AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Munawar Faruqui: ಬಿಗ್​ಬಾಸ್ ವಿಜೇತ ಮುನಾವರ್ ಫಾರೂಖಿ ಬಂಧನ

Munawar Faruqui: ಸ್ಟಾಂಡಪ್ ಕಮಿಡಿಯನ್, ಬಿಗ್​ಬಾಸ್ 17 ವಿಜೇತ ಮುನಾವರ್ ಫಾರೂಖಿಯನ್ನು ಮುಂಬೈ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದಾರೆ. ಪ್ರಕರಣ ಏನು?

Munawar Faruqui: ಬಿಗ್​ಬಾಸ್ ವಿಜೇತ ಮುನಾವರ್ ಫಾರೂಖಿ ಬಂಧನ
ಮಂಜುನಾಥ ಸಿ.
|

Updated on: Mar 27, 2024 | 10:58 AM

Share

ಹಿಂದಿ ಬಿಗ್​ಬಾಸ್ ವಿಜೇತ ಮುನಾವರ್ ಫಾರೂಖಿಯನ್ನು ಮುಂಬೈ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದ್ದಾರೆ. ಮುಂಬೈನಲ್ಲಿನ ಹುಕ್ಕಾ ಬಾರ್, ಹುಕ್ಕಾ ಪಾಪ್ಯೂಲರ್ ಮೇಲೆ ತಡರಾತ್ರಿ ದಾಳಿ ನಡೆಸಿದ್ದ ಪೊಲೀಸರು ಬಿಗ್​ಬಾಸ್ ವಿಜೇತ ಮುನಾವರ್ ಫಾರೂಖಿ ಸೇರಿದಂತೆ ಇನ್ನೂ 14 ಮಂದಿಯನ್ನು ಬಂಧಿಸಿದ್ದರು. ಎಲ್ಲರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಳಿಕ ಎಲ್ಲರನ್ನೂ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ.

ಮಂಗಳವಾರ ರಾತ್ರಿ ಹುಕ್ಕಾ ಪಾಪ್ಯೂಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಿಗ್​ಬಾಸ್ ಹಿಂದಿ ಸೀಸನ್ 17ರ ವಿಜೇತ, ಸ್ಟಾಂಡಪ್ ಕಮಿಡಿಯನ್ ಮುನಾವರ್ ಫಾರೂಖಿ ಸಹ ಸ್ಥಳದಲ್ಲಿದ್ದರು. ಅವರನ್ನೂ ಸೇರಿದಂತೆ ಅಲ್ಲಿದ್ದ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ದಾಳಿಯ ವೇಳೆ 13,500 ಮೌಲ್ಯದ ಹುಕ್ಕಾ ಪಾಟ್​ಗಳು, 4500 ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ದಾಳಿ ನಡೆಸಿದಾಗ ಹಲವಾರು ಮಂದಿ ಸಿಗರೇಟು ಹಾಗೂ ಹುಕ್ಕಾ ಸೇವನೆ ಮಾಡುತ್ತಿದ್ದರಂತೆ.

ಇದನ್ನೂ ಓದಿ:Munawar Faruqui ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇದೆ: ಕಾಮಿಡಿಯನ್ ಮುನಾವರ್ ಫಾರೂಖಿ

ದಾಳಿ ನಡೆಸಿದ ಪೊಲೀಸರು ಬೆಳಗಿನ ಜಾವದ ವರೆಗೆ ತನಿಖೆ ನಡೆಸಿದ್ದಾರೆ. ಕೊನೆಗೆ ಸಿಗರೇಟು ಮತ್ತು ಇತರೆ ತಂಬಾಕು ಪದಾರ್ಥಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು. ಪ್ರಕರಣ ಜಾಮೀನಿಗೆ ಅರ್ಹವಾಗಿರುವ ಕಾರಣ ಎಲ್ಲರನ್ನೂ ಬಿಟ್ಟು ಕಳುಹಿಸಿದ್ದಾರೆ. ಆದರೆ ಎಲ್ಲರ ವಿರುದ್ಧ ತಂಬಾಕು ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮುನಾವರ್ ಫಾರೂಖಿ ಜನಪ್ರಿಯ ಸ್ಟಾಂಡಪ್ ಕಮಿಡಿಯನ್. ಕೆಲ ವರ್ಷಗಳ ಹಿಂದೆ ಮುನಾವರ್ ಫಾರೂಖಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಬಗ್ಗೆ ಅವಹೇಳನಕಾರಿ ಜೋಕ್ ಒಂದನ್ನು ಶೋನಲ್ಲಿ ಹೇಳಿದ್ದಾರೆಂಬ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಮುನಾವರ್ ಬಂಧನ ಭಾರಿ ಸುದ್ದಿಯಾಗಿತ್ತು. ಆ ಬಳಿಕ ಕೆಲವು ರಾಜ್ಯಗಳಲ್ಲಿ ಅವರ ಸ್ಟಾಂಡಪ್ ಕಾಮಿಡಿ ಶೋಗಳು ರದ್ದಾಗಿದ್ದವು. ಬಳಿಕ ಮುನಾವರ್ ಕಂಗನಾ ನಡೆಸಿಕೊಟ್ಟ ‘ಲಾಕ್​ಅಪ್’ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಗೆದ್ದರು. ಬಳಿಕ ಬಿಗ್​ಬಾಸ್ ಹಿಂದಿ ಸೀಸನ್ 17ರಲ್ಲಿ ಭಾಗವಹಿಸಿ ಅಲ್ಲಿಯೂ ವಿಜೇತರಾದರು. ಇತ್ತೀಚೆಗಷ್ಟೆ ಸೆಲೆಬ್ರಿಟಿಗಳ ಜೊತೆಗೆ ಸ್ಟ್ರೀಟ್ ಕ್ರಿಕೆಟ್ ಆಡಿದ್ದ ಮುನಾವರ್ ಸಚಿನ್ ತೆಂಡೂಲ್ಕರ್ ವಿಕೆಟ್ ಪಡೆದಿದ್ದರು. ಆ ವಿಡಿಯೋ ಸಖತ್ ವೈರಲ್ ಆಗಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!