AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆ ಟಿಕೆಟ್ ವಿಚಾರದಲ್ಲಿ ಪ್ರತಾಪ್​ಗೆ ದ್ರೋಹ? ಬಿಗ್ ಬಾಸ್ ಘೋಷಣೆಯಲ್ಲೇ ಇತ್ತು ಸ್ಪಷ್ಟತೆ  

ಬಿಗ್ ಬಾಸ್ ಟಾಪ್​ 3ನ ಆಯ್ಕೆ ಮಾಡಿದರು. ಈ ಪೈಕಿ ಪ್ರತಾಪ್, ಸಂಗೀತಾ ಹಾಗೂ ನಮ್ರತಾ ಇದ್ದರು. ನಂತರ ಮನೆಯವರಿಂದಲೇ ವೋಟಿಂಗ್ ಮಾಡಿಸಲಾಯಿತು. ಈ ಪೈಕಿ ಸಂಗೀತಾ ಹೆಚ್ಚು ವೋಟ್ ಪಡೆದು ಫಿನಾಲೆ ಟಿಕೆಟ್ ಪಡೆದರು. ಈ ಬಗ್ಗೆ ಚರ್ಚೆ ಆಗುತ್ತಿದೆ.

ಫಿನಾಲೆ ಟಿಕೆಟ್ ವಿಚಾರದಲ್ಲಿ ಪ್ರತಾಪ್​ಗೆ ದ್ರೋಹ? ಬಿಗ್ ಬಾಸ್ ಘೋಷಣೆಯಲ್ಲೇ ಇತ್ತು ಸ್ಪಷ್ಟತೆ  
ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Jan 13, 2024 | 12:00 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಫಿನಾಲೆಗೆ ದಿನ ಗಣನೆ ಶುರುವಾಗಿದೆ. ಎಂಟು ಜನರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಈ ವಾರ ಸಂಗೀತಾ ಶೃಂಗೇರಿ ಅವರು ‘ಟಿಕೆಟ್​ ಟು ಫಿನಾಲೆ’ (Ticket To Finale) ಗೆದ್ದು ಫಿನಾಲೆ ಪ್ರವೇಶಿಸಿದ್ದಾರೆ. ಇನ್ನು ನಾಲ್ಕು ಸದಸ್ಯರು ಈ ಸ್ಥಾನಕ್ಕೆ ಪೈಪೋಟಿ ನಡೆಸಲಿದ್ದಾರೆ. ಈ ಮಧ್ಯೆ ಒಂದು ಚರ್ಚೆ ಶುರುವಾಗಿದೆ. ‘ಡ್ರೋನ್ ಪ್ರತಾಪ್ ಅವರಿಗೆ ದ್ರೋಹ ಆಗಿದೆ’ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಜೋರಾಗಿದೆ. ಆದರೆ, ಬಿಗ್ ಬಾಸ್ ಘೋಷಣೆಯಲ್ಲಿ ಸ್ಪಷ್ಟತೆ ಇತ್ತು.

ಮಂಗಳವಾರದ ಎಪಿಸೋಡ್​ನಲ್ಲಿ ಬಿಗ್ ಬಾಸ್ ಕಡೆಯಿಂದ ಒಂದು ಘೋಷಣೆ ಆಗಿತ್ತು. ‘ಫಿನಾಲೆ ವಾರಕ್ಕೆ ಕಾಲಿಡುವ ಮೊದಲ ಸ್ಪರ್ಧಿ ಯಾರು ಎನ್ನುವ ಪ್ರಶ್ನೆಗೆ ಈ ವಾರದ ಟಾಸ್ಕ್ ಮುಗಿಯುವ ವೇಳೆಗೆ ಉತ್ತರ ಸಿಗಲಿದೆ. ಈ ವಾರ ‘ಟಿಕೆಟ್​ ಟು ಫಿನಾಲೆ’ ಟಾಸ್ಕ್ ರೂಪಿಸಲಾಗಿದೆ. ಎಲ್ಲಾ ಸ್ಪರ್ಧಿಗಳಿಗೆ ವೈಯಕ್ತಿಕ ಟಾಸ್ಕ್​ ನೀಡಲಾಗುತ್ತದೆ. ಟಾಸ್ಕ್​ ಗೆದ್ದು ವಾರದ ಕೊನೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸದಸ್ಯರ ಪೈಕಿ ಒಬ್ಬರು ಫಿನಾಲೆ ಟಿಕೆಟ್ ಪಡೆಯುತ್ತಾರೆ’ ಎಂದು ಬಿಗ್ ಬಾಸ್ ಘೋಷಿಸಿದ್ದರು.

ಟಾಸ್ಕ್​ನಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದು ಡ್ರೋನ್ ಪ್ರತಾಪ್. ಆದರೆ, ಬಿಗ್ ಬಾಸ್ ಟಾಪ್​ 3ನ ಆಯ್ಕೆ ಮಾಡಿದರು. ಈ ಪೈಕಿ ಪ್ರತಾಪ್, ಸಂಗೀತಾ ಹಾಗೂ ನಮ್ರತಾ ಇದ್ದರು. ನಂತರ ಮನೆಯವರಿಂದಲೇ ವೋಟಿಂಗ್ ಮಾಡಿಸಲಾಯಿತು. ಈ ಪೈಕಿ ಸಂಗೀತಾ ಹೆಚ್ಚು ವೋಟ್ ಪಡೆದು ಫಿನಾಲೆ ಟಿಕೆಟ್ ಪಡೆದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ಡ್ರೋನ್ ಪ್ರತಾಪ್ ಬಳಿ ಕ್ಷಮೆ ಕೇಳಿದ ವಿನಯ್ ಗೌಡ

ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ. ‘ಮೊದಲು ಟಾಸ್ಕ್​ನಲ್ಲಿ ಹೆಚ್ಚು ಅಂಕ ಗಳಿಸಿದ ಒಬ್ಬ ಸದಸ್ಯನಿಗೆ ಫಿನಾಲೆ ಟಿಕೆಟ್ ಎಂದು ಹೇಳಲಾಗಿತ್ತು. ಆದರೆ, ಈಗ ವೋಟಿಂಗ್ ಮಾಡಿಸಿ ಟಿಕೆಟ್ ನೀಡಿದ್ದು ಎಷ್ಟು ಸರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಬಿಗ್ ಬಾಸ್ ಘೋಷಣೆಯಲ್ಲೇ ಸ್ಪಷ್ಟತೆ ಇತ್ತು. ‘ಟಾಸ್ಕ್​ ಗೆದ್ದು ವಾರದ ಕೊನೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸದಸ್ಯರ ಪೈಕಿ ಒಬ್ಬರು’ ಎಂದು ಸ್ಪಷ್ಟವಾಗಿ ಹೇಳಿದ್ದರು. ಅದರಂತೆ ಟಾಸ್ಕ್​ ನಡೆದಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ