AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಗಿನ ವಿಚಾರ ತಿಳಿದುಕೊಳ್ಳಲು ಬಟ್ಟೆಯಲ್ಲಿ ಕೋಡ್​ವರ್ಡ್​; ಶಾಕಿಂಗ್ ವಿಚಾರ ಹೇಳಿದ ಸುದೀಪ್

Bigg Boss: ಬಿಗ್ ಬಾಸ್ ಮನೆ ನಿಯಮ ಉಲ್ಲಂಘನೆ ಆಗಿದೆ. ಕೆಲವು ಸ್ಪರ್ಧಿಗಳು ಹೊರಗಿನಿಂದ ಕೋಡ್‌ವರ್ಡ್‌ಗಳನ್ನು ಬಳಸಿ ಮಾಹಿತಿ ಪಡೆಯುತ್ತಿದ್ದಾರೆಂದು ಸುದೀಪ್ ಆಘಾತಕಾರಿ ವಿಷಯ ಬಹಿರಂಗಪಡಿಸಿದ್ದಾರೆ. ಕೆಂಪು ಬಟ್ಟೆ ನೆಗೆಟಿವ್, ಹಸಿರು ಬಟ್ಟೆ ಪಾಸಿಟಿವ್ ಎಂಬ ಸಂಕೇತಗಳನ್ನು ಬಳಸಲಾಗುತ್ತಿದೆ. ಇದು ಶಾಕಿಂಗ್ ಎನಿಸಿದೆ.

ಹೊರಗಿನ ವಿಚಾರ ತಿಳಿದುಕೊಳ್ಳಲು ಬಟ್ಟೆಯಲ್ಲಿ ಕೋಡ್​ವರ್ಡ್​; ಶಾಕಿಂಗ್ ವಿಚಾರ ಹೇಳಿದ ಸುದೀಪ್
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 03, 2025 | 8:27 AM

Share

ಬಿಗ್ ಬಾಸ್ (Bigg Boss) ಮನೆ ಒಳಗೆ ಪ್ರವೇಶ ಪಡೆದ ಬಳಿಕ ಅಲ್ಲಿ ಹೊರ ಜಗತ್ತಿನ ಸಂಪರ್ಕ ಇರೋದೇ ಇಲ್ಲ. ಏನೇ ಮಾಡಿದರೂ ಮನೆಯವರನ್ನು ಸಂಪರ್ಕಿಸಲು ಸಾಧ್ಯವಾಗುವುದೇ ಇಲ್ಲ. ಆದರೆ, ಈ ಬಾರಿ ಕೆಲವು ಸ್ಪರ್ಧಿಗಳು ತಲೆ ಉಪಯೋಗಿಸಿ ಹೊರಗಿನಿಂದ ಕೋಡ್​​ವರ್ಡ್​ ಸೆಟ್ ಮಾಡಿಕೊಂಡು ಬಂದಿದ್ದಾರಂತೆ. ಈ ವಿಚಾರವನ್ನು ಸುದೀಪ್ ಹೇಳಿದ್ದು ಅನೇಕರಿಗೆ ಶಾಕ್ ಆಗಿದೆ ಎಂದರೂ ತಪ್ಪಾಗಲಾರದು.

ಬಿಗ್ ಬಾಸ್ ಮನೆಗೆ ಹೋದಮೇಲೆ ಹೊರಗಿನ ಪ್ರಪಂಚದಲ್ಲಿ ಏನಾಗುತ್ತಿದೆ ಎಂಬುದರ ಯಾವುದೇ ಮಾಹಿತಿ ಇರುವುದಿಲ್ಲ. ಇಡೀ ಸೀಸನ್​ನಲ್ಲಿ ಒಮ್ಮೆ ಅಥವಾ ಎರಡು ಬಾರಿಯೋ ಸ್ಪರ್ಧಿಗಳಿಗೆ ಮನೆಯವರ ಜೊತೆ ಮಾತನಾಡಲು ಅವಕಾಶ ಸಿಗುತ್ತದೆ. ಒಂದೊಮ್ಮೆ ಹೊರಗೆ ನೆಗೆಟಿವ್ ಹೋಗುತ್ತಿದ್ದರೂ ಆ ಮಾಹಿತಿ ಸ್ಪರ್ಧಿಗಳಿಗೆ ಸಿಗೋದೇ ಇಲ್ಲ. ಈ ಕಾರಣದಿಂದಲೇ ಕೆಲವರು ದಾರಿ ತಪ್ಪೋದು. ಆದರೆ, ಈ ಬಾರಿ ಸ್ಪರ್ಧಿಗಳು ಮನೆಯ ಹೊರಗೆ ಕೋಡ್ ವರ್ಡ್ ಮಾಡಿಟ್ಟುಕೊಂಡು ಬಂದಿದ್ದಾರೆ.

ಇದನ್ನೂ ಓದಿ
Image
ಬಾಲಿವುಡ್ ಖ್ಯಾತ ನಟ ಪಂಕಜ್ ತ್ರಿಪಾಠಿಗೆ ಮಾತೃ ವಿಯೋಗ
Image
‘ಹೀಗೆ ಮುಂದುವರಿದ್ರೆ ಜನ ಬಿಗ್ ಬಾಸ್ ನೋಡೋದು ಬಿಡ್ತಾರೆ’; ಸುದೀಪ್
Image
ಬಿಗ್ ಬಾಸ್ ಮನೆಯಿಂದ ಮಲ್ಲಮ್ಮ ಹೊರ ಹೋಗಲು ಕಾರಣವಾಯ್ತು ಆ ಒಂದು ವಂದಂತಿ?
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

‘ಹೊರಗೆ ಏನಾಗ್ತಿದೆ ಎಂಬ ವಿಚಾರವನ್ನು ಗುಟ್ಟಾಗಿ ತಿಳಿಸಲಾಗುತ್ತಿದೆ ಎಂಬ ವಿಷಯ ನಮಗೆ ಗೊತ್ತಾಗಿದೆ. ನಮಗೆ ಬಹಳ ಚೆನ್ನಾಗಿದೆ ಗೊತ್ತಿದೆ. ಡಿಸೈನರ್​ ಜೊತೆ ಈ ರೀತಿ ಅಂಡರ್​​ಸ್ಟ್ತಾಂಡಿಂಗ್ ಇದೆ ಅಂತ ಗೊತ್ತಿರಲಿಲ್ಲ. ರೆಡ್ ಬಟ್ಟೆ ಕಳುಹಿಸಿದ್ದೀವಿ ಎಂದರೆ, ನಿಮ್ಮ ಬಗ್ಗೆ ಹೊರಗೆ ನೆಗೆಟಿವ್ ಚರ್ಚೆ ಆಗ್ತಿದೆ ಎಂದರ್ಥ. ಹಸಿರು ಬಣ್ಣದ ಬಟ್ಟೆ ಕಳುಹಿಸಿದ್ರೆ ಪಾಸಿಟಿವ್ ಎಂದರ್ಥವಂತೆ’ ಎಂದರು ಸುದೀಪ್.

‘ಕೋಡ್​ಗಳನ್ನು ಡೀಕೋಡ್ ಮಾಡಲು ಎತ್ತಿದ ಕೈ ನಮ್ಮದು. ಈ ವಿಚಾರ ನಮ್ಮವರೆಗೆ ಬರಲ್ಲ ಎಂದು ಅನೇಕರು ಅಂದುಕೊಂಡಿರುತ್ತಾರೆ. ಆದರೆ, ಈ ರೀತಿಯ ವಿಚಾರ ಬಂದುಬಿಡ್ತದೆ. ಬಟ್ಟೆ ಬಟ್ಟೆಯಾಗಿರಬೇಕು. ಕೋಡ್​ವರ್ಡ್ ಆಗಬಾರದು. ಇದರಿಂದ ನೀವು ಹೊರ ಹೋಗುವಂತೆ ಆಗಬಾರದು’ ಎಂದರು ಸುದೀಪ್. ಇದನ್ನು ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ.

ಇದನ್ನೂ ಓದಿ: ‘ಹೀಗೆ ಮುಂದುವರಿದ್ರೆ ಜನ ಬಿಗ್ ಬಾಸ್ ನೋಡೋದು ಬಿಡ್ತಾರೆ’; ಕೆಲವರ ಬಗ್ಗೆ ಸುದೀಪ್ ಅಸಮಾಧಾನ

‘ಇಷ್ಟು ವರ್ಷಗಳಲ್ಲಿ ಈ ರೀತಿ ಯಾರೂ ಮಾಡಿರಲಿಲ್ಲ. ಆದರೆ, ನಮಗೆ ಈಗ ಈ ವಿಚಾರ ತಿಳಿದು ಬಂದಿದೆ’ ಎಂದು ಸುದೀಪ್ ಅವರು ಹೇಳಿದರು. ಇದನ್ನು ಮಾಡಿದ್ದು ಯಾರು ಇರಬಹುದು ಎಂಬ ಕತೂಹಲ ಅನೇಕರಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:05 am, Mon, 3 November 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ