AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ​ ಮುನಾವರ್​ಗೆ ‘ಜೈ ಶ್ರೀರಾಮ್’ ಎಂದು ಗ್ರೀಟ್ ಮಾಡಿದ ತಾನ್ಯಾ; ಸಲ್ಲು ರಿಯಾಕ್ಷನ್ ಏನು?

‘ಬಿಗ್ ಬಾಸ್ ಕನ್ನಡ ಸೀಸನ್ 19’ರಲ್ಲಿ ಮುನಾವರ್ ಫಾರೂಕಿ ಅತಿಥಿಯಾಗಿ ತೆರಳಿದ್ದರು. ತಾನ್ಯಾ ಅವರು ‘ಜೈ ಶ್ರೀರಾಮ್’ ಎಂದು ವಿಶ್ ಮಾಡಿದ್ದಾರೆ. ಸಲ್ಮಾನ್ ಖಾನ್ ಅವರ ಪ್ರತಿಕ್ರಿಯೆ ಕೂಡ ಚರ್ಚೆಗೆ ಗ್ರಾಸವಾಗಿವೆ. ವಿವಿಧ ಕ್ಷೇತ್ರಗಳ ಸ್ಪರ್ಧಿಗಳ ಭಾಗವಹಿಸುವಿಕೆಯು ಶೋಗೆ ಹೊಸ ಆಯಾಮವನ್ನು ನೀಡಿದೆ.

ಬಿಗ್ ಬಾಸ್​ನಲ್ಲಿ​ ಮುನಾವರ್​ಗೆ ‘ಜೈ ಶ್ರೀರಾಮ್’ ಎಂದು ಗ್ರೀಟ್ ಮಾಡಿದ ತಾನ್ಯಾ; ಸಲ್ಲು ರಿಯಾಕ್ಷನ್ ಏನು?
ತಾನ್ಯಾ
ರಾಜೇಶ್ ದುಗ್ಗುಮನೆ
|

Updated on: Sep 11, 2025 | 8:59 AM

Share

‘ಹಿಂದಿ ಬಿಗ್ ಬಾಸ್ ಸೀಸನ್ 19’ (Bigg Boss) ಆರಂಭ ಆಗಿದೆ. ಈ ಬಾರಿ ವಿವಿಧ ಕ್ಷೇತ್ರದ ಸ್ಪರ್ಧಿಗಳು ಶೋಗೆ ಆಗಮಿಸಿದ್ದಾರೆ. ಪ್ರತಿ ವೀಕೆಂಡ್​ನಲ್ಲಿ ಸಲ್ಮಾನ್ ಖಾನ್ ಬಂದು ಎಲ್ಲಾ ಸ್ಪರ್ಧಿಗಳನ್ನು ರೋಸ್ಟ್ ಮಾಡಿ ಹೋಗುತ್ತಾರೆ. ಇತ್ತೀಚೆಗೆ ಬಿಗ್ ಬಾಸ್​ನಲ್ಲಿ ನಡೆದ ಘಟನೆ ಒಂದು ಸಾಕಷ್ಟು ಚರ್ಚೆ ಆಗುತ್ತಾ ಇದೆ. ಕಾಮಿಡಿಯನ್ ಮುನಾವರ್ ಫಾರೂಕಿ ಅವರು ಅತಿಥಿಯಾಗಿ ಬಂದಿದ್ದರು. ಅವರಿಗೆ ತಾನ್ಯಾ ಹೆಸರಿನ ಸ್ಪರ್ಧಿ ‘ಜೈ ಶ್ರೀರಾಮ್’ ಎಂದು ಗ್ರೀಟ್ ಮಾಡಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.

ಕಳೆದ ವಾರ ಈ ಶೋಗೆ 18ನೇ ಸೀಸನ್ ವಿನ್ನರ್ ಮುನಾವರ್ ಆಗಮಿಸಿದ್ದಾರೆ. ಅವರು ಎಲ್ಲಾ ಸ್ಪರ್ಧಿಗಳನ್ನು ಸಾಕಷ್ಟು ರೋಸ್ಟ್ ಮಾಡಿದ್ದಾರೆ. ಅವರು ಎಲ್ಲರಿಗೂ ಪರೋಕ್ಷವಾಗಿ ಪಾಠ ಮಾಡಿದ್ದಾರೆ. ‘ಇಶಾನ್ ಭಾಯ್’ ಎಂದು ಮುನಾವರ್ ಅವರು ಮಾತನಾಡಿಸಿದರು. ‘ಅಸ್-ಸಲಾಮು ಅಲೈಕುಮ್’ ಎಂದು ಇಶಾನ್ ಮಾತನಾಡಿಸಿದ್ದಾರೆ.

ಇದನ್ನೂ ಓದಿ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್
Image
ಲೂಸಿಯಾದಲ್ಲಿ ರಿಷಬ್ ಶೆಟ್ಟಿ ಮಾಡಿದ ಪಾತ್ರ ನೆನಪಿದೆಯೇ? ಅದೆಷ್ಟು ಬದಲಾವಣೆ
Image
‘ಹಳ್ಳಿ ಪವರ್​’ನಲ್ಲಿ 1 ವಾರಕ್ಕೆ 4 ಮಂದಿ ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ
Image
ಸು ಫ್ರಮ್ ಸೋಗೆ OTTಯಲ್ಲಿ ಬೇರೆಯದೇ ರೀತಿಯ ವಿಮರ್ಶೆ; ಸಮಸ್ಯೆ ಆಗಿದ್ದೆಲ್ಲಿ?

ಇದನ್ನೂ ಓದಿ: ಸುಧಾರಾಣಿ ಬಿಗ್ ಬಾಸ್​ಗೆ ಬರ್ತಾರೆ ಎಂದ ಟ್ರೋಲ್​ ಪೇಜ್​ಗಳಿಗೆ ಮೀಮ್​ ಸ್ಟೈಲ್​ನಲ್ಲಿ ಉತ್ತರಿಸಿದ ನಟಿ

ಇದೇ ವೇಳೆ ತಾನ್ಯಾ ಅವರನ್ನು ಮುನಾವರ್ ಮಾತನಾಡಿಸಿದರು. ತಾನ್ಯಾ ಅವರು, ‘ಜೈ ಶ್ರೀರಾಮ್’ ಎಂದು ಗ್ರೀಟ್ ಮಾಡಿದರು. ತಾನ್ಯಾ ಉತ್ತರ ನೋಡಿ ಸಲ್ಮಾನ್ ಖಾನ್ ಮೊಗದಲೂ ನಗು ಬಂತು. ಅವರು ಖುಷಿಯಿಂದ ನಕ್ಕಿದ್ದಾರೆ. ಅನೇಕರು ತಾನ್ಯಾ ಅವರನ್ನು ಹೊಗಳಿದ್ದಾರೆ. ‘ತಾನ್ಯಾ ಮೇಳೆ ಇರೋ ಗೌರವ ಹೆಚ್ಚಾಯಿತು’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

View this post on Instagram

A post shared by Drama Bloom (@drama_bloom_)

ಸಲ್ಮಾನ್ ಖಾನ್ ಅವರು ಸರ್ವ ಧರ್ಮವನ್ನೂ ಬೆಂಬಲಿಸುವವರು. ಅವರು ಮುಸ್ಲಿಂ ಆಗಿದ್ದರೂ ಮನೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸುತ್ತಾ ಬರುತ್ತಿದ್ದಾರೆ. ಅವರ ತಂದೆ ಸಲೀಮ್ ಮುಸ್ಲಿಂ. ಅವರ ತಾಯಿ ಹಿಂದೂ ಆಗಿದ್ದರು. ಸಲೀಮ್ ಕೂಡ ಎಲ್ಲಾ ಧರ್ಮವನ್ನು ಗೌರವಿಸುತ್ತಾ ಬರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ