AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಿದ ತಪ್ಪಿಗೆ ಅಶ್ವಿನಿ ಗೌಡಗೆ ಶಿಕ್ಷೆ ಕೊಟ್ಟ ಸುದೀಪ್; ಪ್ರಾಯಶ್ಚಿತ ಮಾಡಿಕೊಂಡ ನಟಿ

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಉದ್ದೇಶಪೂರ್ವಕವಾಗಿ ನಿಯಮಗಳನ್ನು ಉಲ್ಲಂಘಿಸಿ ಕ್ಯಾಪ್ಟನ್ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಸುದೀಪ್, ಅಶ್ವಿನಿ ಗೌಡರಿಗೆ ತಪ್ಪು ತಿಳಿಸಿ ಶಿಕ್ಷೆ ನೀಡಿದ್ದಾರೆ. ತಮ್ಮ ತಪ್ಪಿಗೆ ಪ್ರಾಯಶ್ಚಿತ್ತವಾಗಿ, ಅಶ್ವಿನಿ ಅವರು ಮನೆಯ ಎಲ್ಲಾ ಕ್ಯಾಮರಾಗಳ ಮುಂದೆ ಕ್ಷಮೆಯಾಚಿಸಬೇಕಾಯಿತು.

ಮಾಡಿದ ತಪ್ಪಿಗೆ ಅಶ್ವಿನಿ ಗೌಡಗೆ ಶಿಕ್ಷೆ ಕೊಟ್ಟ ಸುದೀಪ್; ಪ್ರಾಯಶ್ಚಿತ ಮಾಡಿಕೊಂಡ ನಟಿ
ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on:Oct 27, 2025 | 12:05 PM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಅವರು ತಾವು ನಡೆದಿದ್ದೇ ಹಾದಿ ಎಂಬ ರೀತಿಯಲ್ಲಿ ಆಗಿತ್ತು. ಅವರು ಕಂಟೆಂಟ್ ಕ್ರಿಯೇಟ್ ಮಾಡಬೇಕು ಎಂದು ಏನೇನೋ ಮಾಡುತ್ತಿದ್ದರು. ಆದರೆ, ಇದು ಸರಿ ಅಲ್ಲ ಎಂದು ಸುದೀಪ್ ತಿದ್ದಿ ಹೇಳಿದ್ದಾರೆ. ಜೊತೆಗೆ ಶಿಕ್ಷೆ ಕೂಡ ನೀಡಿದ್ದಾರೆ. ಈ ಶಿಕ್ಷೆಯನ್ನು ಅಶ್ವಿನಿ ಗೌಡ ಅವರು ಚಾಚೂ ತಪ್ಪದೇ ಮಾಡಿದ್ದಾರೆ. ಮಾಡಿದ ತಪ್ಪಿಗೆ ಇದು ಪ್ರಾಯಶ್ಚಿತ ಎಂದು ಅನೇಕರು ಹೇಳಿದ್ದಾರೆ.

ಬಿಗ್ ಬಾಸ್ ಸಾಕಷ್ಟು ನಿಯಮಗಳನ್ನು ಮಾಡಿದ್ದಾರೆ. ಈ ನಿಯಮ ಚಾಚೂತಪ್ಪದೆ ಪಾಲನೆ ಆಗಬೇಕು. ಈ ನಿಯಮ ಪಾಲಿಸಿಲ್ಲ ಎಂದರೆ ಮೊದಲು ಎಚ್ಚರಿಕೆ ಬರುತ್ತದೆ. ಆ ಬಳಿಕ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಶ್ವಿನಿ ಗೌಡ ಅವರು ಕಳಪೆ ಪಟ್ಟ ಪಡೆದಾಗ ಗೊತ್ತಿದ್ದೂ ಗೊತ್ತಿದ್ದೂ ತಪ್ಪು ಮಾಡಿದ್ದರು. ಈ ತಪ್ಪಿಗೆ ಸುದೀಪ್ ಶಿಕ್ಷೆ ನೀಡಿದ್ದಾರೆ.

ಬಿಗ್ ಬಾಸ್ ಕ್ಯಾಪ್ಟನ್ ಆದ ರಘು ಅವರಿಗೆ ಕಳೆದ ವಾರ ವಿಶೇಷ ಅಧಿಕಾರ ಒಂದನ್ನು ನೀಡಲಾಯಿತು. ಇದರ ಪ್ರಕಾರ ರಘು ಅವರು ಒಬ್ಬರನ್ನು ಕಳಪೆ ಸ್ಥಾನಕ್ಕೆ ಆಯ್ಕೆ ಮಾಡಬೇಕಿತ್ತು. ಈ ವೇಳೆ ಅಶ್ವಿನಿ ಗೌಡ ಹೆಸರನ್ನು ರಘು ಕಳಪೆ ಸ್ಥಾನಕ್ಕೆ ಸೂಚಿಸಿದರು. ಇದರಿಂದ ಅಶ್ವಿನಿ ಗೌಡ ಅವರಿಗೆ ಸಾಕಷ್ಟು ಕೋಪ ಹಾಗೂ ಸಿಟ್ಟು ಬಂತು. ಅವರು ರಘು ವಿರುದ್ಧ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದರು.

ಇದನ್ನೂ ಓದಿ
Image
‘ಮಿಸ್ ಮಾಡಿಕೊಳ್ತೀನಿ’; ಮನೆಯಿಂದ ಹೊರಟಿದ್ದ ರಾಶಿಕಾನ ತಬ್ಬಿ ಹೇಳಿದ ಸೂರಜ್
Image
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’; ಬದಲಾದ ಅಶ್ವಿನಿ ಗೌಡ
Image
‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್ ಮಾಯಕಾರನಾಗಲು ಬೇಕಾಯ್ತು 6 ಗಂಟೆ
Image
4ನೇ ಭಾನುವಾರವೂ ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಡಬಲ್ ಡಿಜಿಟ್ ಕಲೆಕ್ಷನ್

ಇದನ್ನೂ ಓದಿ: ಸಾಂಗ್ ಆಗಿ ಬದಲಾಯ್ತು ಗಿಲ್ಲಿ ಹೇಳಿದ್ದ ‘ದೊಡ್ಡವ್ವ ದೋಸೆ ಕೊಡು’ ಡೈಲಾಗ್; ನೀವು ಕೇಳಿ

ಈ ಕಾರಣದಿಂದಲೇ ಉದ್ದೇಶಪೂರ್ವಕವಾಗಿ ನಿಯಮಗಳನ್ನು ಮುರಿದರು. ಈ ವಿಚಾರದಲ್ಲಿ ಸುದೀಪ್ ಅವರಿಗೆ ಬೇಸರ ಆಗಿದೆ. ಈ ಕಾರಣದಿಂದಲೇ ‘ಅಶ್ವಿನಿ ಅವರೇ ನೀವು ಕ್ಯಾಪ್ಟನ್​ಗೆ ಕೀಟಲೆ ಮಾಡಬೇಕು ಎಂದು ನಿರ್ಧರಿಸಿದಿರಿ ಓಕೆ. ಆದರೆ, ಬಿಗ್ ಬಾಸ್ ನಿಯಮಗಳನ್ನು ಮುರಿದಿದ್ದೀರಿ. ಹೀಗಾಗಿ, ಗಾರ್ಡನ್ ಏರಿಯಾದಲ್ಲಿರುವ ಎಲ್ಲಾ ಕ್ಯಾಮೆರಾಗಳಿಗೆ ನೀವು ಕ್ಷಮೆ ಕೇಳಲೇಬೇಕು’ ಎಂದು ಸುದೀಪ್ ಸೂಚಿಸಿದರು. ಅಂತೆಯೇ ಅಶ್ವಿನಿ ಗೌಡ ಅವರು ಹೋಗಿ ಎಲ್ಲಾ ಕ್ಯಾಮೆರಾಗಳ ಎದುರು ಕ್ಷಮೆ ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:04 pm, Mon, 27 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ