AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿನಾಲೆ ಟಿಕೆಟ್ ವಿಚಾರದಲ್ಲಿ ಪ್ರತಾಪ್​ಗೆ ದ್ರೋಹ? ಬಿಗ್ ಬಾಸ್ ಘೋಷಣೆಯಲ್ಲೇ ಇತ್ತು ಸ್ಪಷ್ಟತೆ  

ಬಿಗ್ ಬಾಸ್ ಟಾಪ್​ 3ನ ಆಯ್ಕೆ ಮಾಡಿದರು. ಈ ಪೈಕಿ ಪ್ರತಾಪ್, ಸಂಗೀತಾ ಹಾಗೂ ನಮ್ರತಾ ಇದ್ದರು. ನಂತರ ಮನೆಯವರಿಂದಲೇ ವೋಟಿಂಗ್ ಮಾಡಿಸಲಾಯಿತು. ಈ ಪೈಕಿ ಸಂಗೀತಾ ಹೆಚ್ಚು ವೋಟ್ ಪಡೆದು ಫಿನಾಲೆ ಟಿಕೆಟ್ ಪಡೆದರು. ಈ ಬಗ್ಗೆ ಚರ್ಚೆ ಆಗುತ್ತಿದೆ.

ಫಿನಾಲೆ ಟಿಕೆಟ್ ವಿಚಾರದಲ್ಲಿ ಪ್ರತಾಪ್​ಗೆ ದ್ರೋಹ? ಬಿಗ್ ಬಾಸ್ ಘೋಷಣೆಯಲ್ಲೇ ಇತ್ತು ಸ್ಪಷ್ಟತೆ  
ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Jan 13, 2024 | 12:00 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಫಿನಾಲೆಗೆ ದಿನ ಗಣನೆ ಶುರುವಾಗಿದೆ. ಎಂಟು ಜನರ ಮಧ್ಯೆ ಸ್ಪರ್ಧೆ ನಡೆಯುತ್ತಿದೆ. ಈ ವಾರ ಸಂಗೀತಾ ಶೃಂಗೇರಿ ಅವರು ‘ಟಿಕೆಟ್​ ಟು ಫಿನಾಲೆ’ (Ticket To Finale) ಗೆದ್ದು ಫಿನಾಲೆ ಪ್ರವೇಶಿಸಿದ್ದಾರೆ. ಇನ್ನು ನಾಲ್ಕು ಸದಸ್ಯರು ಈ ಸ್ಥಾನಕ್ಕೆ ಪೈಪೋಟಿ ನಡೆಸಲಿದ್ದಾರೆ. ಈ ಮಧ್ಯೆ ಒಂದು ಚರ್ಚೆ ಶುರುವಾಗಿದೆ. ‘ಡ್ರೋನ್ ಪ್ರತಾಪ್ ಅವರಿಗೆ ದ್ರೋಹ ಆಗಿದೆ’ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಜೋರಾಗಿದೆ. ಆದರೆ, ಬಿಗ್ ಬಾಸ್ ಘೋಷಣೆಯಲ್ಲಿ ಸ್ಪಷ್ಟತೆ ಇತ್ತು.

ಮಂಗಳವಾರದ ಎಪಿಸೋಡ್​ನಲ್ಲಿ ಬಿಗ್ ಬಾಸ್ ಕಡೆಯಿಂದ ಒಂದು ಘೋಷಣೆ ಆಗಿತ್ತು. ‘ಫಿನಾಲೆ ವಾರಕ್ಕೆ ಕಾಲಿಡುವ ಮೊದಲ ಸ್ಪರ್ಧಿ ಯಾರು ಎನ್ನುವ ಪ್ರಶ್ನೆಗೆ ಈ ವಾರದ ಟಾಸ್ಕ್ ಮುಗಿಯುವ ವೇಳೆಗೆ ಉತ್ತರ ಸಿಗಲಿದೆ. ಈ ವಾರ ‘ಟಿಕೆಟ್​ ಟು ಫಿನಾಲೆ’ ಟಾಸ್ಕ್ ರೂಪಿಸಲಾಗಿದೆ. ಎಲ್ಲಾ ಸ್ಪರ್ಧಿಗಳಿಗೆ ವೈಯಕ್ತಿಕ ಟಾಸ್ಕ್​ ನೀಡಲಾಗುತ್ತದೆ. ಟಾಸ್ಕ್​ ಗೆದ್ದು ವಾರದ ಕೊನೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸದಸ್ಯರ ಪೈಕಿ ಒಬ್ಬರು ಫಿನಾಲೆ ಟಿಕೆಟ್ ಪಡೆಯುತ್ತಾರೆ’ ಎಂದು ಬಿಗ್ ಬಾಸ್ ಘೋಷಿಸಿದ್ದರು.

ಟಾಸ್ಕ್​ನಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದು ಡ್ರೋನ್ ಪ್ರತಾಪ್. ಆದರೆ, ಬಿಗ್ ಬಾಸ್ ಟಾಪ್​ 3ನ ಆಯ್ಕೆ ಮಾಡಿದರು. ಈ ಪೈಕಿ ಪ್ರತಾಪ್, ಸಂಗೀತಾ ಹಾಗೂ ನಮ್ರತಾ ಇದ್ದರು. ನಂತರ ಮನೆಯವರಿಂದಲೇ ವೋಟಿಂಗ್ ಮಾಡಿಸಲಾಯಿತು. ಈ ಪೈಕಿ ಸಂಗೀತಾ ಹೆಚ್ಚು ವೋಟ್ ಪಡೆದು ಫಿನಾಲೆ ಟಿಕೆಟ್ ಪಡೆದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಕೊನೆಗೂ ಡ್ರೋನ್ ಪ್ರತಾಪ್ ಬಳಿ ಕ್ಷಮೆ ಕೇಳಿದ ವಿನಯ್ ಗೌಡ

ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ. ‘ಮೊದಲು ಟಾಸ್ಕ್​ನಲ್ಲಿ ಹೆಚ್ಚು ಅಂಕ ಗಳಿಸಿದ ಒಬ್ಬ ಸದಸ್ಯನಿಗೆ ಫಿನಾಲೆ ಟಿಕೆಟ್ ಎಂದು ಹೇಳಲಾಗಿತ್ತು. ಆದರೆ, ಈಗ ವೋಟಿಂಗ್ ಮಾಡಿಸಿ ಟಿಕೆಟ್ ನೀಡಿದ್ದು ಎಷ್ಟು ಸರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಬಿಗ್ ಬಾಸ್ ಘೋಷಣೆಯಲ್ಲೇ ಸ್ಪಷ್ಟತೆ ಇತ್ತು. ‘ಟಾಸ್ಕ್​ ಗೆದ್ದು ವಾರದ ಕೊನೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸದಸ್ಯರ ಪೈಕಿ ಒಬ್ಬರು’ ಎಂದು ಸ್ಪಷ್ಟವಾಗಿ ಹೇಳಿದ್ದರು. ಅದರಂತೆ ಟಾಸ್ಕ್​ ನಡೆದಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ