AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 15 Winner: ನಟಿ ತೇಜಸ್ವಿ ಪ್ರಕಾಶ್​ಗೆ ‘ಬಿಗ್​ ಬಾಸ್​ 15’ ವಿನ್ನರ್​ ಪಟ್ಟ; ಬಹುಮಾನದ ಮೊತ್ತ ಎಷ್ಟು?

Tejasswi Prakash: ಕಿರುತೆರೆ ನಟಿ ತೇಜಸ್ವಿ ಪ್ರಕಾಶ್​ ಅವರು ‘ಹಿಂದಿ ಬಿಗ್​ ಬಾಸ್​ 15’ರ ವಿನ್ನರ್​ ಆಗಿದ್ದಾರೆ. ನಟ ಕಮ್​ ಮಾಡೆಲ್​ ಪ್ರತೀಕ್​ ಸೆಹಜ್ಪಾಲ್​ ಅವರು ರನ್ನರ್​ ಅಪ್​ ಆಗಿದ್ದಾರೆ.

Bigg Boss 15 Winner: ನಟಿ ತೇಜಸ್ವಿ ಪ್ರಕಾಶ್​ಗೆ ‘ಬಿಗ್​ ಬಾಸ್​ 15’ ವಿನ್ನರ್​ ಪಟ್ಟ; ಬಹುಮಾನದ ಮೊತ್ತ ಎಷ್ಟು?
‘ಹಿಂದಿ ಬಿಗ್ ಬಾಸ್ 15’ರ ವಿನ್ನರ್ ತೇಜಸ್ವಿ ಪ್ರಕಾಶ್
TV9 Web
| Edited By: |

Updated on:Jan 31, 2022 | 8:32 AM

Share

ಜನಪ್ರಿಯ ‘ಹಿಂದಿ ಬಿಗ್​ ಬಾಸ್​ 15’ ಕಾರ್ಯಕ್ರಮಕ್ಕೆ ತೆರೆಬಿದ್ದಿದೆ. ಈ ಸೀಸನ್​ನ ವಿನ್ನರ್ (Bigg Boss 15 Winner)​ ಯಾರು ಎಂಬುದು ಬಹಿರಂಗ ಆಗಿದೆ. ಹಲವು ರೀತಿಯಲ್ಲಿ ಗಮನ ಸೆಳೆದ ನಟಿ ತೇಜಸ್ವಿ ಪ್ರಕಾಶ್​ (Tejasswi Prakash) ಅವರು ‘ಬಿಗ್​ ಬಾಸ್​ 15’ರ ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ. ಅವರು ವಿನ್ ಆಗುತ್ತಾರೆ ಎಂದು ಬಹುತೇಕರು ಊಹಿಸಿರಲಿಲ್ಲ. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ (Shamita Shetty) ಅವರೇ ಈ ಬಾರಿ ಬಿಗ್​ ಬಾಸ್​ ಟ್ರೋಫಿ ಎತ್ತಿ ಹಿಡಿಯಬಹುದು ಎಂದು ಅನೇಕರು ಅಂದಾಜಿಸಿದ್ದರು. ಆದರೆ ಆ ಲೆಕ್ಕಾಚಾರ ಉಲ್ಟಾ ಆಯಿತು. ಅಂತಿಮವಾಗಿ ತೇಜಸ್ವಿ ಪ್ರಕಾಶ್​ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಪ್ರತೀಕ್​ ಸೆಹಜ್ಪಾಲ್​ ಅವರು ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಸಲ್ಮಾನ್​ ಖಾನ್​ ಅವರು ತೇಜಸ್ವಿ ಪ್ರಕಾಶ್​ ಅವರ ಕೈ ಎತ್ತುವ ಮೂಲಕ ಅವರೇ ವಿನ್ನರ್​ ಎಂಬುದನ್ನು ಘೋಷಿಸಿದರು. ಬರೋಬ್ಬರಿ 40 ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತೇಜಸ್ವಿ ಪ್ರಕಾಶ್​ ಪಡೆದಿದ್ದಾರೆ. ಭಾನುವಾರ (ಜ.30) ರಾತ್ರಿ ಅದ್ದೂರಿಯಾಗಿ ಬಿಗ್​ ಬಾಸ್​ 15ನೇ ಸೀಸನ್​ ಫಿನಾಲೆ ಕಾರ್ಯಕ್ರಮ ನಡೆಯಿತು. ಹಲವು ಘಟನೆಗಳಿಗೆ ಈ ವೇದಿಕೆ ಸಾಕ್ಷಿ ಆಯಿತು.

‘ಹಿಂದಿ ಬಿಗ್​ ಬಾಸ್​ 15’ ಫಿನಾಲೆಯಲ್ಲಿ ಭರ್ಜರಿ ಪೈಪೋಟಿ ಏರ್ಪಟ್ಟಿತ್ತು. ರಶ್ಮಿ ದೇಸಾಯಿ, ಪ್ರತೀಕ್​ ಸೆಹಜ್ಪಾಲ್​, ತೇಜಸ್ವಿ ಪ್ರಕಾಶ್​, ಶಮಿತಾ ಶೆಟ್ಟಿ, ಕರಣ್​ ಕುಂದ್ರಾ ಮತ್ತು ನಿಶಾಂತ್​ ಭಟ್​ ಅವರು ಫಿನಾಲೆ ತಲುಪಿದ್ದರು. ಎಲ್ಲರೂ ಕೂಡ ಪ್ರಬಲ ಸ್ಪರ್ಧಿಗಳೇ ಆಗಿದ್ದರು. ವೈಲ್ಡ್​ ಕಾರ್ಡ್​ ಮೂಲಕ ಬಿಗ್​ ಬಾಸ್​ ಪ್ರವೇಶಿಸಿ, ಫೈನಲ್​ ಹಂತ ತಲುಪಿದ್ದ ರಶ್ಮಿ ದೇಸಾಯಿ ಅವರು ಮೊದಲು ಎಲಿಮಿನೇಟ್​ ಆದರು.

ಶಮಿತಾ ಶೆಟ್ಟಿ ವರ್ಸಸ್​ ತೇಜಸ್ವಿ ಪ್ರಕಾಶ್​:

ಈ ಸೀಸನ್​ನಲ್ಲಿ ಶಮಿತಾ ಶೆಟ್ಟಿ ಅವರಿಗೆ ತೇಜಸ್ವಿ ಪ್ರಕಾಶ್​ ಪ್ರಬಲ ಪ್ರತಿಸ್ಪರ್ಧಿ ಆಗಿದ್ದರು. ಶಮಿತಾ ಶೆಟ್ಟಿಗೆ ಆಂಟಿ ಎಂದು ಕರೆಯುವ ಮೂಲಕ ಅವರು ದೊಡ್ಡ ಕಿರಿಕ್​ ಮಾಡಿಕೊಂಡಿದ್ದರು. 42ರ ಪ್ರಾಯದ ಶಮಿತಾಗೆ 28ರ ಪ್ರಾಯದ ತೇಜಸ್ವಿ ಪ್ರಕಾಶ್​ ಅವರು ಆಂಟಿ ಎಂದು ಕರೆದಿದ್ದು ಅನೇಕರ ಅಸಮಾಧಾನಕ್ಕೆ ಕಾರಣ ಆಗಿತ್ತು. ಶಮಿತಾ ಶೆಟ್ಟಿಯ ವಯಸ್ಸನ್ನು ಅವಮಾನಿಸಲಾಗಿದೆ ಎಂದು ಸೋಶಿಯಲ್​ ಮೀಡಿಯಾದಲ್ಲಿ ಹಲವರು ತೇಜಸ್ವಿ ಪ್ರಕಾಶ್​ ವಿರುದ್ಧ ಗುಡುಗಿದ್ದರು. ಇಷ್ಟೆಲ್ಲ ವಿರೋಧ ವ್ಯಕ್ತವಾದ ಕಾರಣ ಅವರಿಗೆ ಹೆಚ್ಚು ವೋಟ್​ ಸಿಗುವುದು ಅನುಮಾನ ಎಂದು ಊಹಿಸಲಾಗಿತ್ತು. ಆದರೆ ಆಗಿದ್ದೇ ಬೇರೆ. ಅಂತಿಮವಾಗಿ ತೇಜಸ್ವಿ ಪ್ರಕಾಶ್​ ಬಿಗ್​ ಬಾಸ್​ ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ.

View this post on Instagram

A post shared by ColorsTV (@colorstv)

ಈ ರಿಯಾಟಿಲಿ ಶೋ ಗೆದ್ದಿದ್ದರಿಂದ ತೇಜಸ್ವಿ ಪ್ರಕಾಶ್​ ಖ್ಯಾತಿ ಹೆಚ್ಚಿದೆ. ಅವರಿಗೆ ಹೊಸ ಹೊಸ ಅವಕಾಶಗಳು ಹರಿದುಬರಲು ಆರಂಭಿಸಿವೆ. ಅವರ ಅಭಿಮಾನಿ ಬಳಗ ಕೂಡ ದೊಡ್ಡದಾಗಿದೆ. ‘ಬಿಗ್​ ಬಾಸ್​ 15’ ಫಿನಾಲೆ ಎಪಿಸೋಡ್​ನಲ್ಲಿ ದೀಪಿಕಾ ಪಡುಕೋಣೆ ಕೂಡ ಭಾಗವಹಿಸಿದ್ದರು. ‘ಗೆಹರಾಯಿಯಾ’ ಸಿನಿಮಾದ ಪ್ರಚಾರಕ್ಕಾಗಿ ಅವರು ಬಿಗ್​ ಬಾಸ್​ಗೆ ಬಂದಿದ್ದರು. ಬಿಗ್​ ಬಾಸ್​ ಮಾಜಿ ಸ್ಪರ್ಧಿ ಶೆಹನಾಜ್​ ಗಿಲ್​ ಅವರು ಫಿನಾಲೆ ವೇದಿಕೆಯಲ್ಲಿ ದಿವಂಗತ ನಟ, ಪ್ರಿಯಕರ ಸಿದ್ದಾರ್ಥ್​ ಶುಕ್ಲಾಗೆ ನಮನ ಸಲ್ಲಿಸಿದರು.

ಇದನ್ನೂ ಓದಿ:

ದಕ್ಷಿಣ ಭಾರತಕ್ಕೂ ಕಾಲಿಟ್ಟ ‘ಬಿಗ್​ ಬಾಸ್​ ಒಟಿಟಿ’; ಕನ್ನಡಿಗರಲ್ಲೂ ಹೆಚ್ಚಿತು ಕುತೂಹಲ

ಶಿಲ್ಪಾ ಶೆಟ್ಟಿ ತಂಗಿಗೆ ಸಲ್ಮಾನ್​ ಖಾನ್ ಖಡಕ್​ ವಾರ್ನಿಂಗ್​​​; ಎಲ್ಲರ ಎದುರು ಕಣ್ಣೀರು ಹಾಕಿದ ಶಮಿತಾ

Published On - 7:17 am, Mon, 31 January 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್