AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಿದ ತಪ್ಪಿಗೆ ಅಶ್ವಿನಿ ಗೌಡಗೆ ಶಿಕ್ಷೆ ಕೊಟ್ಟ ಸುದೀಪ್; ಪ್ರಾಯಶ್ಚಿತ ಮಾಡಿಕೊಂಡ ನಟಿ

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಉದ್ದೇಶಪೂರ್ವಕವಾಗಿ ನಿಯಮಗಳನ್ನು ಉಲ್ಲಂಘಿಸಿ ಕ್ಯಾಪ್ಟನ್ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸುದೀಪ್, ಅಶ್ವಿನಿ ಗೌಡರಿಗೆ ತಪ್ಪು ತಿಳಿಸಿ ಶಿಕ್ಷೆ ನೀಡಿದ್ದಾರೆ. ತಮ್ಮ ತಪ್ಪಿಗೆ ಪ್ರಾಯಶ್ಚಿತ್ತವಾಗಿ, ಅಶ್ವಿನಿ ಅವರು ಮನೆಯ ಎಲ್ಲಾ ಕ್ಯಾಮರಾಗಳ ಮುಂದೆ ಕ್ಷಮೆಯಾಚಿಸಬೇಕಾಯಿತು.

ಮಾಡಿದ ತಪ್ಪಿಗೆ ಅಶ್ವಿನಿ ಗೌಡಗೆ ಶಿಕ್ಷೆ ಕೊಟ್ಟ ಸುದೀಪ್; ಪ್ರಾಯಶ್ಚಿತ ಮಾಡಿಕೊಂಡ ನಟಿ
ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on:Oct 27, 2025 | 12:05 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಅವರು ತಾವು ನಡೆದಿದ್ದೇ ಹಾದಿ ಎಂಬ ರೀತಿಯಲ್ಲಿ ಆಗಿತ್ತು. ಅವರು ಕಂಟೆಂಟ್ ಕ್ರಿಯೇಟ್ ಮಾಡಬೇಕು ಎಂದು ಏನೇನೋ ಮಾಡುತ್ತಿದ್ದರು. ಆದರೆ, ಇದು ಸರಿ ಅಲ್ಲ ಎಂದು ಸುದೀಪ್ ತಿದ್ದಿ ಹೇಳಿದ್ದಾರೆ. ಜೊತೆಗೆ ಶಿಕ್ಷೆ ಕೂಡ ನೀಡಿದ್ದಾರೆ. ಈ ಶಿಕ್ಷೆಯನ್ನು ಅಶ್ವಿನಿ ಗೌಡ ಅವರು ಚಾಚೂ ತಪ್ಪದೇ ಮಾಡಿದ್ದಾರೆ. ಮಾಡಿದ ತಪ್ಪಿಗೆ ಇದು ಪ್ರಾಯಶ್ಚಿತ ಎಂದು ಅನೇಕರು ಹೇಳಿದ್ದಾರೆ.

ಬಿಗ್ ಬಾಸ್ ಸಾಕಷ್ಟು ನಿಯಮಗಳನ್ನು ಮಾಡಿದ್ದಾರೆ. ಈ ನಿಯಮ ಚಾಚೂತಪ್ಪದೆ ಪಾಲನೆ ಆಗಬೇಕು. ಈ ನಿಯಮ ಪಾಲಿಸಿಲ್ಲ ಎಂದರೆ ಮೊದಲು ಎಚ್ಚರಿಕೆ ಬರುತ್ತದೆ. ಆ ಬಳಿಕ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಶ್ವಿನಿ ಗೌಡ ಅವರು ಕಳಪೆ ಪಟ್ಟ ಪಡೆದಾಗ ಗೊತ್ತಿದ್ದೂ ಗೊತ್ತಿದ್ದೂ ತಪ್ಪು ಮಾಡಿದ್ದರು. ಈ ತಪ್ಪಿಗೆ ಸುದೀಪ್ ಶಿಕ್ಷೆ ನೀಡಿದ್ದಾರೆ.

ಬಿಗ್ ಬಾಸ್ ಕ್ಯಾಪ್ಟನ್ ಆದ ರಘು ಅವರಿಗೆ ಕಳೆದ ವಾರ ವಿಶೇಷ ಅಧಿಕಾರ ಒಂದನ್ನು ನೀಡಲಾಯಿತು. ಇದರ ಪ್ರಕಾರ ರಘು ಅವರು ಒಬ್ಬರನ್ನು ಕಳಪೆ ಸ್ಥಾನಕ್ಕೆ ಆಯ್ಕೆ ಮಾಡಬೇಕಿತ್ತು. ಈ ವೇಳೆ ಅಶ್ವಿನಿ ಗೌಡ ಹೆಸರನ್ನು ರಘು ಕಳಪೆ ಸ್ಥಾನಕ್ಕೆ ಸೂಚಿಸಿದರು. ಇದರಿಂದ ಅಶ್ವಿನಿ ಗೌಡ ಅವರಿಗೆ ಸಾಕಷ್ಟು ಕೋಪ ಹಾಗೂ ಸಿಟ್ಟು ಬಂತು. ಅವರು ರಘು ವಿರುದ್ಧ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದರು.

ಇದನ್ನೂ ಓದಿ
Image
‘ಮಿಸ್ ಮಾಡಿಕೊಳ್ತೀನಿ’; ಮನೆಯಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್
Image
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’; ಬದಲಾದ ಅಶ್ವಿನಿ ಗೌಡ
Image
‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್ ಮಾಯಕಾರನಾಗಲು ಬೇಕಾಯ್ತು 6 ಗಂಟೆ
Image
4ನೇ ಭಾನುವಾರವೂ ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಡಬಲ್ ಡಿಜಿಟ್ ಕಲೆಕ್ಷನ್

ಇದನ್ನೂ ಓದಿ: ಸಾಂಗ್ ಆಗಿ ಬದಲಾಯ್ತು ಗಿಲ್ಲಿ ಹೇಳಿದ್ದ ‘ದೊಡ್ಡವ್ವ ದೋಸೆ ಕೊಡು’ ಡೈಲಾಗ್; ನೀವು ಕೇಳಿ

ಈ ಕಾರಣದಿಂದಲೇ ಉದ್ದೇಶಪೂರ್ವಕವಾಗಿ ನಿಯಮಗಳನ್ನು ಮುರಿದರು. ಈ ವಿಚಾರದಲ್ಲಿ ಸುದೀಪ್ ಅವರಿಗೆ ಬೇಸರ ಆಗಿದೆ. ಈ ಕಾರಣದಿಂದಲೇ ‘ಅಶ್ವಿನಿ ಅವರೇ ನೀವು ಕ್ಯಾಪ್ಟನ್​ಗೆ ಕೀಟಲೆ ಮಾಡಬೇಕು ಎಂದು ನಿರ್ಧರಿಸಿದಿರಿ ಓಕೆ. ಆದರೆ, ಬಿಗ್ ಬಾಸ್ ನಿಯಮಗಳನ್ನು ಮುರಿದಿದ್ದೀರಿ. ಹೀಗಾಗಿ, ಗಾರ್ಡನ್ ಏರಿಯಾದಲ್ಲಿರುವ ಎಲ್ಲಾ ಕ್ಯಾಮೆರಾಗಳಿಗೆ ನೀವು ಕ್ಷಮೆ ಕೇಳಲೇಬೇಕು’ ಎಂದು ಸುದೀಪ್ ಸೂಚಿಸಿದರು. ಅಂತೆಯೇ ಅಶ್ವಿನಿ ಗೌಡ ಅವರು ಹೋಗಿ ಎಲ್ಲಾ ಕ್ಯಾಮೆರಾಗಳ ಎದುರು ಕ್ಷಮೆ ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:04 pm, Mon, 27 October 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ