AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆ ಟಿಕೆಟ್ ವಿಚಾರದಲ್ಲಿ ಪ್ರತಾಪ್​ಗೆ ದ್ರೋಹ? ಬಿಗ್ ಬಾಸ್ ಘೋಷಣೆಯಲ್ಲೇ ಇತ್ತು ಸ್ಪಷ್ಟತೆ  

ಬಿಗ್ ಬಾಸ್ ಟಾಪ್​ 3ನ ಆಯ್ಕೆ ಮಾಡಿದರು. ಈ ಪೈಕಿ ಪ್ರತಾಪ್, ಸಂಗೀತಾ ಹಾಗೂ ನಮ್ರತಾ ಇದ್ದರು. ನಂತರ ಮನೆಯವರಿಂದಲೇ ವೋಟಿಂಗ್ ಮಾಡಿಸಲಾಯಿತು. ಈ ಪೈಕಿ ಸಂಗೀತಾ ಹೆಚ್ಚು ವೋಟ್ ಪಡೆದು ಫಿನಾಲೆ ಟಿಕೆಟ್ ಪಡೆದರು. ಈ ಬಗ್ಗೆ ಚರ್ಚೆ ಆಗುತ್ತಿದೆ.

ಫಿನಾಲೆ ಟಿಕೆಟ್ ವಿಚಾರದಲ್ಲಿ ಪ್ರತಾಪ್​ಗೆ ದ್ರೋಹ? ಬಿಗ್ ಬಾಸ್ ಘೋಷಣೆಯಲ್ಲೇ ಇತ್ತು ಸ್ಪಷ್ಟತೆ  
ಪ್ರತಾಪ್
Follow us
ರಾಜೇಶ್ ದುಗ್ಗುಮನೆ
|

Updated on: Jan 13, 2024 | 12:00 PM

‘ಬಿಗ್ ಬಾಸ್ ಕನ್ನಡ ಸೀಸನ್ 10’ ಫಿನಾಲೆಗೆ ದಿನ ಗಣನೆ ಶುರುವಾಗಿದೆ. ಎಂಟು ಜನರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಈ ವಾರ ಸಂಗೀತಾ ಶೃಂಗೇರಿ ಅವರು ‘ಟಿಕೆಟ್​ ಟು ಫಿನಾಲೆ’ (Ticket To Finale) ಗೆದ್ದು ಫಿನಾಲೆ ಪ್ರವೇಶಿಸಿದ್ದಾರೆ. ಇನ್ನು ನಾಲ್ಕು ಸದಸ್ಯರು ಈ ಸ್ಥಾನಕ್ಕೆ ಪೈಪೋಟಿ ನಡೆಸಲಿದ್ದಾರೆ. ಈ ಮಧ್ಯೆ ಒಂದು ಚರ್ಚೆ ಶುರುವಾಗಿದೆ. ‘ಡ್ರೋನ್ ಪ್ರತಾಪ್ ಅವರಿಗೆ ದ್ರೋಹ ಆಗಿದೆ’ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಜೋರಾಗಿದೆ. ಆದರೆ, ಬಿಗ್ ಬಾಸ್ ಘೋಷಣೆಯಲ್ಲಿ ಸ್ಪಷ್ಟತೆ ಇತ್ತು.

ಮಂಗಳವಾರದ ಎಪಿಸೋಡ್​ನಲ್ಲಿ ಬಿಗ್ ಬಾಸ್ ಕಡೆಯಿಂದ ಒಂದು ಘೋಷಣೆ ಆಗಿತ್ತು. ‘ಫಿನಾಲೆ ವಾರಕ್ಕೆ ಕಾಲಿಡುವ ಮೊದಲ ಸ್ಪರ್ಧಿ ಯಾರು ಎನ್ನುವ ಪ್ರಶ್ನೆಗೆ ಈ ವಾರದ ಟಾಸ್ಕ್ ಮುಗಿಯುವ ವೇಳೆಗೆ ಉತ್ತರ ಸಿಗಲಿದೆ. ಈ ವಾರ ‘ಟಿಕೆಟ್​ ಟು ಫಿನಾಲೆ’ ಟಾಸ್ಕ್ ರೂಪಿಸಲಾಗಿದೆ. ಎಲ್ಲಾ ಸ್ಪರ್ಧಿಗಳಿಗೆ ವೈಯಕ್ತಿಕ ಟಾಸ್ಕ್​ ನೀಡಲಾಗುತ್ತದೆ. ಟಾಸ್ಕ್​ ಗೆದ್ದು ವಾರದ ಕೊನೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸದಸ್ಯರ ಪೈಕಿ ಒಬ್ಬರು ಫಿನಾಲೆ ಟಿಕೆಟ್ ಪಡೆಯುತ್ತಾರೆ’ ಎಂದು ಬಿಗ್ ಬಾಸ್ ಘೋಷಿಸಿದ್ದರು.

ಟಾಸ್ಕ್​ನಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದು ಡ್ರೋನ್ ಪ್ರತಾಪ್. ಆದರೆ, ಬಿಗ್ ಬಾಸ್ ಟಾಪ್​ 3ನ ಆಯ್ಕೆ ಮಾಡಿದರು. ಈ ಪೈಕಿ ಪ್ರತಾಪ್, ಸಂಗೀತಾ ಹಾಗೂ ನಮ್ರತಾ ಇದ್ದರು. ನಂತರ ಮನೆಯವರಿಂದಲೇ ವೋಟಿಂಗ್ ಮಾಡಿಸಲಾಯಿತು. ಈ ಪೈಕಿ ಸಂಗೀತಾ ಹೆಚ್ಚು ವೋಟ್ ಪಡೆದು ಫಿನಾಲೆ ಟಿಕೆಟ್ ಪಡೆದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ಡ್ರೋನ್ ಪ್ರತಾಪ್ ಬಳಿ ಕ್ಷಮೆ ಕೇಳಿದ ವಿನಯ್ ಗೌಡ

ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ. ‘ಮೊದಲು ಟಾಸ್ಕ್​ನಲ್ಲಿ ಹೆಚ್ಚು ಅಂಕ ಗಳಿಸಿದ ಒಬ್ಬ ಸದಸ್ಯನಿಗೆ ಫಿನಾಲೆ ಟಿಕೆಟ್ ಎಂದು ಹೇಳಲಾಗಿತ್ತು. ಆದರೆ, ಈಗ ವೋಟಿಂಗ್ ಮಾಡಿಸಿ ಟಿಕೆಟ್ ನೀಡಿದ್ದು ಎಷ್ಟು ಸರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಬಿಗ್ ಬಾಸ್ ಘೋಷಣೆಯಲ್ಲೇ ಸ್ಪಷ್ಟತೆ ಇತ್ತು. ‘ಟಾಸ್ಕ್​ ಗೆದ್ದು ವಾರದ ಕೊನೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸದಸ್ಯರ ಪೈಕಿ ಒಬ್ಬರು’ ಎಂದು ಸ್ಪಷ್ಟವಾಗಿ ಹೇಳಿದ್ದರು. ಅದರಂತೆ ಟಾಸ್ಕ್​ ನಡೆದಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!