಅಯ್ಯರ್​, ಐಶಾನ್​ ಸೆಹಗಾಲ್​, ದೋನಲ್​ ಬಿಶ್ಟ್​​, ಸಾಹಿಲ್​ ಶ್ರಾಫ್​, ಆಕಾಶಾ ಸಿಂಗ್​, ಉಮರ್ ರಿಯಾಜ್, ಅಫ್ಸಾನಾ ಖಾನ್​ ಮತ್ತು ಜಯ್​ ಭಾನುಶಾಲಿ ಬಿಗ್​ ಬಾಸ್​ ಮನೆ ಸೇರಿದ್ದಾರೆ.

ಇದನ್ನೂ ಓದಿ:Bigg Boss 15: ಕಾಡಿನಲ್ಲಿ ನಡೆಯಲಿದೆ ಬಿಗ್​ ಬಾಸ್​; ಮನೆ ನೋಡಿ ಹೌಹಾರಿದ ವೀಕ್ಷಕರು 

ಏರ್​ಪೋರ್ಟ್​​ನಲ್ಲಿ ಸಲ್ಮಾನ್​ ಖಾನ್ ಅವರನ್ನು ತಡೆದಿದ್ದ ಸಿಐ​ಎಸ್ಎಫ್​ ಅಧಿಕಾರಿಗೆ ಈಗ ಸಂಕಷ್ಟ; ಕಾರಣ ಏನು?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ