AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಿದ ತಪ್ಪಿಗೆ ಅಶ್ವಿನಿ ಗೌಡಗೆ ಶಿಕ್ಷೆ ಕೊಟ್ಟ ಸುದೀಪ್; ಪ್ರಾಯಶ್ಚಿತ ಮಾಡಿಕೊಂಡ ನಟಿ

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಉದ್ದೇಶಪೂರ್ವಕವಾಗಿ ನಿಯಮಗಳನ್ನು ಉಲ್ಲಂಘಿಸಿ ಕ್ಯಾಪ್ಟನ್ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸುದೀಪ್, ಅಶ್ವಿನಿ ಗೌಡರಿಗೆ ತಪ್ಪು ತಿಳಿಸಿ ಶಿಕ್ಷೆ ನೀಡಿದ್ದಾರೆ. ತಮ್ಮ ತಪ್ಪಿಗೆ ಪ್ರಾಯಶ್ಚಿತ್ತವಾಗಿ, ಅಶ್ವಿನಿ ಅವರು ಮನೆಯ ಎಲ್ಲಾ ಕ್ಯಾಮರಾಗಳ ಮುಂದೆ ಕ್ಷಮೆಯಾಚಿಸಬೇಕಾಯಿತು.

ಮಾಡಿದ ತಪ್ಪಿಗೆ ಅಶ್ವಿನಿ ಗೌಡಗೆ ಶಿಕ್ಷೆ ಕೊಟ್ಟ ಸುದೀಪ್; ಪ್ರಾಯಶ್ಚಿತ ಮಾಡಿಕೊಂಡ ನಟಿ
ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on:Oct 27, 2025 | 12:05 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಅವರು ತಾವು ನಡೆದಿದ್ದೇ ಹಾದಿ ಎಂಬ ರೀತಿಯಲ್ಲಿ ಆಗಿತ್ತು. ಅವರು ಕಂಟೆಂಟ್ ಕ್ರಿಯೇಟ್ ಮಾಡಬೇಕು ಎಂದು ಏನೇನೋ ಮಾಡುತ್ತಿದ್ದರು. ಆದರೆ, ಇದು ಸರಿ ಅಲ್ಲ ಎಂದು ಸುದೀಪ್ ತಿದ್ದಿ ಹೇಳಿದ್ದಾರೆ. ಜೊತೆಗೆ ಶಿಕ್ಷೆ ಕೂಡ ನೀಡಿದ್ದಾರೆ. ಈ ಶಿಕ್ಷೆಯನ್ನು ಅಶ್ವಿನಿ ಗೌಡ ಅವರು ಚಾಚೂ ತಪ್ಪದೇ ಮಾಡಿದ್ದಾರೆ. ಮಾಡಿದ ತಪ್ಪಿಗೆ ಇದು ಪ್ರಾಯಶ್ಚಿತ ಎಂದು ಅನೇಕರು ಹೇಳಿದ್ದಾರೆ.

ಬಿಗ್ ಬಾಸ್ ಸಾಕಷ್ಟು ನಿಯಮಗಳನ್ನು ಮಾಡಿದ್ದಾರೆ. ಈ ನಿಯಮ ಚಾಚೂತಪ್ಪದೆ ಪಾಲನೆ ಆಗಬೇಕು. ಈ ನಿಯಮ ಪಾಲಿಸಿಲ್ಲ ಎಂದರೆ ಮೊದಲು ಎಚ್ಚರಿಕೆ ಬರುತ್ತದೆ. ಆ ಬಳಿಕ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಶ್ವಿನಿ ಗೌಡ ಅವರು ಕಳಪೆ ಪಟ್ಟ ಪಡೆದಾಗ ಗೊತ್ತಿದ್ದೂ ಗೊತ್ತಿದ್ದೂ ತಪ್ಪು ಮಾಡಿದ್ದರು. ಈ ತಪ್ಪಿಗೆ ಸುದೀಪ್ ಶಿಕ್ಷೆ ನೀಡಿದ್ದಾರೆ.

ಬಿಗ್ ಬಾಸ್ ಕ್ಯಾಪ್ಟನ್ ಆದ ರಘು ಅವರಿಗೆ ಕಳೆದ ವಾರ ವಿಶೇಷ ಅಧಿಕಾರ ಒಂದನ್ನು ನೀಡಲಾಯಿತು. ಇದರ ಪ್ರಕಾರ ರಘು ಅವರು ಒಬ್ಬರನ್ನು ಕಳಪೆ ಸ್ಥಾನಕ್ಕೆ ಆಯ್ಕೆ ಮಾಡಬೇಕಿತ್ತು. ಈ ವೇಳೆ ಅಶ್ವಿನಿ ಗೌಡ ಹೆಸರನ್ನು ರಘು ಕಳಪೆ ಸ್ಥಾನಕ್ಕೆ ಸೂಚಿಸಿದರು. ಇದರಿಂದ ಅಶ್ವಿನಿ ಗೌಡ ಅವರಿಗೆ ಸಾಕಷ್ಟು ಕೋಪ ಹಾಗೂ ಸಿಟ್ಟು ಬಂತು. ಅವರು ರಘು ವಿರುದ್ಧ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದರು.

ಇದನ್ನೂ ಓದಿ
Image
‘ಮಿಸ್ ಮಾಡಿಕೊಳ್ತೀನಿ’; ಮನೆಯಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್
Image
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’; ಬದಲಾದ ಅಶ್ವಿನಿ ಗೌಡ
Image
‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್ ಮಾಯಕಾರನಾಗಲು ಬೇಕಾಯ್ತು 6 ಗಂಟೆ
Image
4ನೇ ಭಾನುವಾರವೂ ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಡಬಲ್ ಡಿಜಿಟ್ ಕಲೆಕ್ಷನ್

ಇದನ್ನೂ ಓದಿ: ಸಾಂಗ್ ಆಗಿ ಬದಲಾಯ್ತು ಗಿಲ್ಲಿ ಹೇಳಿದ್ದ ‘ದೊಡ್ಡವ್ವ ದೋಸೆ ಕೊಡು’ ಡೈಲಾಗ್; ನೀವು ಕೇಳಿ

ಈ ಕಾರಣದಿಂದಲೇ ಉದ್ದೇಶಪೂರ್ವಕವಾಗಿ ನಿಯಮಗಳನ್ನು ಮುರಿದರು. ಈ ವಿಚಾರದಲ್ಲಿ ಸುದೀಪ್ ಅವರಿಗೆ ಬೇಸರ ಆಗಿದೆ. ಈ ಕಾರಣದಿಂದಲೇ ‘ಅಶ್ವಿನಿ ಅವರೇ ನೀವು ಕ್ಯಾಪ್ಟನ್​ಗೆ ಕೀಟಲೆ ಮಾಡಬೇಕು ಎಂದು ನಿರ್ಧರಿಸಿದಿರಿ ಓಕೆ. ಆದರೆ, ಬಿಗ್ ಬಾಸ್ ನಿಯಮಗಳನ್ನು ಮುರಿದಿದ್ದೀರಿ. ಹೀಗಾಗಿ, ಗಾರ್ಡನ್ ಏರಿಯಾದಲ್ಲಿರುವ ಎಲ್ಲಾ ಕ್ಯಾಮೆರಾಗಳಿಗೆ ನೀವು ಕ್ಷಮೆ ಕೇಳಲೇಬೇಕು’ ಎಂದು ಸುದೀಪ್ ಸೂಚಿಸಿದರು. ಅಂತೆಯೇ ಅಶ್ವಿನಿ ಗೌಡ ಅವರು ಹೋಗಿ ಎಲ್ಲಾ ಕ್ಯಾಮೆರಾಗಳ ಎದುರು ಕ್ಷಮೆ ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:04 pm, Mon, 27 October 25

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು