AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆ ಟಿಕೆಟ್ ವಿಚಾರದಲ್ಲಿ ಪ್ರತಾಪ್​ಗೆ ದ್ರೋಹ? ಬಿಗ್ ಬಾಸ್ ಘೋಷಣೆಯಲ್ಲೇ ಇತ್ತು ಸ್ಪಷ್ಟತೆ  

ಬಿಗ್ ಬಾಸ್ ಟಾಪ್​ 3ನ ಆಯ್ಕೆ ಮಾಡಿದರು. ಈ ಪೈಕಿ ಪ್ರತಾಪ್, ಸಂಗೀತಾ ಹಾಗೂ ನಮ್ರತಾ ಇದ್ದರು. ನಂತರ ಮನೆಯವರಿಂದಲೇ ವೋಟಿಂಗ್ ಮಾಡಿಸಲಾಯಿತು. ಈ ಪೈಕಿ ಸಂಗೀತಾ ಹೆಚ್ಚು ವೋಟ್ ಪಡೆದು ಫಿನಾಲೆ ಟಿಕೆಟ್ ಪಡೆದರು. ಈ ಬಗ್ಗೆ ಚರ್ಚೆ ಆಗುತ್ತಿದೆ.

ಫಿನಾಲೆ ಟಿಕೆಟ್ ವಿಚಾರದಲ್ಲಿ ಪ್ರತಾಪ್​ಗೆ ದ್ರೋಹ? ಬಿಗ್ ಬಾಸ್ ಘೋಷಣೆಯಲ್ಲೇ ಇತ್ತು ಸ್ಪಷ್ಟತೆ  
ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Jan 13, 2024 | 12:00 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಫಿನಾಲೆಗೆ ದಿನ ಗಣನೆ ಶುರುವಾಗಿದೆ. ಎಂಟು ಜನರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಈ ವಾರ ಸಂಗೀತಾ ಶೃಂಗೇರಿ ಅವರು ‘ಟಿಕೆಟ್​ ಟು ಫಿನಾಲೆ’ (Ticket To Finale) ಗೆದ್ದು ಫಿನಾಲೆ ಪ್ರವೇಶಿಸಿದ್ದಾರೆ. ಇನ್ನು ನಾಲ್ಕು ಸದಸ್ಯರು ಈ ಸ್ಥಾನಕ್ಕೆ ಪೈಪೋಟಿ ನಡೆಸಲಿದ್ದಾರೆ. ಈ ಮಧ್ಯೆ ಒಂದು ಚರ್ಚೆ ಶುರುವಾಗಿದೆ. ‘ಡ್ರೋನ್ ಪ್ರತಾಪ್ ಅವರಿಗೆ ದ್ರೋಹ ಆಗಿದೆ’ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಜೋರಾಗಿದೆ. ಆದರೆ, ಬಿಗ್ ಬಾಸ್ ಘೋಷಣೆಯಲ್ಲಿ ಸ್ಪಷ್ಟತೆ ಇತ್ತು.

ಮಂಗಳವಾರದ ಎಪಿಸೋಡ್​ನಲ್ಲಿ ಬಿಗ್ ಬಾಸ್ ಕಡೆಯಿಂದ ಒಂದು ಘೋಷಣೆ ಆಗಿತ್ತು. ‘ಫಿನಾಲೆ ವಾರಕ್ಕೆ ಕಾಲಿಡುವ ಮೊದಲ ಸ್ಪರ್ಧಿ ಯಾರು ಎನ್ನುವ ಪ್ರಶ್ನೆಗೆ ಈ ವಾರದ ಟಾಸ್ಕ್ ಮುಗಿಯುವ ವೇಳೆಗೆ ಉತ್ತರ ಸಿಗಲಿದೆ. ಈ ವಾರ ‘ಟಿಕೆಟ್​ ಟು ಫಿನಾಲೆ’ ಟಾಸ್ಕ್ ರೂಪಿಸಲಾಗಿದೆ. ಎಲ್ಲಾ ಸ್ಪರ್ಧಿಗಳಿಗೆ ವೈಯಕ್ತಿಕ ಟಾಸ್ಕ್​ ನೀಡಲಾಗುತ್ತದೆ. ಟಾಸ್ಕ್​ ಗೆದ್ದು ವಾರದ ಕೊನೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸದಸ್ಯರ ಪೈಕಿ ಒಬ್ಬರು ಫಿನಾಲೆ ಟಿಕೆಟ್ ಪಡೆಯುತ್ತಾರೆ’ ಎಂದು ಬಿಗ್ ಬಾಸ್ ಘೋಷಿಸಿದ್ದರು.

ಟಾಸ್ಕ್​ನಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದು ಡ್ರೋನ್ ಪ್ರತಾಪ್. ಆದರೆ, ಬಿಗ್ ಬಾಸ್ ಟಾಪ್​ 3ನ ಆಯ್ಕೆ ಮಾಡಿದರು. ಈ ಪೈಕಿ ಪ್ರತಾಪ್, ಸಂಗೀತಾ ಹಾಗೂ ನಮ್ರತಾ ಇದ್ದರು. ನಂತರ ಮನೆಯವರಿಂದಲೇ ವೋಟಿಂಗ್ ಮಾಡಿಸಲಾಯಿತು. ಈ ಪೈಕಿ ಸಂಗೀತಾ ಹೆಚ್ಚು ವೋಟ್ ಪಡೆದು ಫಿನಾಲೆ ಟಿಕೆಟ್ ಪಡೆದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ಡ್ರೋನ್ ಪ್ರತಾಪ್ ಬಳಿ ಕ್ಷಮೆ ಕೇಳಿದ ವಿನಯ್ ಗೌಡ

ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ. ‘ಮೊದಲು ಟಾಸ್ಕ್​ನಲ್ಲಿ ಹೆಚ್ಚು ಅಂಕ ಗಳಿಸಿದ ಒಬ್ಬ ಸದಸ್ಯನಿಗೆ ಫಿನಾಲೆ ಟಿಕೆಟ್ ಎಂದು ಹೇಳಲಾಗಿತ್ತು. ಆದರೆ, ಈಗ ವೋಟಿಂಗ್ ಮಾಡಿಸಿ ಟಿಕೆಟ್ ನೀಡಿದ್ದು ಎಷ್ಟು ಸರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಬಿಗ್ ಬಾಸ್ ಘೋಷಣೆಯಲ್ಲೇ ಸ್ಪಷ್ಟತೆ ಇತ್ತು. ‘ಟಾಸ್ಕ್​ ಗೆದ್ದು ವಾರದ ಕೊನೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸದಸ್ಯರ ಪೈಕಿ ಒಬ್ಬರು’ ಎಂದು ಸ್ಪಷ್ಟವಾಗಿ ಹೇಳಿದ್ದರು. ಅದರಂತೆ ಟಾಸ್ಕ್​ ನಡೆದಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ