AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ

ಬಿಗ್ ಬಾಸ್​ ಶೋನಲ್ಲಿ ವಿವಾದಗಳು ಸಹಜ. ಕೆಲವರಿಗೆ ಈ ಕಾರ್ಯಕ್ರಮದ ಬಗ್ಗೆ ಅನುಮಾನ ಇದೆ. ಇದನ್ನು ಸ್ಕ್ರಿಪ್ಡೆಟ್​ ಶೋ ಎಂದು ಕರೆದವರು ಅನೇಕರಿದ್ದಾರೆ. ಅಲ್ಲದೇ, ವಿನ್ನರ್​ ಆಯ್ಕೆಯಲ್ಲಿ ಪಕ್ಷಪಾತ ಆಗುತ್ತದೆ ಎಂಬ ಆರೋಪ ಕೂಡ ಹಲವರದ್ದು. ಈ ಬಾರಿ ‘ಹಿಂದಿ ಬಿಗ್​ ಬಾಸ್​’ ಗೆದ್ದ ಮುನಾವರ್​ ಫಾರೂಖಿ ಅವರನ್ನು ಫಿಕ್ಸ್ಡ್​ ವಿನ್ನರ್​ ಎಂದು ಕೆಲವರು ಆರೋಪಿಸಿದ್ದಾರೆ.

‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ
ಬಿಗ್ ಬಾಸ್
ಮದನ್​ ಕುಮಾರ್​
|

Updated on: Jan 29, 2024 | 3:59 PM

Share

ಪ್ರತಿ ಬಾರಿ ಬಿಗ್​ ಬಾಸ್​ ಫಿನಾಲೆ (Bigg Boss Finale) ನಡೆದಾಗ ಕೆಲವರು ಕೊಂಕು ನುಡಿಯುತ್ತಾರೆ. ತಮ್ಮಿಷ್ಟದ ಸ್ಪರ್ಧಿಯೇ ಟ್ರೋಫಿ ಗೆದ್ದರೆ ವೀಕ್ಷಕರು ಖುಷಿ ಪಡುತ್ತಾರೆ. ಒಂದು ವೇಳೆ ತಮಗೆ ಇಷ್ಟ ಇಲ್ಲದ ಸ್ಪರ್ಧಿಗೆ ಟ್ರೋಫಿ ಸಿಕ್ಕರೆ ಹಲವು ಆರೋಪಗಳನ್ನು ಮಾಡಲಾಗುತ್ತದೆ. ಈ ಬಾರಿಯೂ ಹಾಗೇ ಆಗಿದೆ. ‘ಬಿಗ್​ ಬಾಸ್​ ಹಿಂದಿ ಸೀಸನ್​ 17’ (Bigg Boss 17) ಮುಕ್ತಾಯ ಆಗಿದೆ. ಈ ರಿಯಾಲಿಟಿ ಶೋನಲ್ಲಿ ಮುನಾವರ್​ ಫಾರೂಖಿ (Munawar Faruqui) ಅವರು ವಿನ್​ ಆಗಿದ್ದಾರೆ. ಅವರ ಅಭಿಮಾನಿಗಳಿಗೆ ಈ ಗೆಲುವು ಖುಷಿ ನೀಡಿದೆ. ಆದರೆ ಇನ್ನೊಂದು ವರ್ಗದ ಜನರು ಕೊಂಕು ನುಡಿಯುತ್ತಿದ್ದಾರೆ. ಇದು ಫಿಕ್ಸಿಂಗ್​ನಿಂದ ಆದ ಗೆಲುವು ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಆರೋಪ ಮಾಡುತ್ತಿದ್ದಾರೆ.

‘ಬಿಗ್​ ಬಾಸ್​ ಹಿಂದಿ ಸೀಸನ್​ 17’ ಶೋನ ಫಿನಾಲೆಗೆ ಅಂಕಿತಾ ಲೋಖಂಡೆ, ಮನ್ನಾರಾ ಚೋಪ್ರಾ, ಅಭಿಷೇಕ್​ ಕುಮಾರ್​, ಮುನಾವರ್​ ಫಾರೂಖಿ, ಅರುಣ್​ ಮಶೆಟ್ಟಿ ಅವರು ಬಂದಿದ್ದರು. ಈ ಟಾಪ್​ 5 ಸ್ಪರ್ಧಿಗಳಲ್ಲಿ ಅಂತಿಮವಾಗಿ ಮುನಾವರ್​ ಫಾರೂಖಿ ಅವರು ವಿನ್​ ಆದರು. ಜನವರಿ 28ರಂದು ಬಿಗ್​ ಬಾಸ್​ ಫಿನಾಲೆ ನಡೆದಿದೆ. ಈ ಶೋ ಗೆದ್ದ ಮುನಾವರ್​ ಫಾರೂಖಿಗೆ 50 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ. ಹ್ಯೂಂಡೈ ಕ್ರೆಟಾ ಕಾರು ನೀಡಲಾಗಿದೆ. ಈ ಖುಷಿಯಲ್ಲಿ ಇರುವ ಅವರು ‘ಫಿಕ್ಸಿಂಗ್​’ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:  ‘ಕುಟುಂಬದವರು ಅಮಾಯಕರು’; ಟ್ರೋಲ್ ಮಾಡಿದವರಿಗೆ ಕಾರ್ತಿಕ್ ಉತ್ತರ

‘ಇ-ಟೈಮ್ಸ್​’ ಮಾಡಿದ ಸಂದರ್ಶನದಲ್ಲಿ ಮುನಾವರ್​ ಫಾರೂಖಿ ಅವರು ಈ ಕುರಿತು ಮಾತನಾಡಿದ್ದಾರೆ. ‘ನಾನು ಫಿಕ್ಸಿಂಗ್​ ವಿನ್ನರ್​ ಆಗಿದ್ದಿದ್ದರೆ ಇಷ್ಟೆಲ್ಲ ಕಷ್ಟ ಅನುಭವಿಸಬೇಕಿರಲಿಲ್ಲ. ಎಲ್ಲವೂ ನನಗೆ ಸುಲಭವಾಗಿ ಸಿಗುತ್ತಿತ್ತು. ಇಡೀ ಸೀಸನ್​ನಲ್ಲಿ ನಾನು ಕಷ್ಟಪಟ್ಟಿದ್ದೇನೆ. ನನ್ನನ್ನು ಫಿಕ್ಸ್ಡ್​ ವಿನ್ನರ್​ ಎಂದು ಕರೆಯುವವರು ಕುಳಿತುಕೊಂಡು ಪೂರ್ತಿ ಸೀಸನ್​ನ ಸಂಚಿಕೆಗಳನ್ನು ನೋಡಲಿ. ಫಿಕ್ಸಿಂಗ್​ ಅಲ್ಲ ಎಂಬುದು ಆಗ ಗೊತ್ತಾಗುತ್ತದೆ’ ಎಂದು ಮುನಾವರ್​ ಫಾರೂಖಿ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ವಿನ್ ಆದ ಸ್ಪರ್ಧಿಗೆ ಸಂಪೂರ್ಣವಾಗಿ ಸಿಗಲ್ಲ 50 ಲಕ್ಷ ರೂಪಾಯಿ; ಎಷ್ಟು ಹಣ ಕಟ್ ಆಗುತ್ತೆ?

‘ನನಗೆ ಜನರಿಂದ ಪ್ರೀತಿ ಸಿಕ್ಕಿದೆ. ಯಾರೆಲ್ಲ ನನ್ನನ್ನು ಫಿಕ್ಸ್ಡ್​ ವಿನ್ನರ್​ ಎಂದು ಕರೆಯುತ್ತಿದ್ದಾರೋ ಅವರ ಅಭಿಪ್ರಾಯವನ್ನು ನಾನು ಬದಲಾಯಿಸಲು ಸಾಧ್ಯವಿಲ್ಲ. ಬಿಗ್​ ಬಾಸ್​ಗೆ ಹೋಗುವುದಕ್ಕೂ ಮುನ್ನ ನಾನು ಜನರ ಅಭಿಪ್ರಾಯ ಬದಲಾಯಿಸಲು ಪ್ರಯತ್ನಿಸುತ್ತಿದ್ದೆ. ಆದರೆ ಈಗ ಎಲ್ಲರನ್ನೂ ಬದಲಾಯಿಸಲು ಆಗಲ್ಲ ಎಂಬುದು ನನಗೆ ಗೊತ್ತಾಗಿದೆ’ ಎಂದು ಮುನಾವರ್​ ಫಾರೂಖಿ ಹೇಳಿದ್ದಾರೆ. ಈ ಮೊದಲು ಸ್ಟ್ಯಾಂಡಪ್​ ಕಾಮಿಡಿ ಮಾಡುವಾಗ ಸಲ್ಮಾನ್​ ಖಾನ್​ ಅವರನ್ನು ಮುನಾವರ್​ ಟ್ರೋಲ್ ಮಾಡಿದ್ದರು. ಹಾಗಿದ್ದರೂ ಕೂಡ ಮುನಾವರ್​ ಅವರೇ ಗೆದ್ದಿರುವುದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?