AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆ ಟಿಕೆಟ್ ವಿಚಾರದಲ್ಲಿ ಪ್ರತಾಪ್​ಗೆ ದ್ರೋಹ? ಬಿಗ್ ಬಾಸ್ ಘೋಷಣೆಯಲ್ಲೇ ಇತ್ತು ಸ್ಪಷ್ಟತೆ  

ಬಿಗ್ ಬಾಸ್ ಟಾಪ್​ 3ನ ಆಯ್ಕೆ ಮಾಡಿದರು. ಈ ಪೈಕಿ ಪ್ರತಾಪ್, ಸಂಗೀತಾ ಹಾಗೂ ನಮ್ರತಾ ಇದ್ದರು. ನಂತರ ಮನೆಯವರಿಂದಲೇ ವೋಟಿಂಗ್ ಮಾಡಿಸಲಾಯಿತು. ಈ ಪೈಕಿ ಸಂಗೀತಾ ಹೆಚ್ಚು ವೋಟ್ ಪಡೆದು ಫಿನಾಲೆ ಟಿಕೆಟ್ ಪಡೆದರು. ಈ ಬಗ್ಗೆ ಚರ್ಚೆ ಆಗುತ್ತಿದೆ.

ಫಿನಾಲೆ ಟಿಕೆಟ್ ವಿಚಾರದಲ್ಲಿ ಪ್ರತಾಪ್​ಗೆ ದ್ರೋಹ? ಬಿಗ್ ಬಾಸ್ ಘೋಷಣೆಯಲ್ಲೇ ಇತ್ತು ಸ್ಪಷ್ಟತೆ  
ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Jan 13, 2024 | 12:00 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಫಿನಾಲೆಗೆ ದಿನ ಗಣನೆ ಶುರುವಾಗಿದೆ. ಎಂಟು ಜನರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಈ ವಾರ ಸಂಗೀತಾ ಶೃಂಗೇರಿ ಅವರು ‘ಟಿಕೆಟ್​ ಟು ಫಿನಾಲೆ’ (Ticket To Finale) ಗೆದ್ದು ಫಿನಾಲೆ ಪ್ರವೇಶಿಸಿದ್ದಾರೆ. ಇನ್ನು ನಾಲ್ಕು ಸದಸ್ಯರು ಈ ಸ್ಥಾನಕ್ಕೆ ಪೈಪೋಟಿ ನಡೆಸಲಿದ್ದಾರೆ. ಈ ಮಧ್ಯೆ ಒಂದು ಚರ್ಚೆ ಶುರುವಾಗಿದೆ. ‘ಡ್ರೋನ್ ಪ್ರತಾಪ್ ಅವರಿಗೆ ದ್ರೋಹ ಆಗಿದೆ’ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಜೋರಾಗಿದೆ. ಆದರೆ, ಬಿಗ್ ಬಾಸ್ ಘೋಷಣೆಯಲ್ಲಿ ಸ್ಪಷ್ಟತೆ ಇತ್ತು.

ಮಂಗಳವಾರದ ಎಪಿಸೋಡ್​ನಲ್ಲಿ ಬಿಗ್ ಬಾಸ್ ಕಡೆಯಿಂದ ಒಂದು ಘೋಷಣೆ ಆಗಿತ್ತು. ‘ಫಿನಾಲೆ ವಾರಕ್ಕೆ ಕಾಲಿಡುವ ಮೊದಲ ಸ್ಪರ್ಧಿ ಯಾರು ಎನ್ನುವ ಪ್ರಶ್ನೆಗೆ ಈ ವಾರದ ಟಾಸ್ಕ್ ಮುಗಿಯುವ ವೇಳೆಗೆ ಉತ್ತರ ಸಿಗಲಿದೆ. ಈ ವಾರ ‘ಟಿಕೆಟ್​ ಟು ಫಿನಾಲೆ’ ಟಾಸ್ಕ್ ರೂಪಿಸಲಾಗಿದೆ. ಎಲ್ಲಾ ಸ್ಪರ್ಧಿಗಳಿಗೆ ವೈಯಕ್ತಿಕ ಟಾಸ್ಕ್​ ನೀಡಲಾಗುತ್ತದೆ. ಟಾಸ್ಕ್​ ಗೆದ್ದು ವಾರದ ಕೊನೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸದಸ್ಯರ ಪೈಕಿ ಒಬ್ಬರು ಫಿನಾಲೆ ಟಿಕೆಟ್ ಪಡೆಯುತ್ತಾರೆ’ ಎಂದು ಬಿಗ್ ಬಾಸ್ ಘೋಷಿಸಿದ್ದರು.

ಟಾಸ್ಕ್​ನಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದು ಡ್ರೋನ್ ಪ್ರತಾಪ್. ಆದರೆ, ಬಿಗ್ ಬಾಸ್ ಟಾಪ್​ 3ನ ಆಯ್ಕೆ ಮಾಡಿದರು. ಈ ಪೈಕಿ ಪ್ರತಾಪ್, ಸಂಗೀತಾ ಹಾಗೂ ನಮ್ರತಾ ಇದ್ದರು. ನಂತರ ಮನೆಯವರಿಂದಲೇ ವೋಟಿಂಗ್ ಮಾಡಿಸಲಾಯಿತು. ಈ ಪೈಕಿ ಸಂಗೀತಾ ಹೆಚ್ಚು ವೋಟ್ ಪಡೆದು ಫಿನಾಲೆ ಟಿಕೆಟ್ ಪಡೆದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ಡ್ರೋನ್ ಪ್ರತಾಪ್ ಬಳಿ ಕ್ಷಮೆ ಕೇಳಿದ ವಿನಯ್ ಗೌಡ

ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ. ‘ಮೊದಲು ಟಾಸ್ಕ್​ನಲ್ಲಿ ಹೆಚ್ಚು ಅಂಕ ಗಳಿಸಿದ ಒಬ್ಬ ಸದಸ್ಯನಿಗೆ ಫಿನಾಲೆ ಟಿಕೆಟ್ ಎಂದು ಹೇಳಲಾಗಿತ್ತು. ಆದರೆ, ಈಗ ವೋಟಿಂಗ್ ಮಾಡಿಸಿ ಟಿಕೆಟ್ ನೀಡಿದ್ದು ಎಷ್ಟು ಸರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಬಿಗ್ ಬಾಸ್ ಘೋಷಣೆಯಲ್ಲೇ ಸ್ಪಷ್ಟತೆ ಇತ್ತು. ‘ಟಾಸ್ಕ್​ ಗೆದ್ದು ವಾರದ ಕೊನೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸದಸ್ಯರ ಪೈಕಿ ಒಬ್ಬರು’ ಎಂದು ಸ್ಪಷ್ಟವಾಗಿ ಹೇಳಿದ್ದರು. ಅದರಂತೆ ಟಾಸ್ಕ್​ ನಡೆದಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ