AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಮಡಿದ ಪ್ರಿಯಕರ ಸಿದ್ದಾರ್ಥ್​ಗೆ ಬಿಗ್​ ಬಾಸ್​ ಫಿನಾಲೆಯಲ್ಲಿ ಶೆಹನಾಜ್​ ಗಿಲ್​ ನಮನ

ಜ.29 ಮತ್ತು ಜ.30ರಂದು ರಾತ್ರಿ 8 ಗಂಟೆಗೆ ‘ಬಿಗ್​ ಬಾಸ್​ 15’ ಫಿನಾಲೆ ಎಪಿಸೋಡ್​ ಪ್ರಸಾರ ಆಗಲಿದೆ. ಈ ವೇದಿಕೆಯಲ್ಲಿ ಸಿದ್ದಾರ್ಥ್​ ಶುಕ್ಲಾಗೆ ಶೆಹನಾಜ್​ ಗಿಲ್​ ನಮನ ಸಲ್ಲಿಸಲಿದ್ದಾರೆ.

ಹೃದಯಾಘಾತದಿಂದ ಮಡಿದ ಪ್ರಿಯಕರ ಸಿದ್ದಾರ್ಥ್​ಗೆ ಬಿಗ್​ ಬಾಸ್​ ಫಿನಾಲೆಯಲ್ಲಿ ಶೆಹನಾಜ್​ ಗಿಲ್​ ನಮನ
ಶೆಹನಾಜ್​ ಗಿಲ್​, ಸಿದ್ದಾರ್ಥ್​​ ಶುಕ್ಲಾ
TV9 Web
| Edited By: |

Updated on: Jan 26, 2022 | 9:35 AM

Share

ನೋಡನೋಡುತ್ತಿದ್ದಂತೆಯೇ ಹಿಂದಿ ಬಿಗ್​ ಬಾಸ್​ ಸೀಸನ್​ 15ರ ಫಿನಾಲೆ (Bigg Boss 15 Finale) ಸಮೀಪಿಸಿದೆ. ಸಲ್ಮಾನ್​ ಖಾನ್​ ನಡೆಸಿಕೊಡುವ ಈ ಕಾರ್ಯಕ್ರಮಕ್ಕೆ ದೊಡ್ಡ ವೀಕ್ಷಕರ ವರ್ಗ ಇದೆ. ಈ ವರ್ಷ ಕೊರೊನಾ ಹರಡುವ ಭೀತಿಯ ನಡುವೆಯೂ ಹಿಂದಿ ಬಿಗ್​ ಬಾಸ್​ ಶೋ ಯಶಸ್ವಿಯಾಗಿ ಪೂರ್ಣಗೊಳ್ಳುತ್ತಿದೆ. ಎಂದಿನಂತೆ ಈ ಬಾರಿ ಕೂಡ ಹಲವು ಬಗೆಯ ಕಾಂಟ್ರವರ್ಸಿಗಳು ಈ ಕಾರ್ಯಕ್ರಮದಲ್ಲಿ ಜಾಗ ಪಡೆದುಕೊಂಡವು. ಅನೇಕರ ಮೇಲೆ ಸಲ್ಮಾನ್​ ಖಾನ್​ ರೇಗಾಡಿದರು. ಹಲವರು ಕಣ್ಣೀರು ಸುರಿಸಿದರು. ಹೀಗೆ ಅನೇಕ ಡ್ರಾಮಾಗಳಿಗೆ ಸಾಕ್ಷಿಯಾದ ‘ಬಿಗ್​ ಬಾಸ್​ ಸೀಸನ್​ 15’ಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆ ವೇದಿಕೆಯಲ್ಲಿ ನಟ ಸಿದ್ದಾರ್ಥ್​ ಶುಕ್ಲಾ (Sidharth Shukla) ಅವರನ್ನು ವಿಶೇಷವಾಗಿ ಸ್ಮರಿಸಿಕೊಳ್ಳಲಾಗುತ್ತದೆ. ಕಳೆದ ವರ್ಷ ಹೃದಯಾಘಾತದಿಂದ ನಿಧನರಾದ ಅವರಿಗೆ ನಟಿ ಶೆಹನಾಜ್​ ಗಿಲ್​ (Shehnaaz Gill) ಅವರು ನಮನ ಸಲ್ಲಿಸಲಿದ್ದಾರೆ. ಕಲರ್ಸ್​ ವಾಹಿನಿ ಈ ಕುರಿತಂತೆ ಒಂದು ಪ್ರೋಮೋ ಹಂಚಿಕೊಂಡಿದೆ. ಅದನ್ನು ನೋಡಿದ ವೀಕ್ಷಕರು ಭಾವುಕರಾಗಿದ್ದಾರೆ.

ಹಿಂದಿ ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್​ ಗಿಲ್​ ಮತ್ತು ಸಿದ್ದಾರ್ಥ್​ ಶುಕ್ಲಾ ಅವರು ಸ್ಪರ್ಧಿಸಿದ್ದರು. ಆ ಸೀಸನ್​ನಲ್ಲಿ ಸಿದ್ದಾರ್ಥ್​ ಶುಕ್ಲಾ ವಿನ್ನರ್​ ಆಗಿ ಹೊರಹೊಮ್ಮಿದರೆ, 2ನೇ ರನ್ನರ್​ ಅಪ್​ ಸ್ಥಾನಕ್ಕೆ ಶೆಹನಾಜ್​ ಗಿಲ್​ ತೃಪ್ತಿಪಟ್ಟುಕೊಂಡಿದ್ದರು. ಅವರಿಬ್ಬರ ನಡುವಿನ ಆಪ್ತತೆ ಕಂಡು ಎಲ್ಲರಿಗೂ ಖುಷಿ ಆಗಿತ್ತು. ಬಿಗ್​ ಬಾಸ್​ ಮುಗಿದ ಬಳಿಕವೂ ಅವರಿಬ್ಬರು ಜೊತೆಯಾಗಿ ವಾಸಿಸುತ್ತಿದ್ದರು. ಆದರೆ ವಿಧಿಯ ಯೋಜನೆ ಬೇರೆಯೇ ಇತ್ತು. ಹೃದಯಾಘಾತದಿಂದ ಸಿದ್ದಾರ್ಥ್​ ಮೃತಪಟ್ಟಾಗ ಶೆಹನಾಜ್​ಗೆ ಆಕಾಶವೇ ಕಳಚಿ ತಲೆ ಮೇಲೆ ಬಿದ್ದಂತಾಗಿತ್ತು.

ಪ್ರಿಯಕರನನ್ನು ಕಳೆದುಕೊಂಡ ನೋವಿನಲ್ಲಿರುವ ಶೆಹನಾಜ್​ ಗಿಲ್​ ಅವರು ಬಿಗ್​ ಬಾಸ್​ ಫಿನಾಲೆ ಕಾರ್ಯಕ್ರಮಕ್ಕೆ ಬಂದು ನಮನ ಸಲ್ಲಿಸಲಿದ್ದಾರೆ. ಜ.29 ಮತ್ತು ಜ.30ರಂದು ರಾತ್ರಿ 8 ಗಂಟೆಗೆ ಫಿನಾಲೆ ಎಪಿಸೋಡ್​ ಪ್ರಸಾರ ಆಗಲಿದೆ.

ಹಿಂದಿ ಕಿರುತೆರೆಯಲ್ಲಿ ಜನಪ್ರಿಯರಾಗಿದ್ದ ಸಿದ್ದಾರ್ಥ್​ ಶುಕ್ಲಾ:

ಹಲವು ಧಾರಾವಾಹಿ ಮತ್ತು ರಿಯಾಲಿಟಿ ಶೋಗಳಲ್ಲಿ ಭಾಗವಹಿಸುವ ಮೂಲಕ ಹಿಂದಿ ಕಿರುತೆರೆಯಲ್ಲಿ ಸಿದ್ದಾರ್ಥ್​ ಶುಕ್ಲಾ ಅವರು ಫೇಮಸ್​ ಆಗಿದ್ದರು. ಮಾಡೆಲ್​ ಆಗಿ ವೃತ್ತಿಜೀವನ ಆರಂಭಿಸಿದ್ದ ಅವರು ನಂತರ ಕಿರುತೆರೆಯಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ಹಲವು ಧಾರಾವಾಹಿಗಳಲ್ಲಿ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ಬಿಗ್​ ಬಾಸ್​ ಸೀಸನ್​ 13ರಲ್ಲಿ ಅವರು ವಿನ್ನರ್​ ಆಗಿ ಹೊರಹೊಮ್ಮಿದ ಬಳಿಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದರು. ಬಿಗ್​ ಬಾಸ್​ ಮಾತ್ರವಲ್ಲದೆ, ‘ಕತ್ರೋಂಕೆ ಕಿಲಾಡಿ ಸೀಸನ್​ 7’ರಲ್ಲೂ ಅವರು ವಿನ್ನರ್​ ಆಗಿದ್ದರು. ಬಿಗ್​ ಬಾಸ್​ 14ರಲ್ಲಿ ಅವರು ಗೆಸ್ಟ್​ ಆಗಿ ದೊಡ್ಮನೆ ಪ್ರವೇಶಿಸಿದ್ದರು.

ಸೀರಿಯಲ್​ನಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದು ಮಾತ್ರವಲ್ಲದೆ, ಹಲವು ಧಾರಾವಾಹಿ​ಗಳಲ್ಲಿ ಸಿದ್ಧಾರ್ಥ್​ ಶುಕ್ಲಾ ಅತಿಥಿ ಪಾತ್ರ ಮಾಡಿದ್ದರು. ಬಾಲಿವುಡ್​ನ ಕೆಲವು ಸಿನಿಮಾಗಳಲ್ಲೂ ಕೂಡ ಅವರು ನಟಿಸಿದ್ದರು. ವರುಣ್​ ಧವನ್​ ನಾಯಕತ್ವದ ‘ಹಂಪ್ಟಿ ಶರ್ಮಾ ಕಿ ದುಲ್ಹನಿಯಾ’ ಚಿತ್ರದಲ್ಲಿ ಅವರೊಂದು ಪಾತ್ರ ಮಾಡಿದ್ದರು. ಏಕ್ತಾ ಕಪೂರ್​ ನಿರ್ಮಾಣದ ‘ಬ್ರೋಕನ್​ ಬಟ್​ ಬ್ಯೂಟಿಫುಲ್​ 3’ ವೆಬ್​ ಸಿರೀಸ್​ನಲ್ಲಿ ಸಿದ್ಧಾರ್ಥ್​ ನಟಿಸಿದ್ದರು.

ಇದನ್ನೂ ಓದಿ:

‘ನೀನೂ ಸತ್ತು ಹೋಗು’: ಸಿದ್ದಾರ್ಥ್​ ಶುಕ್ಲಾ ನಿಧನದ ಬಳಿಕ ಕಿಡಿಗೇಡಿಗಳಿಂದ ನಟಿಗೆ ಮೆಸೇಜ್​; ಆಸ್ಪತ್ರೆಗೆ ದಾಖಲು

ಸಿದ್ದಾರ್ಥ್​ ಶುಕ್ಲಾ ಶ್ರದ್ದಾಂಜಲಿ ಸಭೆ: ಅಭಿಮಾನಿಗಳಿಗೂ ಆಹ್ವಾನ ನೀಡಿದ ತಾಯಿ; ಇಲ್ಲಿದೆ ಮೀಟಿಂಗ್​ ಲಿಂಕ್​

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?