AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ

ಬಿಗ್ ಬಾಸ್​ ಶೋನಲ್ಲಿ ವಿವಾದಗಳು ಸಹಜ. ಕೆಲವರಿಗೆ ಈ ಕಾರ್ಯಕ್ರಮದ ಬಗ್ಗೆ ಅನುಮಾನ ಇದೆ. ಇದನ್ನು ಸ್ಕ್ರಿಪ್ಡೆಟ್​ ಶೋ ಎಂದು ಕರೆದವರು ಅನೇಕರಿದ್ದಾರೆ. ಅಲ್ಲದೇ, ವಿನ್ನರ್​ ಆಯ್ಕೆಯಲ್ಲಿ ಪಕ್ಷಪಾತ ಆಗುತ್ತದೆ ಎಂಬ ಆರೋಪ ಕೂಡ ಹಲವರದ್ದು. ಈ ಬಾರಿ ‘ಹಿಂದಿ ಬಿಗ್​ ಬಾಸ್​’ ಗೆದ್ದ ಮುನಾವರ್​ ಫಾರೂಖಿ ಅವರನ್ನು ಫಿಕ್ಸ್ಡ್​ ವಿನ್ನರ್​ ಎಂದು ಕೆಲವರು ಆರೋಪಿಸಿದ್ದಾರೆ.

‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ
ಬಿಗ್ ಬಾಸ್
ಮದನ್​ ಕುಮಾರ್​
|

Updated on: Jan 29, 2024 | 3:59 PM

Share

ಪ್ರತಿ ಬಾರಿ ಬಿಗ್​ ಬಾಸ್​ ಫಿನಾಲೆ (Bigg Boss Finale) ನಡೆದಾಗ ಕೆಲವರು ಕೊಂಕು ನುಡಿಯುತ್ತಾರೆ. ತಮ್ಮಿಷ್ಟದ ಸ್ಪರ್ಧಿಯೇ ಟ್ರೋಫಿ ಗೆದ್ದರೆ ವೀಕ್ಷಕರು ಖುಷಿ ಪಡುತ್ತಾರೆ. ಒಂದು ವೇಳೆ ತಮಗೆ ಇಷ್ಟ ಇಲ್ಲದ ಸ್ಪರ್ಧಿಗೆ ಟ್ರೋಫಿ ಸಿಕ್ಕರೆ ಹಲವು ಆರೋಪಗಳನ್ನು ಮಾಡಲಾಗುತ್ತದೆ. ಈ ಬಾರಿಯೂ ಹಾಗೇ ಆಗಿದೆ. ‘ಬಿಗ್​ ಬಾಸ್​ ಹಿಂದಿ ಸೀಸನ್​ 17’ (Bigg Boss 17) ಮುಕ್ತಾಯ ಆಗಿದೆ. ಈ ರಿಯಾಲಿಟಿ ಶೋನಲ್ಲಿ ಮುನಾವರ್​ ಫಾರೂಖಿ (Munawar Faruqui) ಅವರು ವಿನ್​ ಆಗಿದ್ದಾರೆ. ಅವರ ಅಭಿಮಾನಿಗಳಿಗೆ ಈ ಗೆಲುವು ಖುಷಿ ನೀಡಿದೆ. ಆದರೆ ಇನ್ನೊಂದು ವರ್ಗದ ಜನರು ಕೊಂಕು ನುಡಿಯುತ್ತಿದ್ದಾರೆ. ಇದು ಫಿಕ್ಸಿಂಗ್​ನಿಂದ ಆದ ಗೆಲುವು ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಆರೋಪ ಮಾಡುತ್ತಿದ್ದಾರೆ.

‘ಬಿಗ್​ ಬಾಸ್​ ಹಿಂದಿ ಸೀಸನ್​ 17’ ಶೋನ ಫಿನಾಲೆಗೆ ಅಂಕಿತಾ ಲೋಖಂಡೆ, ಮನ್ನಾರಾ ಚೋಪ್ರಾ, ಅಭಿಷೇಕ್​ ಕುಮಾರ್​, ಮುನಾವರ್​ ಫಾರೂಖಿ, ಅರುಣ್​ ಮಶೆಟ್ಟಿ ಅವರು ಬಂದಿದ್ದರು. ಈ ಟಾಪ್​ 5 ಸ್ಪರ್ಧಿಗಳಲ್ಲಿ ಅಂತಿಮವಾಗಿ ಮುನಾವರ್​ ಫಾರೂಖಿ ಅವರು ವಿನ್​ ಆದರು. ಜನವರಿ 28ರಂದು ಬಿಗ್​ ಬಾಸ್​ ಫಿನಾಲೆ ನಡೆದಿದೆ. ಈ ಶೋ ಗೆದ್ದ ಮುನಾವರ್​ ಫಾರೂಖಿಗೆ 50 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ. ಹ್ಯೂಂಡೈ ಕ್ರೆಟಾ ಕಾರು ನೀಡಲಾಗಿದೆ. ಈ ಖುಷಿಯಲ್ಲಿ ಇರುವ ಅವರು ‘ಫಿಕ್ಸಿಂಗ್​’ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:  ‘ಕುಟುಂಬದವರು ಅಮಾಯಕರು’; ಟ್ರೋಲ್ ಮಾಡಿದವರಿಗೆ ಕಾರ್ತಿಕ್ ಉತ್ತರ

‘ಇ-ಟೈಮ್ಸ್​’ ಮಾಡಿದ ಸಂದರ್ಶನದಲ್ಲಿ ಮುನಾವರ್​ ಫಾರೂಖಿ ಅವರು ಈ ಕುರಿತು ಮಾತನಾಡಿದ್ದಾರೆ. ‘ನಾನು ಫಿಕ್ಸಿಂಗ್​ ವಿನ್ನರ್​ ಆಗಿದ್ದಿದ್ದರೆ ಇಷ್ಟೆಲ್ಲ ಕಷ್ಟ ಅನುಭವಿಸಬೇಕಿರಲಿಲ್ಲ. ಎಲ್ಲವೂ ನನಗೆ ಸುಲಭವಾಗಿ ಸಿಗುತ್ತಿತ್ತು. ಇಡೀ ಸೀಸನ್​ನಲ್ಲಿ ನಾನು ಕಷ್ಟಪಟ್ಟಿದ್ದೇನೆ. ನನ್ನನ್ನು ಫಿಕ್ಸ್ಡ್​ ವಿನ್ನರ್​ ಎಂದು ಕರೆಯುವವರು ಕುಳಿತುಕೊಂಡು ಪೂರ್ತಿ ಸೀಸನ್​ನ ಸಂಚಿಕೆಗಳನ್ನು ನೋಡಲಿ. ಫಿಕ್ಸಿಂಗ್​ ಅಲ್ಲ ಎಂಬುದು ಆಗ ಗೊತ್ತಾಗುತ್ತದೆ’ ಎಂದು ಮುನಾವರ್​ ಫಾರೂಖಿ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ವಿನ್ ಆದ ಸ್ಪರ್ಧಿಗೆ ಸಂಪೂರ್ಣವಾಗಿ ಸಿಗಲ್ಲ 50 ಲಕ್ಷ ರೂಪಾಯಿ; ಎಷ್ಟು ಹಣ ಕಟ್ ಆಗುತ್ತೆ?

‘ನನಗೆ ಜನರಿಂದ ಪ್ರೀತಿ ಸಿಕ್ಕಿದೆ. ಯಾರೆಲ್ಲ ನನ್ನನ್ನು ಫಿಕ್ಸ್ಡ್​ ವಿನ್ನರ್​ ಎಂದು ಕರೆಯುತ್ತಿದ್ದಾರೋ ಅವರ ಅಭಿಪ್ರಾಯವನ್ನು ನಾನು ಬದಲಾಯಿಸಲು ಸಾಧ್ಯವಿಲ್ಲ. ಬಿಗ್​ ಬಾಸ್​ಗೆ ಹೋಗುವುದಕ್ಕೂ ಮುನ್ನ ನಾನು ಜನರ ಅಭಿಪ್ರಾಯ ಬದಲಾಯಿಸಲು ಪ್ರಯತ್ನಿಸುತ್ತಿದ್ದೆ. ಆದರೆ ಈಗ ಎಲ್ಲರನ್ನೂ ಬದಲಾಯಿಸಲು ಆಗಲ್ಲ ಎಂಬುದು ನನಗೆ ಗೊತ್ತಾಗಿದೆ’ ಎಂದು ಮುನಾವರ್​ ಫಾರೂಖಿ ಹೇಳಿದ್ದಾರೆ. ಈ ಮೊದಲು ಸ್ಟ್ಯಾಂಡಪ್​ ಕಾಮಿಡಿ ಮಾಡುವಾಗ ಸಲ್ಮಾನ್​ ಖಾನ್​ ಅವರನ್ನು ಮುನಾವರ್​ ಟ್ರೋಲ್ ಮಾಡಿದ್ದರು. ಹಾಗಿದ್ದರೂ ಕೂಡ ಮುನಾವರ್​ ಅವರೇ ಗೆದ್ದಿರುವುದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್