AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಬಿಗ್ ಬಾಸ್ ನಿರೂಪಣೆ ಮಾಡೋದು ಒಬ್ಬರಲ್ಲ, ಮೂವರು ಸೆಲೆಬ್ರಿಟಿಗಳು

3 ತಿಂಗಳಿಗೆ ಬದಲಾಗಿ, ಬರೋಬ್ಬರಿ 5 ತಿಂಗಳ ಕಾಲ ಬಿಗ್ ಬಾಸ್ ರಿಯಾಲಿಟಿ ಶೋ ನಡೆಯಲಿದೆ. ಆದ್ದರಿಂದ ಮೂವರು ಸೆಲೆಬ್ರಿಟಿಗಳಿಗೆ ಈ ಬಾರಿ ನಿರೂಪಣೆಯ ಜವಾಬ್ದಾರಿ ನೀಡಲು ತೀರ್ಮಾನಿಸಲಾಗಿದೆ. ಆದರೆ ಈ ಬಗ್ಗೆ ಆಯೋಜಕರು ಇನ್ನೂ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳುವುದು ಬಾಕಿ ಇದೆ.

ಈ ಬಾರಿ ಬಿಗ್ ಬಾಸ್ ನಿರೂಪಣೆ ಮಾಡೋದು ಒಬ್ಬರಲ್ಲ, ಮೂವರು ಸೆಲೆಬ್ರಿಟಿಗಳು
Bigg Boss
ಮದನ್​ ಕುಮಾರ್​
|

Updated on: Jul 08, 2025 | 10:03 PM

Share

ವರ್ಷದಿಂದ ವರ್ಷಕ್ಕೆ ಬಿಗ್ ಬಾಸ್ (Bigg Boss) ಕಾರ್ಯಕ್ರಮದ ಸ್ವರೂಪ ಬದಲಾಗುತ್ತಿದೆ. ಪ್ರತಿ ವರ್ಷ ಕೆಲವು ಹೊಸ ವಿಷಯಗಳನ್ನು ಈ ಶೋನಲ್ಲಿ ಪರಿಚಯಿಸಲಾಗುತ್ತಿದೆ. ಒಂದಷ್ಟು ಪ್ರಯೋಗಗಳನ್ನು ಕೂಡ ಮಾಡಲಾಗುತ್ತದೆ. ವಿವಿಧ ಥೀಮ್​ನಲ್ಲಿ ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತದೆ. ಎಲ್ಲ ಭಾಷೆಯಲ್ಲಿಯೂ ಈ ಶೋ ಫೇಮಸ್ ಆಗಿದೆ. ಈ ವರ್ಷದ ಬಿಗ್ ಬಾಸ್ ಹೊಸ ಸೀಸನ್ (Bigg Boss 19) ಆರಂಭಕ್ಕೆ ತಯಾರಿ ನಡೆಯುತ್ತಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್ (Salman Khan) ಅವರು ಎಂದಿನಂತೆ ಶೋ ನಡೆಸಿಕೊಡಲಿದ್ದಾರೆ. ಆದರೆ ಅವರ ಜೊತೆ ಇನ್ನೂ ಇಬ್ಬರು ನಿರೂಪಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹಿಂದಿ ಬಿಗ್ ಬಾಸ್ ಈವರೆಗೂ 18 ಸೀಸನ್​ಗಳಲ್ಲಿ ಯಶಸ್ವಿಯಾಗಿ ನಡೆದಿದೆ. ಈಗ 19ನೇ ಸೀಸನ್​ಗೆ ಸಿದ್ಧತೆ ನಡೆಯುತ್ತಿದೆ. ವಿಶೇಷ ಏನೆಂದರೆ, ಇಷ್ಟು ವರ್ಷಗಳ ಕಾಲ ಕೇವಲ 3 ತಿಂಗಳು ನಡೆಯುತ್ತಿದ್ದ ಈ ರಿಯಾಲಿಟಿ ಶೋ ಅನ್ನು ಈ ಬಾರಿ 5 ತಿಂಗಳಿಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ! ಅದಕ್ಕಾಗಿ ಮೂವರು ನಿರೂಪಕರಿಗೆ ಶೋ ನಡೆಸಿಕೊಡುವ ಜವಾಬ್ದಾರಿ ನೀಡಲಾಗುತ್ತದೆ ಎಂಬ ಸುದ್ದಿ ಕೇಳಿಬಂದಿದೆ.

ಎಂದಿನಂತೆ ಸಲ್ಮಾನ್ ಖಾನ್ ಅವರು 3 ತಿಂಗಳ ಕಾಲಾವಧಿಗೆ ಒಪ್ಪಂದ ಮಾಡಿಕೊಂಡಿರುತ್ತಾರೆ. ಇನ್ನು ಹೆಚ್ಚುವರಿ ಎರಡು ತಿಂಗಳು ಶೋ ನಡೆಸಿಕೊಡಲು ಇನ್ನಿಬ್ಬರು ಸೆಲೆಬ್ರಿಟಿಗಳ ಮೊರೆ ಹೋಗಲಾಗುತ್ತಿದೆ. ವರದಿಗಳ ಪ್ರಕಾರ, ಕರಣ್ ಜೋಹರ್ ಮತ್ತು ಅನಿಲ್ ಕಪೂರ್ ಅವರಿಗೆ ಈ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಬಿಗ್ ಬಾಸ್ ಆಯೋಜಕರು ಅಧಿಕೃತವಾಗಿ ಏನನ್ನೂ ಹೇಳಿಲ್ಲ.

ಸದ್ಯಕ್ಕೆ ಈ ಎಲ್ಲ ಮಾಹಿತಿ ಅಂತೆ-ಕಂತೆಗಳ ಹಂತದಲ್ಲಿದೆ. ಈ ಬಾರಿ ಒಟಿಟಿಗೆ ಹೆಚ್ಚು ಆದ್ಯತೆ ನೀಡಲು ತೀರ್ಮಾನಿಸಿದಂತಿದೆ. ಆದರೆ ಟಿವಿಯಲ್ಲಿ ಪ್ರಸಾರ ಆಗುವುದಕ್ಕಿಂತ ಒಂದೆರಡು ಗಂಟೆಗಳ ಮುಂಚೆ ಒಟಿಟಿಯಲ್ಲಿ ಬಿಗ್ ಬಾಸ್ ಪ್ರಸಾರ ಆಗಲಿದೆ. ಯಾವ ಸ್ಪರ್ಧಿಗಳಿಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಹೊಸ ಸೀಸನ್ ನೋಡಲು ವೀಕ್ಷಕರು ಕಾದಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಬಗ್ಗೆ ಸುದೀಪ್​ಗೆ ಇದ್ದ ಅಸಮಾಧಾನ ಏನು? ನೇರವಾಗಿ ವಿವರಿಸಿದ ಕಿಚ್ಚ

ಕನ್ನಡದಲ್ಲಿ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ನಡೆಸಿಕೊಡಲಿದ್ದಾರೆ. ಇನ್ಮುಂದೆ ತಾವು ಬಿಗ್ ಬಾಸ್ ನಿರೂಪಣೆ ಮಾಡಲ್ಲ ಎಂದು ಕಳೆದ ವರ್ಷ ಸುದೀಪ್ ಅವರು ಹೇಳಿದ್ದರು. ಆದರೆ ನಂತರ ಮನಸ್ಸು ಬದಲಾಯಿಸಿದರು. ಇದರಿಂದ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಇತ್ತೀಚೆಗೆ ಮಾಹಿತಿ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?